ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೆರಾಯಸ್ವಾಮಿ ಬ್ರಹ್ಮ ರಥೋತ್ಸವ

Date:

ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ನಡೆದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಐದು ದಿನಗಳ ಕಾಲ ವಿವಿಧ ಕೈಂಕರ್ಯಗಳಿಂದ ನಡೆಯುವ ಜಾತ್ರೆಯಲ್ಲಿ ಸ್ವಸ್ತಿ ವಾಚನ, ಮೃತಿಕಾ ಸಂಗ್ರಹಣ, ಅಂಕುರಾರ್ಪಣ ಹಾಗೂ ಧ್ವಜಾರೋಹಣದೊಂದಿಗೆ ಜಾತ್ರೆಯಲ್ಲಿ ಕಳೆದ ಶನಿವಾರ ಸಂಜೆ ಗರುಡೋತ್ಸವ ನಡೆದಿತ್ತು. ಶ್ರೀರಾಮನವಮಿ ಪ್ರಯುಕ್ತ ಮಂಟಪ ಪಡಿ ಪೂಜೆ ಕಾರ್ಯ ನಡೆದು ನಂತರ ಗಜೇಂದ್ರ ಮೋಕ್ಷ ಹಾಗೂ ಸೀತಾ ಕಲ್ಯಾಣೋತ್ಸವ ವಿಧಿವತ್ತಾಗಿ ಜರುಗಿತ್ತು.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಲ್ಲುವ ಅಭಿಜಿನ್ ಮೂಹೂರ್ತದಲ್ಲಿ ಬೇಟೆರಾಯಸ್ವಾಮಿಯ ಬ್ರಹ್ಮ ರಥೋತ್ಸವ ನಂತರ ಅನ್ನ ಸಂತರ್ಪಣೆ ಭಕ್ತಾದಿಗಳ ನೆರವಿನಿಂದ ಸಮಿತಿ ಆಯೋಜಿಸಿತ್ತು. ಸಂಜೆ ಉಯ್ಯಾಲೋತ್ಸವ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಸಂಜೆ ಸೀತಾಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರ ಹಾಗೂ ಶಯನೋತ್ಸವ, ಏಪ್ರಿಲ್ 9 ಬುಧವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅವಭೃತ ಸ್ನಾನ, ವಸಂತ ಮಾಧವ ಪೂಜೆ ನಡೆದು ಸಂಜೆ ಹನುಮಂತೋತ್ಸವ ಧ್ವಜಾವರೋಹಣ ಮೂಲಕ ಜಾತ್ರೆ ಸಂಪನ್ನ ಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಥೋತ್ಸವ ಸಮಯದಲ್ಲಿ ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ಜೆಡಿಎಸ್ ಮುಖಂಡರಾದ ಬೆಟ್ಟಸ್ವಾಮಿ, ಹೊನ್ನಗಿರಿಗೌಡ, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಆರ್.ಶಿವಕುಮಾರ್, ಕೃಷ್ಣಮೂರ್ತಿ, ಸವಿತಾ.ಎಸ್.ಗೌಡ, ಕಂದಾಯ ನಿರೀಕ್ಷಕ ಕುಮಾರ್, ದೇವಾಲಯ ಜಾತ್ರಾ ಸಮಿತಿ ಅಧ್ಯಕ್ಷ ಸಿ.ಎಸ್.ಅರುಣ್, ಎಚ್.ಕೆ.ಸತ್ಯನಾರಾಯಣ, ಜಿ.ಸತೀಶ್, ಜಿ.ಆರ್.ಶ್ರೀನಿವಾಸಪ್ರಸಾದ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...