ಗುಬ್ಬಿ | ಜುಲೈ 27 ರಂದು ಶ್ರೀ ಭೂತರಾಯ ಸ್ವಾಮಿ ದೇವಾಲಯ ಉದ್ಘಾಟನೆ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ನೆಟ್ಟೆಕೆರೆ ಮಜರೆ ಕರಿಯಣ್ಣನಪಾಳ್ಯ ಗ್ರಾಮದಲ್ಲಿ ಜುಲೈ 27 ರಂದು ಶ್ರೀ ಭೂತರಾಯಸ್ವಾಮಿ ನೂತನ ದೇವಾಲಯ ಉದ್ಘಾಟನೆ ನಡೆಯಲಿದೆ ಎಂದು ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಲ್.ಕರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಆರಂಭಿಸಿದ ದೇವಾಲಯ ನಿರ್ಮಾಣ ಕೆಲಸ ಸುಸೂತ್ರವಾಗಿ ಸಿದ್ಧವಾಗಿದೆ. ಜುಲೈ 27 ಬೆಳಿಗ್ಗೆ ಎಲ್ಲಾ ವಿಧಿವಿಧಾನದಲ್ಲಿ ಲೋಕಾರ್ಪಣೆ ಗೊಳ್ಳಲಿದೆ ಎಂದರು.

ಬೆಳಿಗ್ಗೆ ಗಣಪತಿ ಪೂಜೆ ಮೂಲಕ ಆರಂಭವಾಗಿ ಬೆಳಿಗ್ಗೆ 9 ಗಂಟೆಗೆ ಭೂತರಾಯಸ್ವಾಮಿ ಪ್ರತಿಷ್ಠಾಪನೆ ನಂತರ ಪ್ರತಿಷ್ಟಾಂಗ ಪುಣ್ಯಾಹ, ಕಲಾವೃದ್ಧಿ ಹೋಮ, ಪೂರ್ಣಾಹುತಿ, ಕಲಾ ಕಳಸಾಭಿಷೇಕ ನಡೆದು ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಬಳ್ಳಾಪುರ ಶಾಖ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆ ಶಾಸಕ ಎಂ.ಟಿ.ಕೃಷ್ಣಪ್ಪ ವಹಿಸಲಿದ್ದು, ದೇವಾಲಯ ಉದ್ಘಾಟನೆ ಶಾಸಕ ಎಸ್.ಆರ್.ಶ್ರೀನಿವಾಸ್ ನಡೆಸಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆ ಮಾಜಿ ಶಾಸಕ ಮಸಾಲಾ ಜಯರಾಮ್ ಮಾಡಲಿದ್ದಾರೆ. ಈ ಜೊತೆಗೆ ಹೋಬಳಿಯ ಎಲ್ಲಾ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...