ಗುಬ್ಬಿ | ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಾರ್ಚ್ 5 ರಿಂದ ಆರಂಭ : 9 ರಂದು ರಥೋತ್ಸವ

Date:

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 5 ರಿಂದ 23 ರವರೆಗೆ ಜರುಗಲಿದೆ. ಮಾರ್ಚ್ 5 ರಂದು ಧ್ವಜಾರೋಹಣ, 9 ರಂದು ರಥೋತ್ಸವ, 14 ರಂದು ಬೆಳ್ಳಿ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆಯಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ತಿಳಿಸಿದೆ.

ಮಾರ್ಚ್ 5 ರ ಸಂಜೆ ನಡೆಯುವ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 18 ದಿನಗಳ ಕಾಲ ನಿರಂತರ ನಡೆಯುವ ಈ ಜಾತ್ರೆಗೆ ದೇಶದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ಸಾಕ್ಷಿಯಾಗಲಿದ್ದಾರೆ. ಮಾರ್ಚ್ 9 ರಥೋತ್ಸವ ಮಧ್ಯಾಹ್ನ 1.45 ಕ್ಕೆ ಜರುಗಲಿದೆ. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಲಿದ್ದು ಬಿರು ಬಿಸಿಲಿನ ನಡುವೆ ಪಾನಕ, ಫಲಾಹಾರ ಸಂಘ ಸಂಸ್ಥೆಗಳು ನೀಡಲಿದೆ. ನಿರಂತರ ದಾಸೋಹ ಇಡೀ ದಿನ ನಡೆಸಲು ಸಮಿತಿ ವ್ಯವಸ್ಥೆ ಮಾಡಿದೆ.

1001127698

ಮಾರ್ಚ್ 14 ರ ರಾತ್ರಿ ಬೆಳ್ಳಿ ಪಲ್ಲಕ್ಕಿ ಉತ್ಸವ ಕೂಡಾ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ಅಂದು ರಾತ್ರಿ ಮೂರ್ತಿ ದಾಸೋಹ ವ್ಯವಸ್ಥೆ ವಿಶೇಷವಾಗಿ ನಡೆಸಲಾಗುವುದು. ಈ ನಡುವೆ ಮಾರ್ಚ್ 11 ರಂದು ನಾಟಕರತ್ನ ಡಾ.ಗುಬ್ಬಿ ವೀರಣ್ಣ ಅವರ ಕುಟುಂಬದವರಿಂದ ಪ್ರತಿ ವರ್ಷದಂತೆ ವಿಚಿತ್ರ ಮಂಟಪ ಉತ್ಸವ ಸೇವೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತ್ಯ ಬಸವ ವಾಹನ ಉತ್ಸವ ನಡೆಯುವ ಈ ಜಾತ್ರೆಯು ಮಾರ್ಚ್ 20 ರಂದು ತೆಪ್ಪೋತ್ಸವ ಮೂಲಕ ಅಂತಿಮ ಘಟ್ಟ ತಲುಪಲಿದೆ. ಮಾರ್ಚ್ 23 ರಂದು ಚೆನ್ನಶೆಟ್ಟಿಹಳ್ಳಿ ಗದ್ದುಗೆಗೆ ಸ್ವಾಮಿಯ ಉತ್ಸವ ಅದ್ದೂರಿಯಾಗಿ ತಲುಪಿ ನಂತರ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ಮರಳಿ ಬರುವ ಮೂಲಕ ಜಾತ್ರೆಯು ಸಂಪನ್ನಗೊಳ್ಳಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...