ಗುಬ್ಬಿ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಅದ್ದೂರಿ ರಥೋತ್ಸವ

Date:

ಗುಬ್ಬಿ ಪಟ್ಟಣದ ಕ್ಷೇತ್ರಪಾಲಕ ಗುಬ್ಬಿಯಪ್ಪ ಎಂದೇ ಖ್ಯಾತಿ ಪಡೆದ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಜರುಗಿದ ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಸಾಕ್ಷಿಯಾದರು.

ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕೈಂಕರ್ಯ ನಡೆದು ಮಧ್ಯಾಹ್ನ 1.45 ಕ್ಕೆ ಸರಿಯಾಗಿ ರಥೋತ್ಸವಕ್ಕೆ ಸ್ವಾಮಿಯನ್ನು ಪಲ್ಲಕ್ಕಿ ಮೆರವಣಿಗೆ ಮೂಲಕ ಕರೆತಂದು ರಥೋತ್ಸವದಲ್ಲಿ ಪ್ರತಿಷ್ಠಾಪಿಸಿ ಬೃಹತ್ ಕಲ್ಲಿನ ತೇರು ಸಾವಿರಾರು ಭಕ್ತರು ಎಳೆದರು. ಹರಕೆ ಹೊತ್ತ ಭಕ್ತರು ದವನ ಸಿಲುಕಿಸಿದ ಬಾಳೆಹಣ್ಣು ಎಸೆದು ತಮ್ಮ ಹರಕೆ ತೀರಿಸುವ ಕೆಲಸ ಮಾಡಿದರು.

1001149677

ನವ ದಂಪತಿಗಳು ಆಗಮಿಸಿ ಬಾಳೆಹಣ್ಣು ಎಸೆದು ಹರಕೆ ಕಟ್ಟಿಕೊಳ್ಳುವ ಪದ್ಧತಿ ಸಹ ನಡೆಯುತ್ತದೆ. ಬಿರು ಬಿಸಿಲಿನ ಝಳಕ್ಕೆ ಬಳಲಿದ ಭಕ್ತರಿಗೆ ಹಲವು ಸಂಘ ಸಂಸ್ಥೆಗಳು ಪಾನಕ, ಮಜ್ಜಿಗೆ, ಕೋಸಂಬರಿ ಹಾಗೂ ಉಪಹಾರ ಪ್ರಸಾದ ನೀಡಿ ಬಾಯಾರಿಕೆ ನೀಗಿಸಿದರು. ಕೆಲ ಭಕ್ತರು ಕೆಎಂಎಫ್ ನಂದಿನಿ ಮಸಾಲಾ ಮಜ್ಜಿಗೆ ಹಾಗೂ ನೀರಿನ ಬಾಟಲ್ ಹಂಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001149573

ಜಾತ್ರೆಯಲ್ಲಿ ನಿರಂತರ ದಾಸೋಹ ವ್ಯವಸ್ಥೆ ಮಾಡಿದ ದಾಸೋಹ ಸಮಿತಿ ರಥೋತ್ಸವ ನಡೆದ ತಕ್ಷಣದಿಂದ ನಿರಂತರ ರಾತ್ರಿಯವರೆಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ್ದರು. ಸಾವಿರಾರು ಭಕ್ತರು ದಾನವಾಗಿ ನೀಡಿದ ದವನ ಧಾನ್ಯ, ತರಕಾರಿ ಇನ್ನಿತರ ದಿನಸಿಗಳಿಂದ ದಾಸೋಹ ಬ್ರೇಕ್ ಇಲ್ಲದೆ ಸಾಗಿತ್ತು. ಹಲವು ಮಠಾಧೀಶರು, ಚುನಾಯಿತ ಪ್ರತಿನಿಧಿಗಳು ರಥೋತ್ಸವಕ್ಕೆ ಸಾಕ್ಷಿಯಾದರು.

ಬಿಸಿಲಲ್ಲಿ ಬದುಕು ಬವಣೆ : ತುತ್ತು ಚೀಲಕ್ಕೆ ಹಗ್ಗದ ಮೇಲೆ ಸರ್ಕಸ್.

1001149575

ಜಾತ್ರೆಗೆ ಮೆರುಗು ತುಂಬುವ ಅಂಗಡಿ ಮುಂಗಟ್ಟು ಸಾಲು ಸಾಲಾಗಿದ್ದರೂ ದೇವಾಲಯದ ದಾಸೋಹ ನಿಲಯದ ಸಮೀಪ ಬೀದಿ ಬದಿ ಬಿಸಿಲು ಲೆಕ್ಕಿಸದೆ ಹಗ್ಗದ ಮೇಲೆ ಓಡಾಟ, ಡ್ಯಾನ್ಸ್ ಮಾಡುತ್ತಿದ್ದ ಪುಟ್ಟ ಬಾಲಕಿಯ ಸರ್ಕಸ್ ಅಲ್ಲಿದ್ದ ಭಕ್ತರ ಸೆಳೆಯಿತು. ಅನ್ನದ ಪ್ರಸಾದಕ್ಕೆ ಭಕ್ತರು ತೆರತ್ತಿದ್ದರು. ಆದರೆ ಬಾಲಕಿ ಭಕ್ತರು ನೀಡುವ ಹಣದ ನೆರೆವು ನಮ್ಮ ಅನ್ನ ಎಂದು ಹೇಳುವ ರೀತಿಯಲ್ಲಿ ಬಾಲಕಿಯ ಸರ್ಕಸ್ ಗೋಚರಿಸಿತು. ಈ ಜೊತೆಗೆ ಮಕ್ಕಳ ಆಟಿಕೆಗಳು, ಬಾಳೆಹಣ್ಣು ದವನ ಮಾರಾಟ, ಕಲ್ಲಂಗಡಿ ಹಣ್ಣು, ಐಸ್ ಕ್ರೀಂ ಮಾರಾಟ ಕೂಡಾ ನಿರಂತರ ಸಾಗಿತು.

ಜನ ಜಾತ್ರೆಯಲ್ಲಿ ಕಳ್ಳರ ಕೈಚಳಕ.

ಜಾತ್ರೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಿದಂತೆ ಸಂತಸ ಪಡುವ ಕಳ್ಳರು ಜನ ಜಂಗುಳಿ ಮಧ್ಯೆ ತಮ್ಮ ಕೈ ಚಳಕ ತೋರುತ್ತಾರೆ. ಅಂದಾಜು 20 ಕ್ಕೂ ಅಧಿಕ ಮೊಬೈಲ್ ಕಳವು ಪ್ರಕರಣ ರಥೋತ್ಸವ ಮುಗಿಯುವ ವೇಳೆಗೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಸಂತ್ರಸ್ತ ಭಕ್ತರು ಸರದಿಯಲ್ಲಿ ನಿಂತಿದ್ದರು. ಮತ್ತೇ ಕೆಲವರು ಜಾತ್ರೆಯಲ್ಲಿ ಸಾಮಾನ್ಯ ಎಂದು ಹೇಳಿಕೊಂಡು ಕಡಿಮೆ ಬೆಲೆಯ ಮೊಬೈಲ್ ಎಂದು ತಮಗೆ ತಾವೇ ಸಮಾಧಾನ ಮಾಡಿಕೊಳ್ಳುವ ಘಟನೆ ಸಹ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...