ಗುಬ್ಬಿ | ರೈತರ ಸಂಕಷ್ಟ ನೀಗಿಸಲು ಸಂಘಟನೆಯ ಬಲವರ್ಧನೆ ಅಗತ್ಯ: ಎ ಗೋವಿಂದರಾಜು

Date:

ದಿನದ 16 ಗಂಟೆ ದುಡಿಯುವ ರೈತ ವರ್ಗಕ್ಕೆ ಈಗಲೂ ಸೂಕ್ತ ಅನುಕೂಲ ಮಾಡಲು ಯಾವ ಸರ್ಕಾರಗಳೂ ಬದ್ಧವಾಗಿಲ್ಲ. ರೈತರ ಸಂಕಷ್ಟ ನೀಗಿಸಲು ಸಂಘಟನೆ ಶಕ್ತಿ ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ರೈತರು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.

ತಾಲೂಕಿನ ಚೆನ್ನಯ್ಯನಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ರೈತ ಸಂಘ ಉದ್ಘಾಟಿಸಿ ಮಾತನಾಡಿದ ಅವರು, “ದಿನದ ಎಂಟು ಗಂಟೆ ದುಡಿಯುವ ವರ್ಗಕ್ಕೆ ಎಲ್ಲಾ ಅನುಕೂಲ ಕೊಡುವ ಸರ್ಕಾರ ದೇಶದ ಶೇಕಡಾ 70ರಷ್ಟು ಇರುವ ರೈತರಿಗೆ ವಿದ್ಯುತ್ ಇಲ್ಲ, ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಇಲ್ಲ, ಬೀಜ ಗೊಬ್ಬರವಿಲ್ಲ. ಕೊಟ್ಟರೂ ಕೊಡದಂತೆ ರೈತ ವರ್ಗವನ್ನು ಕಡೆಗಣಿಸಿದ್ದಾರೆ” ಎಂದರು.

WhatsApp Image 2025 03 23 at 12.28.47 PM

“ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದ ರೈತರು ಪ್ರತಿ 24 ನಿಮಿಷಕ್ಕೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಹತ್ತು ವರ್ಷದಲ್ಲಿ 3.50 ಲಕ್ಷ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟಿಗಟ್ಟಲೆ ವ್ಯಯ ಮಾಡಿ ಡ್ಯಾಂ ಕಟ್ಟುವ ಸರ್ಕಾರ ಕೃಷಿಗೆ ಉತ್ತೇಜನ ನೀಡುವ ಮುನ್ನ ರೈತರು ತಮ್ಮ ಬಂಡವಾಳದಲ್ಲಿ ಬೋರ್ ವೆಲ್ ಕೊರೆಸಿ ದೇಶಕ್ಕೆ ಅನ್ನ ನೀಡಿದ್ದಾರೆ. ರಾಜ್ಯ ಸರ್ಕಾರ 4.05 ಲಕ್ಷ ಕೋಟಿ ಬಜೆಟ್ ಮಂಡಿಸಿದೆ. ಆದರೆ ರೈತರಿಗೆ ಕೇವಲ ಶೇಕಡಾ 16 ರಷ್ಟು ಮೀಸಲಿಟ್ಟಿದೆ. ವಾಸ್ತವದಲ್ಲಿ ರೈತರ ಸಂಖ್ಯಾನುಗುಣವಾಗಿ ಶೇಕಡಾ 60 ಮೀಸಲಿಸುವುದು ಸರಿ ಎನಿಸುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗುಬ್ಬಿ | ಕಿಡಿಗೇಡಿಗಳಿಂದ ಸುರಿಗೇನಹಳ್ಳಿ ಕಾಡಿಗೆ ಬೆಂಕಿ : ಕಂಗಾಲಾದ ಮರಗಿಡಗಳಲ್ಲಿನ ಪಕ್ಷಿ ಸಂಕುಲ

ತಾಲೂಕಿನ ಆರು ಗ್ರಾಮಗಳ ಶಾಖೆಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

WhatsApp Image 2025 03 23 at 12.28.48 PM 1

ಕಾರ್ಯಕ್ರಮದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಪದಾಧಿಕಾರಿಗಳಾದ ಚನ್ನಬಸವಣ್ಣ, ಕುಮಾರಸ್ವಾಮಿ, ಸತ್ತಿಗಪ್ಪ, ನಾಗರಾಜು, ಕತ್ತಿಗಪ್ಪ, ಯತೀಶ್, ಪ್ರಕಾಶ್, ಈಶಣ್ಣ, ಮಹದೇವಣ್ಣ, ಜಗದೀಶಯ್ಯ, ಗಂಗಣ್ಣ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...