ಗುಬ್ಬಿ | ಟೋಲ್ ಮರು ನಿರ್ಮಾಣಕ್ಕೆ ತೀವ್ರ ಆಕ್ರೋಶ : ಅ.27 ರಂದು ಬೃಹತ್ ರೈತರ ಪ್ರತಿಭಟನೆ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸಂಪರ್ಕದ ಕೇಶಿಪ್ ರಸ್ತೆಗೆ ಜಿ.ಹೊಸಹಳ್ಳಿ ಬಳಿ ನಿರ್ಮಾಣ ಮಾಡುತ್ತಿರುವ ಟೋಲ್ ವಿರುದ್ಧ ಈಗಾಗಲೇ ಪ್ರತಿಭಟಿಸಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಸರ್ಕಾರ ಟೋಲ್ ಮರು ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ನೀಡಿರುವ ಕಾರಣ ಈ ಭಾಗದ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಕಾಮಗಾರಿ ನಿಲ್ಲಿಸದಿದ್ದರೆ ಬೃಹತ್ ಪ್ರತಿಭಟನೆ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಎಲ್ಲಾ ಪಕ್ಷದ ಮುಖಂಡರ ಸಹಕಾರದಲ್ಲಿ ಅವೈಜ್ಞಾನಿಕ ಟೋಲ್ ನಿರ್ಮಾಣ ಕೆಲಸ ನಿಲ್ಲಿಸದಿದ್ದರೆ ಇದೇ ತಿಂಗಳ 27 ಸೋಮವಾರ ಬೃಹತ್ ಪ್ರತಿಭಟನೆಯನ್ನು ಸಾವಿರಾರು ರೈತರು ತಮ್ಮ ವಾಹನದೊಂದಿಗೆ ನಡೆಸಲಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರೈತರ ಆಕ್ರೋಶ ಕಟ್ಟೆ ಒಡೆಯುತ್ತದೆ ಎಂದು ಎಲ್ಲಾ ರೈತರು ಒಕ್ಕೊರಲಿನ ಎಚ್ಚರಿಕೆ ನೀಡಿದರು.

ರೈತಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಕೇವಲ ರೈತರಷ್ಟೇ ಬಳಸುವ ಈ ರಸ್ತೆ ಕೆಲ ಗ್ರಾಮದವರಿಗೆ ಹೊಟ್ಟೆ ಮೇಲೆ ಹೊಡೆದಂತೆ ಆಗುತ್ತದೆ. ಹಾಲು, ಕೃಷಿ ಉತ್ಪನ್ನ ಸಾಗಿಸುವ ರೈತರಿಂದ ಸುಂಕ ವಸೂಲಿ ಸರ್ಕಾರದ ಕೆಟ್ಟ ಕಣ್ಣು ಬಡ ರೈತರ ಮೇಲೆ ಬಿದ್ದಿದೆ. ಯಾವುದೇ ಬಾರಿ ವಾಹನ ಈ ರಸ್ತೆಯಲ್ಲಿ ಸಂಚಾರ ಮಾಡುವುದಿಲ್ಲ. ಗುಬ್ಬಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಈಗಾಗಲೇ ಹಾದು ಹೋಗಿದೆ. ಆದರೂ ಈ ಗ್ರಾಮೀಣ ರಸ್ತೆಗೆ ಸುಂಕ ನೀಡುವುದು ಅವೈಜ್ಞಾನಿಕ. ಇಂತಹ ಟೋಲ್ ಬೇಡ ಎಂದು ಹೋರಾಟ ಈಗಾಗಲೇ ನಡೆಸಿದ್ದೆವು. ಕೆಲಸ ನಿಲ್ಲಿಸಿ ಕೆಲ ತಿಂಗಳಲ್ಲೇ ಮರು ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಖಂಡನೀಯ. ರೈತರ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಇದೇ ತಿಂಗಳ 27 ರಂದು ರೈತರ ಹೋರಾಟ ತೀವ್ರತೆ ಗೊಳ್ಳುವ ಮುನ್ನ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ ಕಡಬ ಕಸಬ ಎರಡು ಹೋಬಳಿಯ ರೈತರು ಬಳಸುವ ಈ ರಸ್ತೆಗೆ ಟೋಲ್ ನಿರ್ಮಾಣ ಖಂಡನೀಯ. ರೈತರ ಹೋರಾಟಕ್ಕೆ ಬೆಲೆ ನೀಡಿ ಕೆಲಸ ನಿಲ್ಲಿಸಿ ಈಗ ಮರು ನಿರ್ಮಾಣಕ್ಕೆ ಅವಕಾಶ ಮಾಡಿರುವುದು ರೈತರ ಮೇಲೆ ದೌರ್ಜನ್ಯ ಎನಿಸುತ್ತಿದೆ. ಈಗಾಗಲೇ ರೈತರ ಹೇಮಾವತಿ ನೀರು ಕಿತ್ತುಕೊಳ್ಳಾಗುತ್ತಿದೆ. ಈಗ ರೈತರಿಂದ ರಸ್ತೆ ಸುಂಕ ವಸೂಲಿ ಮಾಡಲಾಗುತ್ತಿದೆ. ಇವೆಲ್ಲಾ ರೈತರ ಸಹನೆ ಮೀರಿಸುತ್ತಿದೆ. ಕೂಡಲೇ ಟೋಲ್ ಕೆಲಸ ನಿಲ್ಲಿಸದಿದ್ದರೆ ರೈತರ ಗಟ್ಟಿ ಹೋರಾಟ ಕಾನೂನು ಹೋರಾಟಕ್ಕೂ ತಿರುಗಲಿದೆ ಎಂದರು.

ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಅವೈಜ್ಞಾನಿಕ ಟೋಲ್ ಬಗ್ಗೆ ರೈತರ ಆಕ್ಷೇಪ ತಿಳಿದರೂ ಚುನಾಯಿತ ಪ್ರತಿನಿಧಿಗಳು ಮೌನ ವಹಿಸಿದ್ದಾರೆ. ಮಧುಗಿರಿ ಕ್ಷೇತ್ರದಲ್ಲಿ ಅನಗತ್ಯ ಟೋಲ್ ನಿರ್ಮಾಣ ಮಾಡಲು ಮುಂದಾದಾಗ ಶಾಸಕ ರಾಜಣ್ಣ ಅವರು ಸ್ಥಳದಲ್ಲಿ ಪ್ರತಿಭಟನೆ ಮಾಡಿ ಟೋಲ್ ತೆರವು ಮಾಡಿದ್ದರು. ಇಲ್ಲಿ ರೈತರ ಕಷ್ಟ ತಿಳಿಯದಾಗಿದೆ. ಜಿಲ್ಲಾಡಳಿತ ರೈತರ ಮನವಿ ಆಲಿಸದಿದ್ದರೆ ಬೃಹತ್ ಹೋರಾಟ ತಾಲ್ಲೂಕು, ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ತಲುಪಲಿದೆ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ಟೋಲ್ ಕೆಲಸ ಕೈಬಿಟ್ಟಂತೆ ನಾಟಕವಾಡಿ ಸರ್ಕಾರ ಸಂಬಂಧಪಟ್ಟ ಇಲಾಖೆಯ ಮೂಲಕ ಮರು ನಿರ್ಮಾಣಕ್ಕೆ ಮುಂದಾಗಿದೆ. ಪೊಲೀಸರ ನೆರವು ಪಡೆದು ಕೆಲಸ ಆರಂಭಿಸಿದ್ದ ಕಾರಣ ರೈತರ ಅಸಮಾಧಾನ ಸ್ಫೋಟ ಆಗುತ್ತಿದೆ. ಹೆದ್ದಾರಿಗಳನ್ನು ಬಿಟ್ಟು ರೈತರ ಸಣ್ಣ ರಸ್ತೆಗೆ ಸುಂಕ ವಿಧಿಸುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರೈತರ ಮೇಲೆ ಒಂದಲ್ಲಾ ಒಂದು ಪ್ರಹಾರ ಬೀಸುತ್ತಿದೆ. ಈ ಟೋಲ್ ನಿಲ್ಲದಿದ್ದರೆ ರೈತರು ಸ್ಥಳದಲ್ಲೇ ಕಾಮಗಾರಿ ನಿಲ್ಲಿಸಿ ಪ್ರತಿಭಟನೆ ಮಾಡುತ್ತಾರೆ ಎಂದು ನೇರ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ ಲೋಕೇಶ್, ಶಿವಕುಮಾರ್, ಅರೇಹಳ್ಳಿ ಮಂಜುನಾಥ್, ಸಿ.ಟಿ.ಕುಮಾರ್, ಸಿ.ಟಿ.ಪ್ರಕಾಶ್, ಸತ್ತಿಗಪ್ಪ, ರಾಂಪುರ ಸತೀಶ್, ಹೊಸಹಳ್ಳಿ ಗ್ರಾಪಂ ಸದಸ್ಯರಾದ ರೇಣುಕಪ್ರಸಾದ್, ನರೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...