ಗುಬ್ಬಿ | ನಿವೇಶನಕ್ಕೆ ಕಾದಿರಿಸಿದ ಜಮೀನಿಗೆ ತಡೆಯಾಜ್ಞೆ ಖಂಡಿಸಿ ದಿಢೀರ್ ಪ್ರತಿಭಟನೆ

Date:

ತ್ಯಾಗಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮರಸನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿಗಳು ಕಾದಿರಿಸಿದ ಜಮೀನು ಹಸ್ತಾಂತರ ಆಗಿದ್ದರೂ ಪಿಡಿಓ ವಿಳಂಬ ಅನುಸರಿಸಿ ಹಾಲಿ ಅಧ್ಯಕ್ಷರಿಗೆ ಕಾಲಾವಕಾಶ ನೀಡಿ ನ್ಯಾಯಾಲಯ ಮೂಲಕ ತಡೆಯಾಜ್ಞೆ ತರಲು ಅವಕಾಶ ನೀಡಿದ್ದು ಬಡವರು, ದೀನ ದಲಿತರ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ ದಲಿತ ಮುಖಂಡರು ತ್ಯಾಗಟೂರು ಗ್ರಾಮ ಪಂಚಾಯಿತಿ ಮುಂದೆ ನಡೆದಿದ್ದ ಕಾರ್ಯಕ್ರಮದಲ್ಲಿ ದಿಢೀರ್ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಬೊಮ್ಮರಸನಹಳ್ಳಿ ಸರ್ವೆ ನಂಬರ್ 101/2 ರ ಜಮೀನು ಬಡವರ ನಿವೇಶನಕ್ಕೆ ಜಿಲ್ಲಾಧಿಕಾರಿಗಳು ತಮ್ಮ ಹೆಸರಿನ ಒಟ್ಟು 6.13 ಎಕರೆ ಜಾಗದಲ್ಲಿ 4.13 ಎಕರೆ ಜಮೀನು ಮಂಜೂರು ಮಾಡಿ ಕೂಡಲೇ ಹಸ್ತಾಂತರ ಮಾಡಲಾಯಿತು. ಈ ಪ್ರಕ್ರಿಯೆ ನಡೆದು 9 ತಿಂಗಳು ಕಳೆದಿದೆ. ಹಸ್ತಾಂತರ ಮಾಡಿದ ಬಳಿಕ ಗ್ರಾಮ ಪಂಚಾಯಿತಿ ತಮ್ಮ ವಶಕ್ಕೆ ಪಡೆಯದೆ ಹಾಲಿ ಅಧ್ಯಕ್ಷರ ಕೈಗೊಂಬೆಯಂತೆ ವರ್ತಿಸಿ ನ್ಯಾಯಾಲಯ ಮೆಟ್ಟಿಲೇರಿ ತಡೆಯಾಜ್ಞೆ ತರಲು ಕಾಲಾವಕಾಶ ನೀಡಿದ್ದು ಸರಿಯಲ್ಲ. ಜಿಲ್ಲಾಧಿಕಾರಿಗಳಿಂದ ಮಂಜೂರು ಆಗಿರುವ ಜಮೀನು ಬಡವರಿಗೆ ನೀಡಲು ಹಿಂದೇಟು ಹಾಕಿದ ಪಿಡಿಓ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಕಾರರು ಆಗ್ರಹಿಸಿ ಕೂಡಲೇ ಬಡವರಿಗೆ ಮೀಸಲಿಟ್ಟ ಜಮೀನು ಹಸ್ತಾಂತರಕ್ಕೆ ಪಡೆದು ನಿವೇಶನ ವಿಂಗಡಿಸಿ ಬಡವರಿಗೆ ಹಂಚಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಹಾಗೂ ತಾಲ್ಲೂಕು ಸಂಚಾಲಕ ಕಡಬ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು, ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಧೋರಣೆ ಖಂಡಿಸಿ ಭವನ ಉದ್ಘಾಟನೆ ನಡೆಯುವ ಸಮಯದಲ್ಲಿ ವೇದಿಕೆ ಬಳಿ ಧರಣಿ ಕುಳಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಈಶ್ವರಯ್ಯ ಮಾತನಾಡಿ ಬಡವರಿಗೆ ನಿವೇಶನ ಕೋರಿ ಹಲವು ಬಾರಿ ಅರ್ಜಿ ಸಲ್ಲಿಸಿದ್ದ ಹಿನ್ನಲೆ ಜಿಲ್ಲಾಧಿಕಾರಿಗಳು ಒಂದು ವರ್ಷದ ಹಿಂದೆ ಬೊಮ್ಮರಸನಹಳ್ಳಿ ಬಳಿಯ ಜಿಲ್ಲಾಧಿಕಾರಿಗಳ ಹೆಸರಿನ ಜಮೀನಿನಲ್ಲಿ 4.13 ಎಕರೆ ಮಂಜೂರು ಮಾಡಿ ಕೂಡಲೇ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಗಿತ್ತು. ಆದರೆ ಇಲ್ಲಿನ ಪಿಡಿಓ ಮೇಡಂ ಅವರು ಹಾಲಿ ಅಧ್ಯಕ್ಷರಿಗೆ ಕೆಲ ತಿಂಗಳ ಅವಕಾಶ ನೀಡಿ ತಡೆಯಾಜ್ಞೆ ತರಲು ಅನುವು ಮಾಡಿದ್ದಾರೆ. ಈ ಬಗ್ಗೆ ಹಲವು ಬಾರಿ ಕೇಳಿದರೂ ಈಗ ನ್ಯಾಯಾಲಯ ಮೆಟ್ಟಿಲೇರಿದ್ದಾರೆ. ಏನೂ ಮಾಡಲು ಸಾಧ್ಯವಿಲ್ಲ ಎನ್ನುವ ಹಾರಿಕೆ ಉತ್ತರ ನೀಡುತ್ತಾರೆ. ಆದರೆ ಸಮಯ ನೀಡಿದ್ದಕ್ಕೆ ಸಕಾರಣ ನೀಡಬೇಕು. ಬಡವರ ವಿರೋಧಿ ನೀತಿ ಅನುಸರಿಸಿದ ಪಿಡಿಓ ಹಾಗೂ ಅಧ್ಯಕ್ಷರು ಸಾಮಾಜಿಕ ನ್ಯಾಯ ಕೊಡುವಲ್ಲಿ ವಿಫಲರಾಗಿದ್ದಾರೆ. ಆಡಳಿತ ನಡೆಸುವ ಇವರು ಬಡವರ ಪರ ನಿಲ್ಲಬೇಕು. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾಣುತ್ತಿದೆ. ತಾಪಂ ಇಓ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ಎಲ್ಲಾ ಜನಾಂಗದ ಬಡವರಿಗೆ ನಿವೇಶನ ನೀಡಲು ಅರ್ಜಿ ಸಲ್ಲಿಸಲಾಗಿದೆ. ಕೋರಿಕೆಯನ್ನು ಈಡೇರಿಸಿದ್ದ ಜಿಲ್ಲಾಧಿಕಾರಿಗಳ ಅದೇಶಕ್ಕೆ ಗ್ರಾಮ ಪಂಚಾಯಿತಿಯಲ್ಲಿ ಬೆಲೆ ಸಿಕ್ಕಿಲ್ಲ. ಕಾರ್ಯ ನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸಿಇಓ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ದಸಂಸ ತಾಲ್ಲೂಕು ಸಂಚಾಲಕ ಕಡಬ ಶಂಕರ್ ಮಾತನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಹೀಗೆ ಬಡವರ ವಿರುದ್ಧ ನಿಂತಿರುವುದು ಸರಿಯಲ್ಲ. ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಕ್ರೋಶ ಹೊರ ಹೊಮ್ಮಿದೆ ಎಂದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನ ವಿರೋಧಿ ನೀತಿ ಎರಡೂ ಎದ್ದು ಕಾಣುತ್ತಿದೆ. ಕೂಡಲೇ ನಿವೇಶನಕ್ಕೆ ಅನುವು ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ತಾಪಂ ಸಹಾಯಕ ನಿರ್ದೇಶಕ ರಂಗನಾಥ್, ಮಾಜಿ ಅಧ್ಯಕ್ಷ ಶಿವಕುಮಾರಸ್ವಾಮಿ ಹಾಗೂ ಪಿಡಿಓ ವನಜಾಕ್ಷಿ ನಿವೇಶನಕ್ಕೆ ಅವಶ್ಯ ಸೌಕರ್ಯ ಮಾಡುತ್ತೇವೆ. ನ್ಯಾಯಾಲಯದಲ್ಲಿ ಕಾದಿರಿಸಿದ ಜಮೀನು ಪರ ವಾದ ನಡೆಸಿ ಜಮೀನು ವಶಕ್ಕೆ ಪಡೆದು ನಿವೇಶನ ಹಂಚಿಕೆ ಮಾಡುವ ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ಪ್ರತಿಭಟನೆ ನಿಲ್ಲಿಸಲಾಯಿತು. ನಂತರ ದಲಿತ ಸಂಘರ್ಷ ಸಮಿತಿ ಹಾಗೂ ಅರ್ಹ ಫಲಾನುಭವಿಗಳಿಂದ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕಲ್ಲೂರು ರವಿಕುಮಾರ್, ಹೊಸಹಳ್ಳಿ ರವೀಶ್, ಕುಂದರನಹಳ್ಳಿ ನಟರಾಜ್, ಎಂ.ಎನ್.ಕೋಟೆ ಕಲ್ಲೇಶ್, ಲೋಕೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...