ಗುಬ್ಬಿ | ವೈಜ್ಞಾನಿಕತೆಯಿಂದ ಮೂಢನಂಬಿಕೆ ದೂರ : ಡಾ.ಎಚ್.ಆರ್.ಸ್ವಾಮಿ

Date:

ವೈಜ್ಞಾನಿಕತೆಗೂ ವೈಚಾರಿಕತೆಗೂ ಇರುವ ಸತ್ಯಾಸತ್ಯತೆಯಲ್ಲಿ ಮೂಢನಂಬಿಕೆ ತೊಡೆಯುವ ಶಕ್ತಿ ವೈಜ್ಞಾನಿಕತೆಗೆ ಇದೆ ಎಂದು ನಿವೃತ್ತ ಪ್ರಾಚಾರ್ಯ ಡಾ.ಎಚ್.ಆರ್.ಸ್ವಾಮಿ ತಿಳಿಸಿದರು.

ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಸೈನ್ಸ್ ಕ್ಲಬ್, ಕನ್ನಡ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಯುವಜನರಲ್ಲಿ ವೈಜ್ಞಾನಿಕ ಮನೋಭಾವನೆ ಎಂಬ ವಿಷಯಾಧಾರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶೂನ್ಯದಿಂದ ವಿಭೂತಿ ಸೃಷ್ಟಿ, ನೀರಿನಲ್ಲಿ ದೀಪ ಉರಿಸುವುದು, ನಾಲಿಗೆ ಮೇಲೆ ಕರ್ಪೂರ ಹಚ್ಚುವುದು, ಚರ್ಮಕ್ಕೆ ಕೊಕ್ಕೆ ಸಿಕ್ಕಿಸುವುದು, ಮಂತ್ರ ಹೇಳಿ ಬೆಂಕಿ ಹಚ್ಚುವುದು ಹೀಗೆ ಅನೇಕ ಪವಾಡ ಬಯಲು ಮಾಡಿರುವುದು ವಿಜ್ಞಾನ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಹೊಟ್ಟೆಪಾಡಿಗೆ ಮೂಢನಂಬಿಕೆ ಬಿತ್ತಿ ಬದುಕು ಸಾಗಿಸುತ್ತಾರೆ. ಇಂತಹ ಕೈಚಳಕವನ್ನು ಬೇದಿಸುವ ಕೆಲಸ ಯುವ ಪೀಳಿಗೆ ಮಾಡಬೇಕು. ಮುಗ್ದ ಜನರನ್ನು ಕಾಪಾಡಿ ವೈಜ್ಞಾನಿಕ ವಿಚಾರ ಜಾಗೃತ ಗೊಳಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಅಭಿವೃದ್ದಿ ಪ್ರಾಧಿಕಾರ ಸದಸ್ಯ ಡಾ.ರವಿಕುಮಾರ್ ನಿಹಾ ಮಾತನಾಡಿ ಯಾವುದೇ ವಿಚಾರ ಘಟನೆಯನ್ನು ಪ್ರತ್ಯಕ್ಷಿಸಿ ನೋಡಿದರೂ ಪ್ರಮಾಣಿಕರಿಸಿ ಒಪ್ಪಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಸಂವಿಧಾನ ಪ್ರಕಾರವೇ ವೈಜ್ಞಾನಿಕ ವಿಚಾರ ತಿಳಿಯುವುದು ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಕಲಿಯುವ ಜೊತೆ ಪ್ರಾಯೋಗಿಕವಾಗಿ ಆವಿಷ್ಕಾರ ಮಾಡುವ ಕಲೆ ಮೈಗೂಡಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ಉಪನ್ಯಾಸಕ ಡಾ.ಮೂರ್ತಿ ತಿಮ್ಮನಹಳ್ಳಿ ಮಾತನಾಡಿ ಮೂಢನಂಬಿಕೆಯಿಂದ ದೂರವಾಗಲು ಮೊದಲು ಪ್ರಶ್ನಿಸುವ ಗುಣ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ವಿಜ್ಞಾನ ಬೆಳೆಯಲು ಪ್ರಶ್ನೆ ಮಾಡುವ ಗುಣವೇ ಮುಖ್ಯ ಕಾರಣ ಎಂದರು.

ಪ್ರಾಚಾರ್ಯ ಎಂ.ಕೆ.ಮಂಜುನಾಥ್ ಮಾತನಾಡಿ ವಾಸ್ತವತೆ ಮತ್ತು ಸತ್ಯ ಸಂಗತಿಗಳನ್ನು ಕಂಡು ಹಿಡಿಯಲು ಮೊದಲು ಘಟನೆಯ ಹಿಂದಿನ ಕಾರಣ ಅರಿಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಲ ವೈಜ್ಞಾನಿಕ ವಿಚಾರವನ್ನು ಪ್ರಾತ್ಯಕ್ಷಿಕೆ ಮಾಡಲಾಯಿತು.

ವೇದಿಕೆಯಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಯತೀಶ್, ಉಪನ್ಯಾಸಕರಾದ ಕೆ.ಲೋಕೇಶ್, ಪರಮೇಶ್, ಮಂಜುನಾಥ್, ಚಂದ್ರಶೇಖರ್, ದೊಡ್ಡಯ್ಯ, ಮೂರ್ತಿ, ಜ್ಯೋತಿ, ಅಂಬಿಕಾ, ಜಗದೀಶ್, ಕಾಲೇಜು ಸಿಬ್ಬಂದಿಗಳಾದ ಮಂಜಣ್ಣ, ನವೀನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...