ಗುಬ್ಬಿ | ಅಗ್ನಿವಂಶ ಕ್ಷತ್ರಿಯ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Date:

 ಶ್ರೀ ಅಗ್ನಿವಂಶ ಕ್ಷತ್ರಿಯ(ತಿಗಳ) ವಿದ್ಯಾಭಿವೃದ್ಧಿ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ತಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪುರಸ್ಕರಿಸಲಾಯಿತು.

ಗುಬ್ಬಿ ಪಟ್ಟಣದ ಎವಿಕೆ ಸಮುದಾಯಭವನದಲ್ಲಿ ಭಾನುವಾರ ಆಯೋಜಿಸಿದ್ದ ಸರ್ವ ಸದಸ್ಯರ ಸಭೆಯಲ್ಲಿ ಪ್ರಸಕ್ತ ಸಾಲಿನ ಎಸ್ಸಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 75 ಕ್ಕಿಂತ ಹೆಚ್ಚು ಅಂಕ ಗಳಿಸಿದ ಅಗ್ನಿವಂಶ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಅಗ್ನಿವಂಶ ಕ್ಷತ್ರಿಯ(ತಿಗಳ) ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಬಲರಾಮಯ್ಯ ಮಾತನಾಡಿ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸಂಘ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ಕೃಷಿ ತೋಟಗಾರಿಕೆ ನಂಬಿ ಬದುಕು ಕಟ್ಟಿಕೊಂಡ ನಮ್ಮ ತಿಗಳ ಸಮಾಜ ಕೆಲ ಪ್ರದೇಶದಲ್ಲಿ ಮಾತ್ರ ಕಾಣಸಿಗುತ್ತಾರೆ. ರಾಜ್ಯದಲ್ಲಿ ನಮ್ಮ ಇರುವಿಕೆಯನ್ನು ತೋರಿಸುವ ಕೆಲಸ ಆಗಬೇಕಿದೆ. ನಮ್ಮದೇ ಆಚಾರ ವಿಚಾರ ಜೊತೆಗೆ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಒತ್ತು ನೀಡಿ ಮುಂದಿನ ಪೀಳಿಗೆಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಯೋಗಾನಂದಕುಮಾರ್ ಮಾತನಾಡಿ ಹಿಂದುಳಿದ ವರ್ಗಗಳ ಪೈಕಿ ಅತೀ ಹೆಚ್ಚು ಹಿಂದುಳಿದ ತಿಗಳ ಜನಾಂಗ ಕೇವಲ ಕೃಷಿ ನಂಬಿ ಜೀವನ ನಡೆಸಿಕೊಂಡು ಬಂದಿದೆ. ಆದರೆ ಬದಲಾದ ಸನ್ನಿವೇಶದಿಂದ ಶಿಕ್ಷಣಕ್ಕೆ ಒತ್ತು ನೀಡುವ ಬಗ್ಗೆ ಗಂಭೀರ ನಿಲುವು ನಮ್ಮ ಸಮಾಜ ಕೈಗೊಂಡ ಹಿನ್ನಲೆ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವ ತಿಳಿದು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಅವರ ಬೆನ್ನು ತಟ್ಟಿ ಪ್ರೋತ್ಸಾಹ ನೀಡುವ ಅಳಿಲು ಸೇವೆ ಸಂಘ ಮಾಡುತ್ತಿದೆ ಎಂದರು.

ಪೊಲೀಸ್ ಉಪ ನಿರೀಕ್ಷಕ ಬಸವರಾಜು ಮಾತನಾಡಿ ಕನಿಷ್ಠ ವಿದ್ಯಾರ್ಹತೆ ಪಡೆಯುವುದು ಕಷ್ಟದ ಕಾಲದಲ್ಲಿ ನಮ್ಮ ಸಮಾಜ ಕೃಷಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸಿದ್ದರು. ಎಸ್ಎಸ್ಎಲ್ಸಿ ಪಾಸಾದರೆ ಅದೇ ದೊಡ್ಡ ಸಾಧನೆಯಂತೆ ನೋಡುವ ಕಾಲ ಈ ಹಿಂದೆ ಇತ್ತು. ಆದರೆ ಈಗ ಆಧುನಿಕತೆಗೆ ತಕ್ಕಂತೆ ನಮ್ಮ ಮಕ್ಕಳು ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪಾಲ್ಗೊಂಡು ಸಮಾಜದಲ್ಲಿ ಮುಂದೆ ಬರುತ್ತಿದ್ದಾರೆ. ಶಿಕ್ಷಣ ಮುಂದುವರೆಸಿ ಉನ್ನತ ವ್ಯಾಸಂಗಕ್ಕೆ ಒತ್ತು ನೀಡಬೇಕು. ಜೊತೆಗೆ ಸಂಸ್ಕಾರ ಕಲಿತು ಶ್ರಮಪಟ್ಟು ತಂದೆ ತಾಯಿ, ಗುರು ಹಿರಿಯರ ಬಗ್ಗೆ ಗೌರವದಿಂದ ನಡೆದುಕೊಳ್ಳಿ ಎಂದು ಕರೆ ನೀಡಿದರು.

ಸಂಘದ ಹಿರಿಯ ಸದಸ್ಯರಾದ ಜಿ.ಗೋವಿಂದಯ್ಯ ಸಂಘ ನಡೆದುಬಂದ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಎಸ್.ನಂಜೇಗೌಡ, ಉಪಾಧ್ಯಕ್ಷ ಎನ್.ಸಿ.ಶಿವಣ್ಣ, ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ, ಖಜಾಂಚಿ ಪಿ.ಟಿ.ಸಣ್ಣರಂಗಯ್ಯ, ಜಂಟಿ ಕಾರ್ಯದರ್ಶಿ ಜಿ.ಬಿ.ನಾಗರಾಜು, ನಿರ್ದೇಶಕರಾದ ರಾಮಯ್ಯ, ಜಿ.ಸಿ.ಲೋಕೇಶ್ ಬಾಬು, ಜಿ.ಸಿ.ಚಂದ್ರಶೇಖರ್, ಯಜಮಾನ್ ಸಣ್ಣಹನುಮಂತಯ್ಯ, ಕುಂಬಿನರಸಯ್ಯ, ಬಿ.ಆರ್.ನಾಗರಾಜ್, ಚಿಕ್ಕನರಸೇಗೌಡ, ಲಕ್ಕೇನಹಳ್ಳಿ ಕೃಷ್ಣಮೂರ್ತಿ, ರಾಮಚಂದ್ರಯ್ಯ, ಲಕ್ಕಣ್ಣ, ಸಿ.ಯು.ರಾಜಣ್ಣ, ಡಿ.ಗಂಗಣ್ಣ, ರೇಣುಕಮ್ಮ, ವರಲಕ್ಷ್ಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...