ಗುಬ್ಬಿ | ತಾಲೂಕು ಆಡಳಿತದಿಂದ ಆದಿ ಜಗದ್ಗುರು ಶಂಕರಾಚಾರ್ಯರ ಜಯಂತಿ ಆಚರಣೆ

Date:

ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಆಡಳಿತ ವಿಪ್ರ ಸಮಾಜದ ಸಹಯೋಗದಲ್ಲಿ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.

ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜಾ ಕೈಂಕರ್ಯ ನೆರವೇರಿಸಿ ಮಾತನಾಡಿದ ತಹಶೀಲ್ದಾರ್ ಬಿ.ಆರತಿ, ಎಂಟನೇ ಶತಮಾನದಲ್ಲಿ ಧರ್ಮ ಉಳಿವಿಗಾಗಿ ಶ್ರೀ ಶಂಕರಾಚಾರ್ಯರ ಕಾಲ್ನಡಿಗೆ ಪರ್ಯಟನೆ ಇಂದಿಗೂ ಸಾಕ್ಷಿಯಾಗಿ ನಾಲ್ಕು ಮಠಗಳು ನಾಲ್ಕು ದಿಕ್ಕಿನಲ್ಲಿದೆ. ಜಾತ್ಯತೀತ ನಿಲುವು ತಾಳಿ ಧರ್ಮ ಸಂಸ್ಥಾಪನೆ ಮಾಡಿದ ಶ್ರೀಗಳ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ. ಪ್ರತಿ ವರ್ಷ ನಡೆಯುವ ಈ ವೇದಿಕೆಯಲ್ಲಿ ಸಮಾಜದಲ್ಲಿ ಸಾಧನೆಗೈದವರಿಗೆ ಸನ್ಮಾನ ಕಾರ್ಯಕ್ರಮ ಅಥವಾ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮುಂದಿನ ವರ್ಷದಿಂದ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಬ್ರಾಹ್ಮಣ ಸಮಾಜದ ಅಧ್ಯಕ್ಷ ಸಿ.ಎಸ್.ಅರುಣ್ ಮಾತನಾಡಿ ಸನಾತನ ಧರ್ಮ ಅಳಿವಿನ ಅಂಚಿಗೆ ಬಂದಾಗ ಶಿವನೇ ಶಂಕರಾಚಾರ್ಯರಾಗಿ ಜನ್ಮ ತಾಳಿ ಧರ್ಮ ರಕ್ಷಿಸಿದರು ಎನ್ನಲಾಗಿದೆ. ಕೇರಳದ ಕಾಲಾಡಿ ಎಂಬ ಗ್ರಾಮದಲ್ಲಿ ಜನಿಸಿ ದೇಶವನ್ನು ಸುತ್ತಿ ಧರ್ಮ ಸಂಸ್ಥಾಪನೆ ಕೆಲಸವನ್ನು ನಾಲ್ಕು ಧರ್ಮ, ನಾಲ್ಕು ಮಠಗಳ ಮೂಲಕ ನಡೆಸಿದರು. ಅದ್ವೈತ ಸಿದ್ಧಾಂತ ಪ್ರಸಾರ ಮಾಡಿ ವೇದ ಉಪನಿಷತ್ತುಗಳ ರಚಿಸಿದರು. ಇಂತಹ ಜಗದ್ಗುರುಗಳ ಜಯಂತಿ ಸಾರ್ವತ್ರಿಕ ಕಾರ್ಯಕ್ರಮ ಮಾಡಿರುವುದು ಸ್ವಾಗತಾರ್ಹ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೀಡಾ ಪ್ರೋತ್ಸಾಹಕ ಸಿ.ಆರ್.ಶಂಕರಕುಮಾರ್ ಮಾತನಾಡಿ ಕೇವಲ 32 ವರ್ಷ ಅಲ್ಪಾಯುವಾಗಿ ಎಂಟನೇ ವಯಸ್ಸಿಗೆ ಸನ್ಯಾಸತ್ವ ಪಡೆದು ಭರತಖಂಡ ನಾಲ್ಕು ಬಾರಿ ಸುತ್ತಿ ನಾಲ್ಕು ಮಠಗಳನ್ನು ಸ್ಥಾಪಿಸಿ ಧರ್ಮ ಉಳಿಸಿದರು. ಅವರ ಹೋರಾಟದ ಕುರುಹು ಇಂದಿಗೂ ನಾಗಸಾಧು ಅಘೋರಿ ಪರಂಪರೆ ಸಾಕ್ಷಿಯಾಗಿದೆ ಎಂದರು.

ಅಧ್ಯಾಪಕ ಮುರಳೀಧರ್ ಮಾತನಾಡಿ ವೇದ ಉಪನಿಷತ್ತು ಸಂಸ್ಕೃತ ಮೂಲಕ ಧರ್ಮವನ್ನು ಗಟ್ಟಿಗೊಳಿಸಿ ದೇವರ ಸ್ಮರಣೆ ಮಾತ್ರ ಮುಕ್ತಿ ನೀಡುತ್ತದೆ ಎಂದು ಭಜ ಗೋವಿಂದಂ ಶ್ಲೋಕಕ್ಕೆ ಅರ್ಥ ಕೊಟ್ಟರು. ಅಲ್ಪ ಅವಧಿಯಲ್ಲಿ ಎಂಟನೇ ಶತಮಾನದಲ್ಲಿ ನೀಡಿದ ಶಂಕರ ಫಿಲಾಸಫಿ ಇಂದಿಗೂ ಅರ್ಥಪೂರ್ಣ ಜೀವನಕ್ಕೆ ನಾಂದಿ ಹಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ತಾಪಂ ಅಧಿಕಾರಿ ಜಗನ್ನಾಥಗೌಡ, ಶಿರಸ್ತೇದಾರ್ ಖಾನ್ ಸಾಬ್, ವಿಪ್ರ ಸಮಾಜದ ಎಚ್.ಕೆ.ಸತ್ಯನಾರಾಯಣ, ಶ್ರೀನಿವಾಸ್ ಪ್ರಸಾದ್, ಜಿ.ಸತೀಶ್, ಎನ್.ಎಸ್.ರವಿ, ಮಹೇಶ್, ರಾಘವೇಂದ್ರ, ಮಹಿಳಾ ಸಂಘದ ಸುನಂದಮ್ಮ, ಅರುಣಾ, ಮೇಘನಾ, ತಾಲ್ಲೂಕು ಕಚೇರಿಯ ಆನಂದ್, ಮಾದೇವಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...