ಗುಬ್ಬಿ | ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ತಾಲೂಕು ಆಡಳಿತ ತಯಾರಿ

Date:

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿವರ್ಷದಂತೆ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಗುರುವಾರ ಪೂರ್ವಭಾವಿ ಸಭೆ ಆಯೋಜಿಸಿ ಸಾರ್ವಜನಿಕರ ಸಲಹೆ ಸೂಚನೆ ಪಡೆದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಲಾಕಾಲೇಜು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕಚೇರಿಯಲ್ಲಿ ಆಚರಣೆ ಮುಗಿಸಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಡ್ಡಾಯ ಹಾಜರಾಗಲು ತಹಶೀಲ್ದಾರ್ ಆರತಿ.ಬಿ ಸೂಚಿಸಿದರು.

ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಅಧ್ಯಕ್ಷತೆ ವಹಿಸಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಸ್ವಾಂತಂತ್ರ್ಯ ಹೋರಾಟಗಾರರ ಬಗ್ಗೆ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಿ ವಿಜೇತ ನಾಲ್ಕು ವಿದ್ಯಾರ್ಥಿಗಳಿಗೆ ಆಕರ್ಷಕ ನಗದು ಬಹುಮಾನವನ್ನು ದಿವಂಗತ ಆರ್.ರಂಗನಾಥಗೌಡ ಅವರ ಸ್ಮರಣಾರ್ಥ ಪತ್ರಕರ್ತ ರಮೇಶ್ ಗೌಡ ನೀಡುವುದಾಗಿ ತಿಳಿಸಿರುವುದು ವಿಶೇಷ ಎನಿಸಿದೆ. ಈ ಜೊತೆಗೆ ಅತಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನಿಸಿ ಗೌರವಿಸುವ ಬಗ್ಗೆ ಚರ್ಚಿಸಲಾಗಿ ಈ ಬಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೂ ಸನ್ಮಾನಿಸುವ ವಿಷಯ ಪ್ರಸ್ತಾಪವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್, ಗೃಹರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್ ವತಿಯಿಂದ ಆಕರ್ಷಕ ಕವಾಯತು ಪಥ ಸಂಚಲನ ನಡೆಸುವುದು ಎಂದಿನಂತೆ ನಡೆಯಲಿದೆ. ಶಿಷ್ಟಾಚಾರದಲ್ಲಿ ಆಹ್ವಾನ ಪತ್ರಿಕೆ ಸಿದ್ಧಪಡಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಿ ಕಾರ್ಯಕ್ರಮ ಜವಾಬ್ದಾರಿಯಿಂದ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ರಾಷ್ಟ್ರೀಯ ಹಬ್ಬಕ್ಕೆ ಎಲ್ಲಾ ನಾಗರೀಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಉಪಹಾರ ಹಾಗೂ ಸಿಹಿ ಹಂಚಿಕೆಯನ್ನು ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿದ್ದು, ಕುಡಿಯುವ ನೀರು ಹಾಗೂ ಕವಾಯತು ಅಭ್ಯಾಸ ನಡೆಸುವ ಮಕ್ಕಳಿಗೆ ಕಾರ್ಯಕ್ರಮಕ್ಕೆ ಮುನ್ನ ನಾಲ್ಕು ದಿನಗಳ ಕಾಲ ನೀರು ಸರಬರಾಜು ಹಾಗೂ ಶಾಮಿಯಾನ ವ್ಯವಸ್ಥೆ ಮಾಡಲು ಪಟ್ಟಣ ಪಂಚಾಯಿತಿಗೆ ಸೂಚಿಸಲಾಯಿತು. ಬೆಸ್ಕಾಂ ಇಲಾಖೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಸೂಚಿಸಿ ವಿವಿಧ ಇಲಾಖೆಗೆ ಕೆಲ ಜವಾಬ್ದಾರಿಗಳು ವಹಿಸಲಾಯಿತು.

ಸಭೆಯಲ್ಲಿ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್, ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಆರ್.ಶಿವಕುಮಾರ್, ಶೌಕತ್ ಆಲಿ, ಸಿದ್ದರಾಮಣ್ಣ, ತಾಪಂ ಇಓ ಶಿವಪ್ರಕಾಶ್, ಬಿಇಓ ನಟರಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ಗುಬ್ಬಿ ಪಿಎಸ್ಐ ಸುನೀಲ್ ಕುಮಾರ್, ಮುಖಂಡರಾದ ಸಿ.ಆರ್.ಶಂಕರ್ ಕುಮಾರ್, ಸಲೀಂ ಪಾಷ, ಜಿ.ಆರ್.ರಮೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...