ಗುಬ್ಬಿ | ಮೈಕ್ರೋ ಫೈನಾನ್ಸ್ ನಿಯಮಗಳ ಬಗ್ಗೆ ಸಾರ್ವಜನಿಕ ಸಭೆ : ನಬಾರ್ಡ್, ಲೀಡ್ ಬ್ಯಾಂಕ್ ಅಧಿಕಾರಿಗಳು ಭಾಗಿ

Date:

ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ಗ್ರಾಹಕರ ಆತ್ಮಹತ್ಯೆ ಪ್ರಕರಣ ಹೆಚ್ಚಾದಂತೆ ಸರ್ಕಾರ ವಿಧಿಸಿದ ನಿಯಮಾವಳಿ ಬಗ್ಗೆ ಸಾರ್ವಜನಿಕ ಸಭೆ ಆಯೋಜಿಸಿ ಸಂಬಂಧಪಟ್ಟ ಲೀಡ್ ಬ್ಯಾಂಕ್, ನಬಾರ್ಡ್ ಬ್ಯಾಂಕ್ ಹಾಗೂ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಪ್ರತಿನಿಧಿಗಳನ್ನು ಆಹ್ವಾನಿಸಿ ನೇರ ಚರ್ಚೆಗೆ ತಾಲ್ಲೂಕು ಆಡಳಿತ ಅವಕಾಶ ಕಲ್ಪಿಸಿತ್ತು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಬಿ.ಆರತಿ ನೇತೃತ್ವದ ಸಭೆಯಲ್ಲಿ ರೈತ ಸಂಘದ ಪದಾಧಿಕಾರಿಗಳು, ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಮೈಕ್ರೋ ಫೈನಾನ್ಸ್ ಸಾಲ ಕೊಟ್ಟು ಬಡ್ಡಿ ವಸೂಲಿ ಮಾಡುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ ಕೃಷಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಮೀನಾ ಮೇಷ ಎಣಿಸುತ್ತದೆ. ಸಲ್ಲದ ನೂರಾರು ದಾಖಲೆ ಕೇಳಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿ ಬೇಸರ ಮೂಡಿಸುತ್ತಾರೆ. ಈ ಸಮಯ ಅನ್ಯ ಮಾರ್ಗ ಕಾಣದೆ ಮೈಕ್ರೋ ಫೈನಾನ್ಸ್ ಸಾಲದ ಸುಳಿಗೆ ಸಿಲುಕಿ ಮೀಟರ್ ಬಡ್ಡಿ ತೆತ್ತು ಸಾಲ ತೀರಿಸಲಾಗದೇ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗುತ್ತಾರೆ. ಈ ಮಧ್ಯೆ ರಿಸರ್ವ್ ಬ್ಯಾಂಕ್ ಮೂಲಕ ಅಧಿಕೃತ ಪರವಾನಗಿ ಪಡೆದ ಮೈಕ್ರೋ ಫೈನಾನ್ಸ್ ಎಷ್ಟು ಎಂಬುದು ಸದ್ಯದಲ್ಲಿ ಲೀಡ್ ಬ್ಯಾಂಕ್ ಗೆ ಮಾಹಿತಿ ಗೊತ್ತಿಲ್ಲ. ಈಗ ಅಧಿಕೃತ 27 ಕಂಪೆನಿ ಪಟ್ಟಿ ಸಿದ್ಧವಿದೆ. ಆದರೆ ಅನಧಿಕೃತ ಗುಬ್ಬಿ ತಾಲ್ಲೂಕಿನಲ್ಲಿ ನೂರಾರು ಇವೆ. ಇವುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ ಸಿವೈಸಿ ಪ್ರಧಾನ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಮಾತನಾಡಿ ಮೈಕ್ರೋ ಫೈನಾನ್ಸ್ ಇರುವ ಬಗ್ಗೆ ಸರ್ವೇ ಮಾಡುವ ಕೆಲಸ ಸ್ಥಳೀಯ ಸಂಸ್ಥೆಗಳದ್ದಾಗಿದೆ. ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಮೂಲಕ ಫೈನಾನ್ಸ್ ಕಚೇರಿಗಳ ಪಟ್ಟಿ ಪಡೆದು ಅಧಿಕೃತ ಪರವಾನಗಿ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು. ರಿಸರ್ವ್ ಬ್ಯಾಂಕ್ ಮೂಲಕ ಅಧಿಕೃತ ಆದೇಶವಿದೆಯೇ ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ಸಾಲ ನೀಡಿ ನಿಯಮ ಪ್ರಕಾರ ಬಡ್ಡಿ ವಸೂಲಿ ನಡೆದಿರುವ ಬಗ್ಗೆ ಕೂಡ ತನಿಖೆ ಆಗಬೇಕು. ಸಾಲ ವಸೂಲಿಗೆ ಬರುವ ಸಿಬ್ಬಂದಿಗಳು ಗೂಂಡಾ ವರ್ತನೆ ತೋರಿದ್ದಲ್ಲಿ ಪೊಲೀಸ್ ತಕ್ಷಣ ಮಧ್ಯ ಪ್ರವೇಶಿಸಿ ಗ್ರಾಹಕರ ಪರ ನಿಲ್ಲಬೇಕು. ಮಾನವೀಯ ಗುಣ ಹಾಗೂ ಕರುಣೆ ಎಂಬ ಮಾನದಂಡ ಬಳಸಿ ಕೆಲಸ ಮಾಡಲು ಸಿಬ್ಬಂದಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ ಮಾತನಾಡಿ ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸುವ ಕೆಲಸ ನಮ್ಮದಾಗಿದೆ. ಬ್ಯಾಂಕ್ ಗ್ರಾಹಕರಿಗೆ ತೊಂದರೆ ಅದಲ್ಲಿ ನಮ್ಮಲ್ಲಿ ಮನವಿ ಮಾಡಬಹುದಾಗಿದೆ. ರೈತರು ಮೀಟರ್ ಬಡ್ಡಿ ವಸೂಲಿ ಮಾಡುವ ಫೈನಾನ್ಸ್ ಬಗ್ಗೆ ಮಾಹಿತಿ ನೀಡಬಹುದು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದು ಬಡ್ಡಿ ಹಾವಳಿಗೆ ಕಡಿವಾಣ ಹಾಕಲು ಸಿದ್ಧವಿದೆ. ಸಭೆಯಲ್ಲಿ ಸಾರ್ವಜನಿಕರಿಂದ ಬಂದ ದೂರು, ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.

ತಹಶೀಲ್ದಾರ್ ಬಿ.ಆರತಿ ಮಾತನಾಡಿ ಸರ್ಕಾರ ವಿಧಿಸಿರುವ ನಿಯಮಾವಳಿಗಳ ಬಗ್ಗೆ ತಿಳಿಸಿ ಮೈಕ್ರೋ ಫೈನಾನ್ಸ್ ಅನಧಿಕೃತ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಸಿದ್ದವಿದ್ದೇವೆ. ಗ್ರಾಹಕರಿಗೆ ಮಾನಸಿಕ ಕಿರುಕುಳ, ದೈಹಿಕ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದ ಬಗ್ಗೆ ದೂರು ಬಂದಲ್ಲಿ ಡಿವೈಎಸ್ಪಿ ನೇರವಾಗಿ ಸುಮೋಟೋ ಕೇಸು ದಾಖಲಿಸಲು ಸರ್ಕಾರ ಸೂಚಿಸಿದೆ. ರಿಸರ್ವ್ ಬ್ಯಾಂಕ್ ನಿಯಮಗಳ ಜೊತೆ ಸರ್ಕಾರ ವಿಧಿಸಿದ ನಿಯಮಗಳನ್ನು ಪಾಲಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರೊಳಗೆ ಸಾಲ ವಸೂಲಿಗೆ ತೆರಳಬೇಕು. ನಿಯಮ ಮೀರಿ ಬಡ್ಡಿ ವಸೂಲಿ, ಸಾಲದಲ್ಲೇ ಬೋಗಸ್ ದಾಖಲೆ ಸೃಷ್ಟಿ, ಸಿಬ್ಬಂದಿಗಳಿಂದಲೇ ವಂಚನೆ ಹೀಗೆ ಅನೇಕ ದೂರಿಗೆ ಐದು ಲಕ್ಷ ದಂಡ, ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಿಯಮಾವಳಿಯನ್ನು ತಿಳಿಸಿದರು.

ಸಭೆಯಲ್ಲಿ ನಬಾರ್ಡ್ ಬ್ಯಾಂಕ್ ಜಿಲ್ಲಾ ನಿರ್ದೇಶಕಿ ಕೀರ್ತಿಪ್ರಭಾ, ರೈತ ಸಂಘದ ವೆಂಕಟೇಗೌಡ, ಸಿ.ಜಿ.ಲೋಕೇಶ್, ದಲಿತ ಸಂಘಟನೆಯ ಕೊಡಿಯಾಲ ಮಹದೇವು, ಚೇಳೂರು ಶಿವನಂಜಪ್ಪ, ಕೀರ್ತಿ, ಕಿಟ್ಟದಕುಪ್ಪೆ ನಾಗರಾಜು, ತಿಪಟೂರು ನಂದಿನಿ, ಗುಬ್ಬಿ ಹಿತ ರಕ್ಷಣಾ ಸಮಿತಿಯ ಯಲ್ಲಪ್ಪ, ಸಲೀಂ ಪಾಶ, ಗೋಪಾಲ್ ಅರಸ್ ಸೇರಿದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಪ್ರತಿನಿಧಿಗಳು ಇದ್ದರು.

ವರದಿ – ಎಸ್. ಕೆ. ರಾಘವೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...