ಗುಬ್ಬಿ | ತಾಲೂಕು ಮಟ್ಟದ ದಲಿತರ ಕುಂದು ಕೊರತೆ ಸಭೆ : ಪ್ರಸ್ತಾಪವಾದ ಸಮಸ್ಯೆಗೆ ಶಾಸಕರಿಂದ ಸೂಕ್ತ ಉತ್ತರ

Date:

ದಲಿತರ ಕುಂದು ಕೊರತೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯಲ್ಲಿ ಪ್ರಸ್ತಾಪವಾದ ಹಲವು ಸಮಸ್ಯೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಕ್ತ ಉತ್ತರ ನೀಡಿ ಪರಿಹಾರವನ್ನು ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಬಿ.ಆರತಿ ವಹಿಸಿದ್ದರು. ದಲಿತ ಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಹಾಜರಿದ್ದ ಸಭೆಯಲ್ಲಿ ಹಿಂದಿನ ದಲಿತ ಸಭೆಯಲ್ಲಿ ಪ್ರಸ್ತಾಪವಾಗಿದ್ದ ಸಮಸ್ಯೆ ಹಾಗೂ ಅಹವಾಲು ಅರ್ಜಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಉತ್ತರ ಲಿಖಿತ ರೂಪದಲ್ಲಿ ಮಂಡಿಸಲಾಯಿತು.

ಗುಬ್ಬಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಸ್ಥಳ ಒದಗಿಸಲು ಒಕ್ಕೊರಲಿನ ಮನವಿ ಬಂದ ಹಿನ್ನಲೆ ಸ್ಥಳ ಪರಿಶೀಲಿಸಲು ಶಾಸಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಈ ಜೊತೆಗೆ ನಮ್ಮ ತಾಲ್ಲೂಕಿನ ಸಾಲು ಮರದ ತಿಮ್ಮಕ್ಕ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರಕ್ಕೆ ಒತ್ತಾಯಿಸಿ ಈ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಖ್ಯಮಂತ್ರಿಗಳಿಗೆ ಸಭೆಯ ನಿರ್ಣಯ ಕಳುಹಿಸಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

9 ಕೋಟಿಯು ಹೊಸ ಬಸ್ ಸ್ಟ್ಯಾಂಡ್ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಲಿದೆ. ಶೀಘ್ರದಲ್ಲಿ ಕೆಲಸ ಆರಂಭಿಸಿ ನಿಲ್ದಾಣ ನಿರ್ಮಾಣ ಆಗಲಿದೆ. ಆ ಸಮಯದಲ್ಲಿ ದಲಿತ ಪರ ಸಂಘಟನೆಗಳು ಮನವಿ ನೀಡಿದರೆ ಸರ್ಕಾರದ ಗಮನಕ್ಕೆ ಹಾಗೂ ಸಾರಿಗೆ ನಿಗಮದಲ್ಲಿ ಪ್ರಸ್ತಾಪಿಸಿ ಹೆಸರಿಡುವ ಭರವಸೆ ನೀಡಿದ ಶಾಸಕರು ಲೋಕೋಪಯೋಗಿ ಇಲಾಖೆ ರಸ್ತೆಗಳ ಬದಿಯಲ್ಲಿ ಉಳುಮೆ ಮಾಡುವುದು ಹಾಗೂ ಪೈಪ್ ಲೈನ್ ಗಾಗಿ ರಸ್ತೆ ಅಗೆಯುವುದು ದೂರುಗಳು ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪೊಲೀಸ್ ಪ್ರಕರಣ ದಾಖಲಿಸಿದರೆ ಮತ್ತೇ ಈ ಘಟನೆ ಮರುಕಳಿಸುವುದಿಲ್ಲ. ಈ ಘಟನೆ ನಡೆಯದಂತೆ ರಸ್ತೆ ನಿರ್ಮಾಣ ವೇಳೆ ಪ್ರತಿ 400 ಮೀಟರ್ ಅಂತರಕ್ಕೆ ಅಡ್ಡಲಾಗಿ ಪೈಪ್ ಅಳವಡಿಸಿ ರೈತರಿಗೆ ಅನುವು ಮಾಡಲಾಗುತ್ತದೆ. ಈ ಬಗ್ಗೆ ಜನರಿಗೆ ತಿಳಿಸುವ ಕೆಲಸ ಇಲಾಖೆ ಮಾಡಬೇಕು ಎಂದು ಸೂಚಿಸಿದರು.

ಸ್ಮಶಾನ ಭೂಮಿ, ರಸ್ತೆ ತಕರಾರು ಹೀಗೆ ಅನೇಕ ಸಮಸ್ಯೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ತಾಪಂ ಇಓ ಶಿವಪ್ರಕಾಶ್, ಸಿಪಿಐ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...