ಗುಬ್ಬಿ | ಗಾಳಿ ಬೆಳಕಿಗೆ ತೆರಿಗೆ ಬಾಕಿ ಇದೆ ; ತುರುವೇಕೆರೆ ಶಾಸಕ ಕೃಷ್ಣಪ್ಪ ವ್ಯಂಗ್ಯ

Date:

ಗ್ಯಾರಂಟಿ ಯೋಜನೆಗೆ ಹಣ ಹೊಂಚಲಾಗದೆ ಅಭಿವೃದ್ದಿ ಕೆಲಸಗಳನ್ನೇ ಪಕ್ಕಕ್ಕೆ ತಳ್ಳಿ ಎಲ್ಲದಕ್ಕೂ ತೆರಿಗೆ ವಿಧಿಸಿ ಸರ್ಕಾರ ನಡೆಸಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು, ನೀರು ಎಲ್ಲದಕ್ಕೂ ತೆರಿಗೆ ಹಾಕಿ ಉಳಿದ ಗಾಳಿ ಬೆಳಕಿಗೆ ತೆರಿಗೆ ಬಾಕಿ ಇದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ನೀಲೇಗೌಡನಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಹರಿಸುವ 22 ಲಕ್ಷ ರೂಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕೇಂದ್ರದ ಅನುದಾನದ ಕೆಲಸಗಳು ಮಾತ್ರ ಎಲ್ಲಡೆ ನಡೆದಿದೆ. ರಾಜ್ಯ ಸರ್ಕಾರ ಒಂದು ರೂಪಾಯಿ ಅನುದಾನ ನೀಡುತ್ತಿಲ್ಲ. ಜನರ ಅಭಿವೃದ್ದಿ ಪ್ರಶ್ನೆಗೆ ಉತ್ತರ ನೀಡಲಾಗುತ್ತಿಲ್ಲ. ಹೀಗೆ ಜನರಿಗೆ ಬೇಸರ ತಂದ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಆಗಿದೆ ಎಂದು ಕಿಡಿಕಾರಿದರು.

ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಕಾಂಗ್ರೆಸ್ ಈಗ ಅವರು ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದ ಅವರು 2006 ರ ಪ್ರಕರಣ, ಕೋವಿಡ್ ಲೆಕ್ಕಾಚಾರ ಹೀಗೆ ದ್ವೇಷ ರಾಜಕಾರಣ ಆರಂಭಿಸಿ ಮೂಡಾ ಹಗರಣ ಮುಚ್ಚುವ ಅಥವಾ ವಿಷಯಾಂತರ ಮಾಡುವ ಕೆಲಸ ಮಾಡುತ್ತಿದೆ. ಈ ಹಿಂದೆ ಹೊಂದಾಣಿಕೆ ರಾಜಕೀಯ ಮಾಡಿದ್ದ ಕಾಂಗ್ರೆಸ್ ಈಗ ದ್ವೇಷ ಆರಂಭಿಸಿದೆ. ಇವೆಲ್ಲವನ್ನೂ ಜನರೇ ಹತ್ತಿರದಿಂದ ಗಮನಿಸುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಹೇಳಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಅಂಥಹ ಭ್ರಷ್ಟಚಾರ ಕಂಡಿಲ್ಲ. ಯಾವುದೇ ಅಕ್ರಮ ಕಂಡಲ್ಲಿ ತನಿಖೆಗೆ ನಾನೇ ಶಿಫಾರಸ್ಸು ಮಾಡುತ್ತೇನೆ ಎಂದ ಅವರು ನ್ಯಾಯಾಲಯದಲ್ಲಿ ನಡೆದಿರುವ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ವಕೀಲರು ಈಗಾಗಲೇ ವಾದ ಮಂಡಿಸಿದ್ದಾರೆ. ಮುಂದಿನ ನ್ಯಾಯಾಲಯ ಆದೇಶಕ್ಕೆ ಎಲ್ಲರೂ ತಲೆ ಬಾಗಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬೋರಪ್ಪನಹಳ್ಳಿ ಕುಮಾರ್, ಹೋಬಳಿ ಅಧ್ಯಕ್ಷ ಜಗದೀಶ್, ಹೋಬಳಿ ಯುವ ಘಟಕ ಅಧ್ಯಕ್ಷ ನವೀನ್ ಕುಮಾರ್, ಮಾಜಿ ತಾಪಂ ಸದಸ್ಯ ಸಿದ್ದರಾಮಯ್ಯ, ಗ್ರಾಪಂ ಸದಸ್ಯೆ ಲಾವಣ್ಯ, ಮುಖಂಡರಾದ ದೊಡ್ಡೇಗೌಡ, ಶಿವಗಂಗಣ್ಣ, ಶಿವರಾಜ್, ಸಿದ್ದೇಗೌಡ, ಗುತ್ತಿಗೆದಾರ ಚಿಕ್ಕರಾಜು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...