ಗುಬ್ಬಿ | ಕನ್ನಡ ನಾಡು ನುಡಿ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕು : ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ

Date:

ನಮ್ಮ ಮಾತೃಭಾಷೆ ಕನ್ನಡ ಇತಿಹಾಸ ಬಗ್ಗೆ ಜಾಗೃತಿ ಜೊತೆಗೆ ನೆಲ ಜಲ ಭಾಷೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಿ ನಮ್ಮ ಭಾಷೆಯ ಮೇಲಿನ ಅಭಿಮಾನ ಗೌರವ ಹೆಚ್ಚಿಸುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಗುಬ್ಬಿ ತಾಲ್ಲೂಕಿನಲ್ಲೂ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಕರೆ ನೀಡಿದರು.

ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಸಾಪ ತಾಲ್ಲೂಕು ಘಟಕ ಆಯೋಜಿಸಿದ್ದ ಆಜೀವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ಗುಬ್ಬಿ ತಾಲ್ಲೂಕು ಶರಣರ ವಚನ ಸಾಹಿತ್ಯ ಸೇರಿದಂತೆ ಅನೇಕ ಧಾರ್ಮಿಕ ಕ್ಷೇತ್ರಗಳು, ಸಾಹಿತ್ಯ ಕೃಷಿ ನಡೆಸಿದ ಸಾಹಿತಿಗಳು ಕಲಾವಿದರು ಹುಟ್ಟಿ ಬೆಳೆದ ಬಗ್ಗೆ ಬರವಣಿಗೆ ಮೂಲಕ ಭವಿಷ್ಯದ ಸಾಹಿತ್ಯ ಪ್ರೇಮಿಗಳಿಗೆ ತಿಳಿಸಬೇಕಿದೆ ಎಂದರು.

ವಿದೇಶದಲ್ಲಿ ನೆಲೆಸಿದ ಕನ್ನಡಿಗರು ಮಾತೃಭಾಷೆ ವ್ಯಾಮೋಹ ಪ್ರೇಮ ಮೆರೆಯುತ್ತಾರೆ. ಆದರೆ ಇಲ್ಲೇ ನೆಲೆಸಿದ ಕನ್ನಡಿಗರಲ್ಲಿ ಈ ಪ್ರೇಮ ಕಡಿಮೆ ಆಗುತ್ತಿರುವುದು ವಿಪರ್ಯಾಸ. ನಮ್ಮ ಭಾಷಾಭಿಮಾನ ಇಂದಿನ ಮಕ್ಕಳಲ್ಲಿ ವ್ಯಾಪಕವಾಗಿ ಬೆಳೆಸಬೇಕು. ಗಡಿ ಭಾಗದ ಭಾಷೆಯ ತಿಕ್ಕಾಟಕ್ಕೆ ಇತಿಶ್ರೀ ಹಾಡಬೇಕಿದೆ. ಈಗಾಗಲೇ ಮರಾಠಿಗರು ಕನ್ನಡಿಗರ ಮೇಲೆ ಕೆಂಡಕಾರಿದ್ದು ಎಲ್ಲರಿಗೂ ತಿಳಿದ ವಿಚಾರ. ಈ ನಿಟ್ಟಿನಲ್ಲಿ ಕನ್ನಡಾಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ತಿಳಿಸಿದ ಅವರು ಶಾಸ್ತ್ರೀಯ ಸ್ಥಾನಮಾನ ಪಡೆದ ಕನ್ನಡವನ್ನು ತಮಿಳು ಭಾಷೆಯಿಂದ ಬಂತು ಎಂದ ನಟ ಕಮಲಹಾಸನ್ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಆಧಾರ ರಹಿತ ಹೇಳಿಕೆ ಅದು ಪ್ರಚಾರಕ್ಕೆ ನೀಡಿ ಕನ್ನಡಿಗರನ್ನು ಕೆಣಕಿದ್ದು ಸರಿಯಲ್ಲ. ಶಾಂತಿ ಪ್ರಿಯ ಕನ್ನಡಿಗರನ್ನು ಕೆರಳಿಸುವುದು ಯಾವ ಸಾಧನೆಗೆ ಅರ್ಥ ಆಗುತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ಜಿಲ್ಲಾ ಕಾರ್ಯದರ್ಶಿ ಸಣ್ಣಹೊನ್ನಲಿಂಗಯ್ಯ ಮಾತನಾಡಿ ಇಂಗ್ಲೀಷ್ ಹಾವಳಿಗೆ ಕನ್ನಡ ಮರೆಯಾಗುತ್ತಿರುವುದು ನಗರ ಪ್ರದೇಶದಲ್ಲಿ ಕಾಣಬಹುದಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಕನ್ನಡ ಭಾಷೆ ಹಳ್ಳಿ ಸೊಗಡಿನಲ್ಲಿ ರಾರಾಜಿಸುತ್ತಿದೆ. ಹಳ್ಳಿಗಾಡಿನ ಸಾಹಿತ್ಯ, ಜನಪದ ಹಾಡು, ನೃತ್ಯ, ಕಲೆಗಳನ್ನು ಉಳಿಸಿ ಬೆಳೆಸಲು ಕಸಾಪ ಬದ್ಧವಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಪರಿಷತ್ತು ಕೆಲಸ ಮಾಡಲಿ ಎಂದು ಆಶಿಸಿದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಚಟುವಟಿಕೆಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಸಹಕಾರ ಇದೆ. ಸಾಹಿತ್ಯ ಸಮ್ಮೇಳನ ತಾಲ್ಲೂಕಿನಲ್ಲಿ ನಡೆಯಬೇಕಿದೆ. ಎಲ್ಲಾ ಕನ್ನಡಿಭಿಮಾನಿಗಳು ಕೈ ಜೋಡಿಸಿ ಸಮ್ಮೇಳನ ನಡೆಸೋಣ. ಎಲ್ಲಾ ರೀತಿಯ ಸಹಕಾರ ಅಗತ್ಯ ಇರುವ ಕಾರಣ ಒಂದು ಕಚೇರಿ ಮಾಡುವ ನಿಟ್ಟಿನಲ್ಲಿ ನಿವೇಶನ ಕೋರಿದ್ದಾರೆ. ಪಟ್ಟಣ ಪಂಚಾಯತಿ ಮೂಲಕ ನಿವೇಶನ ಒದಗಿಸುವ ಭರವಸೆ ನೀಡಿದರು.

ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಮಾತನಾಡಿ ಗುಬ್ಬಿ ತಾಲ್ಲೂಕಿನಲ್ಲಿ ಆಜೀವ ಸದಸ್ಯರ ಒಗ್ಗೂಡಿಸಿ ಪರಿಷತ್ತಿನ ಮುಂದಿನ ಕೆಲಸ ಬಗ್ಗೆ ಚರ್ಚೆ ನಡೆಸಬೇಕಿದೆ. ಸಾಹಿತ್ಯ ಚಟುವಟಿಕೆಗೆ ಮುಂದಿನ ರೂಪುರೇಷೆ ರಚಿಸಬೇಕಿದೆ. ಈ ಜೊತೆಗೆ ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ತಾಲ್ಲೂಕು ಮಟ್ಟದಲ್ಲಿ ನಡೆಸಲು ಪೂರ್ವಭಾವಿ ಸಭೆ ನಡೆಸಲು ಕಸಾಪ ಸಜ್ಜಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ತೇಜಸ್ವಿ, ನಿವೃತ್ತ ಡಿಡಿಪಿಐ ಎಚ್.ಕೆ.ನರಸಿಂಹಮೂರ್ತಿ, ಡಾ.ಮುರಳೀಧರ್, ಕಸಾಪ ತಾಲ್ಲೂಕು ಕಾರ್ಯದರ್ಶಿ ಕುಮಾರಸ್ವಾಮಿ, ಖಜಾಂಚಿ ಸುಬ್ರಹ್ಮಣ್ಯ, ಪದಾಧಿಕಾರಿಗಳಾದ ಕೆ.ಎಂ.ರವೀಶ್, ಜಯಪ್ರಕಾಶ್, ದಿವ್ಯಪ್ರಕಾಶ್, ಪಾಪಣ್ಣ, ಶಿವಣ್ಣ, ದಯಾನಂದ್, ಸುರೇಶಯ್ಯ, ಗುರುಪ್ರಸಾದ್, ಕೆ.ವಿ.ದಯಾನಂದ್, ಸೋಮಣ್ಣ, ಚನ್ನಬಸವಯ್ಯ, ಲಯನ್ಸ್ ಕ್ಲಬ್ ಜ್ಞಾನದೇವ್, ವಿವೇಕಾನಂದ ಆಚಾರ್ಯ, ರವೀಶ್, ಶಿವಗಂಗಮ್ಮ, ಕೋಟೆ ಗಂಗಾಧರಸ್ವಾಮಿ, ಕುಮಾರ ಕವಿಗಳಾದ ಅಂಜನಕುಮಾರ್, ಅರುಣ್ ರಾಜ್, ಸಿಂಧು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...