ಗುಬ್ಬಿ | ವೆಬ್ ಸೈಟ್ ದೇವಾಲಯದ ಪಾರದರ್ಶಕದಂತೆ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಗೋಸಲ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ನೂತನವಾಗಿ ವೆಬ್ ಸೈಟ್ ಮೂಲಕ ದೇವಾಲಯದ ಎಲ್ಲಾ ವಿಚಾರ ಹರಿಬಿಟ್ಟು ದೇಶವಿದೇಶದಲ್ಲಿನ ಭಕ್ತರಿಗೆ ಅವಶ್ಯ ಮಾಹಿತಿ ರವಾನಿಸುವ ಕೆಲಸ ನಡೆದಿದೆ. ಈ ಜೊತೆಗೆ ದೇವಾಲಯಕ್ಕೆ ದೇಣಿಗೆಯನ್ನು ನೇರ ಖಾತೆಗೆ ನೀಡಿ ದೇವಾಲಯದ ಅಭಿವೃದ್ದಿಗೆ ಸಹಕರಿಸಲು ಅವಕಾಶ ಮಾಡಲಾಗಿದೆ. ಒಟ್ಟಾರೆ ದೇವಾಲಯದ ಪಾರದರ್ಶಕ ರೀತಿ ವೆಬ್ ಸೈಟ್ ಕೆಲಸ ಮಾಡಲಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಗುಬ್ಬಿ ಪಟ್ಟಣದ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ನೂತನ https://gubbigosalachannabasaveshwara.com/ ವೆಬ್ ಸೈಟ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಈ ವೆಬ್ ಮೂಲಕ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ. ನಂತರದಲ್ಲಿ ಇಲ್ಲಿ ಮೂಲಭೂತ ಸವಲತ್ತುಗಳ ಜೊತೆ ಅತ್ಯವಶ್ಯ ಸೌಕರ್ಯ ಸಿದ್ಧಪಡಿಸಿ ಪ್ರವಾಸಿ ತಾಣವಾಗಿ ಮಾರ್ಪಾಟು ಮಾಡಲಾಗುವುದು ಎಂದರು.

ನೆನೆಗುದಿಗೆ ಬಿದ್ದ ಯಾತ್ರಿ ನಿವಾಸವನ್ನು ಮುಂದುವರೆಸಿ ಭಕ್ತರ ತಂಗುದಾಣಕ್ಕೆ ಅವಶ್ಯ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಈ ಕಾರ್ಯಕ್ಕೆ 5 ಕೋಟಿ ರೂಗಳ ಮಂಜೂರಾತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಜೊತೆಗೆ ಆಕರ್ಷಕ ಉದ್ಯಾನವನ ಕೂಡಾ ನಿರ್ಮಾಣ ಮಾಡಲಾಗುವುದು. ಪೂಜಾ ಕಾರ್ಯಕ್ರಮ ಹಾಗೂ ದೇಣಿಗೆಗೆ ವೆಬ್ ಸೈಟ್ ಮೂಲಕ ಭಕ್ತರು ಮಾಹಿತಿ ಪಡೆಯಬಹುದು. ಆಧುನಿಕತೆಗೆ ತಕ್ಕಂತೆ ದೇವಾಲಯ ಆಡಳಿತ ರೂಪ ಬದಲಿಸಿರುವುದು ಸ್ವಾಗತಾರ್ಹ. ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದ ಅವರು ಯಾವುದೇ ಅನುಮಾನಕ್ಕೆ ಅವಕಾಶ ಇಲ್ಲದೆ ಪಾರದರ್ಶಕ ಆಡಳಿತ ನಡೆಯಲಿದೆ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷೆ ಶ್ವೇತಾ, ಸದಸ್ಯರಾದ ಮಹಮ್ಮದ್ ಸಾದಿಕ್, ರೇಣುಕಾ ಪ್ರಸಾದ್, ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಕುಮಾರ್, ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್, ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಉಂಡೆ ರಾಮಣ್ಣ, ಕಂದಾಯ ನಿರೀಕ್ಷಕ ವಿನೋದ್, ದೇವಾಲಯ ಸಿಬ್ಬಂದಿ ಕಿರಣ್, ಚೇತನಾ, ಅರ್ಚಕ ರಾಜೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...