ಗುಬ್ಬಿ | ಗುಂಡುತೋಪು ಹೆಸರಿನಲ್ಲಿ ಇಡೀ ಅಂಕಳಕೊಪ್ಪ ಗ್ರಾಮವನ್ನೇ ಒಕ್ಕಲೆಬ್ಬಿಸುವ ಹುನ್ನಾರ : ಮಾಜಿ ಶಾಸಕ ಮಸಾಲಾ ಜಯರಾಮ್

Date:

 ನೂರಾರು ವರ್ಷದಿಂದ ಏಳೆಂಟು ತಲೆಮಾರು ಜನರು ಬದುಕು ಕಟ್ಟಿಕೊಂಡ ಅಂಕಳಕೊಪ್ಪ ಗ್ರಾಮಕ್ಕೆ ಏಕಾಏಕಿ ಆಗಮಿಸಿದ ತಾಲ್ಲೂಕು ಆಡಳಿತ ಸರ್ವೇ ನಡೆಸಿ ಸುಮಾರು 70 ಮನೆಗಳು ಗುಂಡುತೋಪು ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿರುವುದು ಖಂಡನೀಯ. ಅವೈಜ್ಞಾನಿಕ ಸರ್ವೇ ಸ್ಕೆಚ್ ಹಿಡಿದು ಮುಗ್ಧ ಜನರನ್ನು ಹೆದರಿಸಿ ಮನೆ ಒಡೆಯಲು ಬಂದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಮಸಾಲಾ ಜಯರಾಮ್ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಸಂತ್ರಸ್ತರೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೂರಾರು ವರ್ಷದಿಂದ ಸರ್ಕಾರದ ಎಲ್ಲಾ ಸವಲತ್ತು ಪಡೆದ ಈ ಗ್ರಾಮದಲ್ಲಿ ನೀರು, ರಸ್ತೆ, ದೀಪ, ಕರೆಂಟ್, ಜಲ ಜೀವನ್ ಮಿಷನ್ ನಳ ಸಂಪರ್ಕ ಹೀಗೆ ಅನೇಕ ಸವಲತ್ತು ಒದಗಿಸಿದ ಗ್ರಾಮ ಪಂಚಾಯಿತಿ ಕಂದಾಯ ಕೂಡಾ ವಸೂಲಿ ಮಾಡಿದೆ. ಇಖಾತೆ, ಇಸ್ವತ್ತು ಕೂಡಾ ಮಾಡಿಕೊಟ್ಟು ಬ್ಯಾಂಕ್ ಗಳು ಸಾಲವನ್ನು ಕೂಡಾ ನೀಡಿದೆ. ಇಷ್ಟೆಲ್ಲಾ ಅನುಕೂಲ ಪಡೆದ ಗ್ರಾಮಸ್ಥರನ್ನು ಹೇಗೆ ಒಕ್ಕಳೆಬ್ಬಿಸುತ್ತೀರಿ ಎಂದು ಪ್ರಶ್ನಿಸಿದರು.

ಯಾವುದೇ ಸರ್ಕಾರಿ ಯೋಜನೆ , ಕಟ್ಟಡಗಳು ನಮ್ಮೂರಿಗೆ ಮಂಜೂರಾಗಿಲ್ಲ. ಸರ್ಕಾರದ ಉದ್ದೇಶಕ್ಕೆ ಬಳಕೆ ಆಗಬೇಕಾದ ಜಾಗ ಸರಿಯಾಗಿ ನಿಗದಿ ಮಾಡಿಲ್ಲ. ಇಡೀ ಗ್ರಾಮವನ್ನು ಸ್ಕೆಚ್ ನಲ್ಲಿ ಸೇರಿಸಿದ ಸರ್ವೇ ಅವೈಜ್ಞಾನಿಕ. ಸರ್ವೇ ನಂಬರ್ 168 ರಲ್ಲಿ 6 ಎಕರೆ ಗುಂಡುತೋಪು ಜಾಗ ಈ ಗ್ರಾಮದ ಪಕ್ಕದಲ್ಲಿರುತ್ತದೆ. ಯಾವ ಉದ್ದೇಶಕ್ಕೆ ಇಡೀ ಗ್ರಾಮವನ್ನು ಖಾಲಿ ಮಾಡಿಸಲು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಮುಂದಾಗಿದ್ದಾರೆ ತಿಳಿದಿಲ್ಲ. ಏಕಾಏಕಿ ನಾರನಹಳ್ಳಿ ಬಳಿ ನಿಮಗೆ ಜಾಗ ನೀಡುತ್ತೇವೆ ಎನ್ನುತ್ತಿದ್ದಾರೆ. ಲೋಕಾಯುಕ್ತ ಹೆಸರು ಮುಂದೆ ತಂದು ಮುಗ್ಧ ಜನರಿಗೆ ತೊಂದರೆ ನೀಡುವುದು ಸರಿಯಲ್ಲ. ದುಡ್ಡಿಗಾಗಿ ಇದೆಲ್ಲಾ ಮಾಡುವುದಾದರೆ ಅದನ್ನೂ ಕುಳಿತು ಮಾತನಾಡೋಣ ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಪಡೆದ ಇಲ್ಲಿನ ಬಡ ರೈತರು ತಮ್ಮ ಒಡವೆ ಮಾರಿ ಮನೆ ಕಟ್ಟಿಸಿಕೊಂಡಿದ್ದಾರೆ. ನೂರಾರು ವರ್ಷಗಳಿಂದ ಯಾರು ಕೇಳದ ಗುಂಡುತೋಪು ಜಾಗ ಎಂಬ ಮಾತು ಇಲ್ಲಿನ ಜನರಿಗೆ ಆತಂಕ ತಂದಿದೆ. ಜೆಸಿಬಿ ಯಂತ್ರಗಳನ್ನು ತಂದು ಮನೆಗಳನ್ನು ಕೆಡವಲು ತಾಲ್ಲೂಕು ಆಡಳಿತ ಮುಂದಾದರೆ ನಮ್ಮ ಹೆಣಗಳ ಮೇಲೆ ಜೆಸಿಬಿ ಹರಿಸಿ ಮುಂದುಬರೆಯಬೇಕಿದೆ ಎಂದು ಎಚ್ಚರಿಸಿದ ಅವರು ಗುಂಡುತೋಪು ಒತ್ತುವರಿ ಮಾಡಿರುವ ನೂರಾರು ಸ್ಥಳವನ್ನು ಬಿಟ್ಟು ಬಡವರ ವಿರುದ್ಧ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕಾನೂನು ಬೆದರಿಕೆಯೊಡ್ಡಿದ್ದೀರಿ. ತಾಲ್ಲೂಕಿನಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿ ಕಟ್ಟಡಗಳು, ಮದುವೆ ಮನೆ ಕಟ್ಟಿರುವ ನಿದರ್ಶನವಿದೆ. ಎಲ್ಲವನ್ನೂ ಖುಲ್ಲಾ ಮಾಡುವಿರಾ ಎಂದು ಪ್ರಶ್ನಿಸಿ, ನೂರಾರು ವರ್ಷದಿಂದ ವಾಸವಿರುವ ಜನರನ್ನು ಒಕ್ಕಲೆಬ್ಬಿಸುವ ಕೆಲಸ ಬಿಟ್ಟು ಗ್ರಾಮಕ್ಕೆ ಒಳ್ಳೆಯ ಅನುಕೂಲ ಮಾಡಲು ಪ್ರಯತ್ನ ಮಾಡಿ ಎಂದು ತಿಳಿಸಿದರು.

ವರದಿ- ಎಸ್. ಕೆ. ರಾಘವೇಂದ್ರ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...