ಅನುಮಾನ ಪಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿ ಡೆತ್ ನೋಟ್ ಬರೆದಿಟ್ಟು ಮನೆಯ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಮಡೇನಹಳ್ಳಿ ಗ್ರಾಮದ ವಾಸಿಯಾದ ಲಕ್ಷ್ಮೀ(30) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಬೆಂಗಳೂರು ಮೂಲದ ಈಕೆ ಮದುವೆಯಾಗಿ 6 ವರ್ಷ ಕಳೆದಿದೆ. ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.
ತಡರಾತ್ರಿ ಗಂಡ ಮತ್ತು ಹೆಂಡತಿಯ ನಡುವೆ ಜಗಳ ನಡೆದಿದ್ದು ಮನನೊಂದ ಲಕ್ಷ್ಮೀ ಪತಿಯ ಸಂಶಯ ವರ್ತನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಡೆತ್ ನೋಟ್ ಬರೆದಿರುವ ಹಿನ್ನಲೆ ಸ್ಥಳಕ್ಕೆ ಆಗಮಿಸಿದ ಗುಬ್ಬಿ ಪೊಲೀಸರು ಪತಿ ರಾಜು, ಅತ್ತೆ ಮಾವ ಅವರನ್ನು ವಶಕ್ಕೆ ಪಡೆದು ಸಾವಿನ ಬಗ್ಗೆ ಮುಂದಿನ ಕ್ರಮ ಕೈಗೊಂಡಿದ್ದಾರೆ.





