ಗುಬ್ಬಿ | ಗೂಗಲ್ ಲೊಕೇಶನ್ ಬಳಸಿ ಕಳ್ಳತನ : ಖತರ್ನಾಕ್ ಕಳ್ಳರ ಬಂಧನ

Date:

ಗೂಗಲ್ ಲೊಕೇಶನ್ ಬಳಸಿ ನಿಯರೆಸ್ಟ್ ಟೆಂಪಲ್ ಫಾರ್ ಮಿ ಎಂದು ಸರ್ಚ್ ಮಾಡಿ ಹತ್ತಿರದ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿ.ಎಸ್.ಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.

ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ.ಕೊಡಗೇಹಳ್ಳಿ ಗ್ರಾಮದ ಕೋಡಿಕೆಂಪಮ್ಮ ದೇವಸ್ಥಾನದ ಬಾಗಿಲು ಬೀಗ ಮುರಿದು ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಲು ದೇವಸ್ಥಾನದ ಒಳಗೆ ಹೋಗಿ ಹುಂಡಿಯನ್ನು ಹೊರಗಡೆ ತಂದಾಗ ಗ್ರಾಮಸ್ಥರ ಕೂಗಾಟ ಕೇಳಿಸಿಕೊಂಡ ಕಳ್ಳರು ಹುಂಡಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ದೇವಸ್ಥಾನದ ಬಳಿ ಬಿಟ್ಟು ಓಡಿ ಹೋಗಿದ್ದ ಪ್ರಕರಣ ಭೇದಿಸಿದ್ದ ಸಿ.ಎಸ್.ಪುರ ಪೊಲೀಸರು ಖತರ್ನಾಕ್ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.

ಬಂದಿತ ಆರೋಪಿಗಳನ್ನ ನರಸಿಂಹಮೂರ್ತಿ(21) ವರ್ಷ ಮತ್ತೊಬ್ಬ ನಾಗರಾಜು(18) ಎನ್ನಲಾಗಿದೆ. ಇಬ್ಬರು ವ್ಯಕ್ತಿಗಳ ವಿಳಾಸ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೋಕಿನ ಕಾರೆಹಳ್ಳಿ ಮಜರೇ ಬೊಮ್ಮನಹಳ್ಳಿ ಗ್ರಾಮ ಎಂದು ತಿಳಿದು ಬಂದಿದೆ. ಇಬ್ಬರ ತಂದೆಯ ಹೆಸರು ವಸಂತಕುಮಾರ್ ಎಂದು ಇದ್ದು ಇಬ್ಬರು ಸಹೋದರರು ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಮೊದಲಿಗೆ ಕಳ್ಳತನಕ್ಕೆ ಬಳಸಿದ್ದ ಕೆಎ 02 ಎಡಿ 6543 ಎಂಬ ಕಾರಿನ ಮಾಲೀಕರ ವಿಳಾಸ ಸಂಗ್ರಹಿಸಿ ಪ್ರಕರಣ ಕೈಗೆತ್ತಿಕೊಂಡ ಇಬ್ಬರು ಆರೋಪಿಗಳನ್ನ ದಸ್ತಗಿರಿ ಮಾಡಿ ವಿಚಾರ ಮಾಡಲಾಗಿ ಆರೋಪಿತರು ಗೂಗಲ್ ಲೊಕೇಶನ್ ನಲ್ಲಿ ಟೆಂಪಲ್ ನಿಯರ್ ಫಾರ್ ಮಿ ಎಂದು ಸರ್ಚ್ ಮಾಡಿ ಊರುಗಳಿಂದ ಹೊರಗಡೆ ಒಂಟಿಯಾಗಿರುವ ಮತ್ತು ಭದ್ರತೆ ಇಲ್ಲದಿರುವ ಹುಂಡಿ ಹೊಡೆದರೆ ಅಲ್ಲಿ ಹಣ ಇದ್ದೇ ಇರುತ್ತೆ ಎಂದು ತಿಳಿದು ದೇವಸ್ಥಾನದ ಹುಂಡಿ ಹಣ ಮತ್ತು ದೇವರ ಒಡವೆಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಜೊತೆಗೆ ದೇವಸ್ಥಾನಗಳಲ್ಲಿ ಹುಂಡಿ ಕಳ್ಳತನ ಮಾಡಿದ್ದ ಹಣದಿಂದ ಮೇಲ್ಕಂಡ ಕೆಎ 02 ಎಡಿ 6543 ಎಂಬ ಟೊಯೋಟೊ ಇಟಿಯೋಸ್ ಕಾರನ್ನು ಖರೀದಿ ಮಾಡಿ ಕಳ್ಳತನಗಳಿಗೆ ಬಳಸುತ್ತಿದ್ದು ಎಂಬುದು ತಿಳಿಯುವುದರ ಜೊತೆಗೆ ಈ ಕಾರ್ಯಾಚರಣೆಯಿಂದ ಸಿ.ಎಸ್.ಪುರ ಪೊಲೀಸ್ ಠಾಣೆ ಸೇರಿದಂತೆ ಗುಬ್ಬಿ ಮತ್ತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಗಳಿಗೆ ಸೇರಿದ ಒಟ್ಟು ಎಂಟು ಪ್ರಕರಣಗಳನ್ನು ಭೇದಿಸುವಲ್ಲಿ ಸಿ.ಎಸ್.ಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿರಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರಾದ ಬಿ.ಕೆ.ಶೇಖರ್ ಅವರ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತದ ಸಿಪಿಐ ರಾಘವೇಂದ್ರ.ಟಿ.ಆರ್ ನೇತೃತ್ವದ ಸಿ.ಎಸ್ ಪುರ ಪಿಎಸ್ಐ ಶಿವಕುಮಾರ್ ತಂಡದಲ್ಲಿ ಸಿಬ್ಬಂದಿಗಳಾದ ಸಿದ್ದರಾಜು, ರಾಜು, ವಿಜಯಕುಮಾರ್,ಮತ್ತು ಭೀಮೇಶ್ ಎಂಬ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಪ್ರಶಂಸಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...