ಗುಬ್ಬಿ | ಜಾನಪದ ಉತ್ಸವದಲ್ಲಿ ಉತ್ಸುಕತೆಯೇ ಇಲ್ಲ : ರಂಗಭೂಮಿ ಕಲಾವಿದೆ ಬಿ.ಜಯಶ್ರೀ ವಿಷಾದ

Date:

ಜಾನಪದ ಉತ್ಸವದಲ್ಲಿ ಜಾನಪದ ಹಾಡುಗಳು ಇಲ್ಲದೆ ಕೇವಲ ಚಲನಚಿತ್ರ ಗೀತೆಗಳಿಗೆ ಮಾರುಹೋದರೆ ಇಂದಿನ ಕಾರ್ಯಕ್ರಮ ಹೇಗೆ ಅರ್ಥ ಗಳಿಸುತ್ತದೆ. ಮೊಬೈಲ್ ನಲ್ಲಿ ನಿರತರಾಗಿರುವ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಸ್ಕಾರ ಕಾಣದಿರುವುದು ಬೇಸರ ಮೂಡಿಸಿದೆ ಎಂದು ರಂಗಕಲಾವಿದೆ ಶ್ರೀಮತಿ ಬಿ.ಜಯಶ್ರೀ ದೇವಿ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜಾನಪದ ಉತ್ಸವ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಜಾನಪದ ಉತ್ಸವ ಎಂಬ ಎಂಬ ಅಭೂತಪೂರ್ವ ಕಾರ್ಯಕ್ರಮ ಮಾಡಿ ಕೇವಲ ಚಲನಚಿತ್ರ ಗೀತೆಗಳ ಜೊತೆಗೆ ವಾದ್ಯಗೋಷ್ಠಿ ಮಾಡಿ ತಾವೆಲ್ಲರೂ ಕುಣಿದು ಕುಪ್ಪಳಿಸುವ ಕೆಲಸ ಮಾಡುವುದು ಸರಿಯಲ್ಲ. ಜಾನಪದಕ್ಕೆ ಅರ್ಥ ನೀಡುವ ಕಾರ್ಯಕ್ರಮ ಎನಿಸಲಿಲ್ಲ ಎಂದು ವಿಷಾದಿಸಿದರು.

1001203028

ಜಾನಪದ ಉತ್ಸವದಲ್ಲಿ ಹಾಡು, ಕಲೆ,ಸೋಬಾನೆ ಪದಗಳ ಮೂಲಕ ಜಾನಪದ ಸೊಗಡನ್ನು ಬಿಂಬಿಸುವ ಕಾರ್ಯಕ್ರಮ ಇದಾಗದಿರುವುದು ಬೇಸರ ಮೂಡಿಸಿದೆ. ಯಾರು ಏನೇ ಬೈದು ಕೊಂಡರು ನನಗೆ ಬೇಸರವಿಲ್ಲ, ಐ ಡೊಂಟ್ ಕೇರ್ ಎಂದ ಅವರು ಸೊಗಡಿನ ಕಂಪನ್ನು ಪಸರಿಸುವ ಕೆಲಸವನ್ನು ಮಾಡದಿರುವ ಬಗ್ಗೆ ಎಚ್ಚೆತ್ತು ಮುನ್ನಡೆಯಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಟಕ ರಂಗಭೂಮಿ ಸೇರಿದಂತೆ ಜಾನಪದ ಸೊಗಡನ್ನು ಉಳಿಸುವ ನಿಟ್ಟಿನಲ್ಲಿ ಸಂಸ್ಕೃತಿ ಮತ್ತು ಪರಂಪರೆಯನ್ನು ಹಿಂದಿನ ಪೀಳಿಗೆ ಉಳಿಸುವ ಕೆಲಸ ಮಾಡಬೇಕಿದೆ. ಆಗ ಮಾತ್ರ ನಮ್ಮ ಕಲೆ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ಈ ಕಾರ್ಯಕ್ರಮ ನಾನೇ ನಿರ್ವಹಣೆ ಮಾಡಿದ್ದರೆ ಎಲ್ಲಾ ಜನಪದ ಶೈಲಿ ಮೆಳೆಸುವಂತೆ ಮಾಡುತ್ತಿದ್ದೆ. ಕೇವಲ ಹೆಣ್ಣು ಮಕ್ಕಳು ಮಾತ್ರ ಅಲಂಕಾರ ಮಾಡಿಕೊಂಡು ಗಂಡು ಮಕ್ಕಳು ಜೀನ್ಸ್ ಪ್ಯಾಂಟ್ ಧರಿಸಿರುವುದು ಉತ್ಸವದ ಅರ್ಥ ಕಳೆದುಕೊಂಡಿದೆ ಎಂದರು.

1001203027

ಪ್ರಾಂಶುಪಾಲ ಪ್ರಸನ್ನಕುಮಾರ್ ಮಾತನಾಡಿ ನಿಮ್ಮ ಈ ಶಿಸ್ತು ಸಂಸ್ಕಾರ ಮತ್ತು ಮೊಬೈಲ್ ಗೀಳಿನ ನಡೆ ಕಂಡು ಅಥಿತಿಯಾಗಿ ಕಾರ್ಯಕ್ರಮದ ಉದ್ಘಾಟನೆಗೆ ಬಂದಿದ್ದ ಜಯಶ್ರೀ ಅಮ್ಮನವರು ತುಂಬಾ ಬೇಸರ ಮಾಡಿಕೊಂಡಿದ್ದಾರೆ. ಮತ್ತೆ ಹೇಗೆ ಕಾರ್ಯಕ್ರಮಕ್ಕೆ ಅವರನ್ನು ಕರೆಯೋದು ಎಂದು ವಿದ್ಯಾರ್ಥಿಗಳಿಗೆ ಪ್ರಶ್ನಿಸಿ ಕಾರ್ಯಕ್ರಮದಲ್ಲಿ ಶೋಭೆ ತರುವ ಕೆಲಸ ಮಾಡಲು ತಿಳಿ ಹೇಳಿದರು.

ಉತ್ಸವದಲ್ಲಿ ಹಳ್ಳಿಗಾಡಿನ ವಾತಾವರಣವನ್ನು ಕಾಲೇಜು ಆವರಣದಲ್ಲಿ ಸೃಷ್ಟಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಮಟೆ ನರಸಮ್ಮ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...