ಗುಬ್ಬಿ | ತಹಶೀಲ್ದಾರ್ ವಸತಿ ಗೃಹ ಅವರಣದಲ್ಲೇ ಗಂಧದ ಮರಗಳನ್ನು ಕಡಿದ ಕಳ್ಳರು

Date:

ಗುಬ್ಬಿ ತಾಲ್ಲೂಕು ದಂಡಾಧಿಕಾರಿಗಳ ವಸತಿ ಗೃಹದಲ್ಲಿ ಸೊಗಸಾಗಿ ಬೆಳೆದಿದ್ದ ಗಂಧದ ಮರಗಳಿಗೆ ಕೊಡಲಿ ಇಟ್ಟ ಖದೀಮರು ಗಂಧದ ಮರ ಕಡಿದು ದುಷ್ಕೃತ್ಯ ಮೆರೆದಿರುವ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಮೀಪದ ಕೂಗಳತೆ ದೂರದಲ್ಲಿರುವ ಎಂ.ಜಿ.ರೋಡ್ ರಸ್ತೆಯ ತಹಶೀಲ್ದಾರ್ ವಸತಿಗೃಹದ ಆವರಣದಲ್ಲಿದ್ದ ಸುಮಾರು ಆರು ಗಂಧದ ಮರಗಳ ಪೈಕಿ ಎರಡು ಮರಗಳನ್ನು ಮಧ್ಯ ಭಾಗದವರೆಗೆ ಕುಯ್ದು ಒಂದು ಮರವನ್ನು ಬುಡಸಹಿತ ಕಡಿದು ಹಾಕಲಾಗಿದೆ.

ನಂತರ ಪಟ್ಟಣದ ಹಳೇ ಏಕೆ ಕಾಲೋನಿ ಬಳಿಯ ಸರ್ಕಾರಿ ಶಾಲೆಯ ಮುಂಭಾಗ ಇದ್ದ ಒಂದು ಗಂಧದ ಮರವನ್ನು ಬುಡಕ್ಕೆ ಕೊಡಲಿ ಪೆಟ್ಟು ನೀಡಿ ಧರೆಗುರುಳಿಸಿದ್ದಾರೆ. ಇತ್ತೀಚಿಗೆ ಗುಬ್ಬಿ ಪಟ್ಟಣದಲ್ಲಿ ಹಾಡಾಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಜೊತೆಗೆ ಒಡವೆ ಕದ್ದು ಕಳ್ಳರು ಕೈ ಚಳಕ ತೋರಿರುವ ಘಟನೆ ಜೊತೆಗೆ ವೈಯಕ್ತಿಕ ದ್ವೇಷಕ್ಕೆ ರೈತರ ಅಡಿಕೆ ಮರ ಕಡಿದು ದುಷ್ಕೃತ್ಯ ಮೆರೆಯುತ್ತಿರುವ ಘಟನೆ ಹೀಗೆ ಅನೇಕ ಅಪರಾಧ ಕೃತ್ಯಗಳು ಕಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್ ಮನೆಯಲ್ಲೇ ಗಂಧದ ಮರಗಳನ್ನು ಕಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಗುಬ್ಬಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಮಟ್ಟ ಹಾಕಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...