ಗುಬ್ಬಿ | ರೈತರ ರಾಗಿ ಚೀಲ ಕದ್ದ ಕಳ್ಳರ ಬಂಧನ : ಗುಬ್ಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ

Date:

ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂದಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರೂ ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಸಿಕೊಂಡಿರುವ ಮಿಂಚಿನ ಕಾರ್ಯಾಚರಣೆ ಗುಬ್ಬಿ ಪೊಲೀಸರು ನಡೆಸಿದ್ದಾರೆ.

ಗುಬ್ಬಿ ಪಟ್ಟಣದ ಹೊರ ವಲಯ ಹೇರೂರು ಗ್ರಾಮದ ರೈತ ರಾಜೇಶ್ ಎಂಬಾತ ತನ್ನ ಮನೆಯ ಮುಂದೆ ಜೋಡಿಸಿ ಇಟ್ಟಿದ್ದ 30 ರಾಗಿ ಚೀಲವನ್ನು ಕಳ್ಳರು ಕೈ ಚಳಕ ತೋರಿ ಕದ್ದೊಯ್ದಿದ್ದ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ಪ್ರಕರಣ ದಾಖಲಿಸಿದ್ದರು. ಖಚಿತ ಮಾಹಿತಿ ಆಧರಿಸಿ ಒಂದು ತಿಂಗಳಲ್ಲಿ ಪ್ರಕರಣ ಭೇದಿಸಿ ಗುಬ್ಬಿ ಪಟ್ಟಣದ ಮಹಾಲಕ್ಷ್ಮಿನಗರ ಬಡಾವಣೆಯ ಪ್ರಶಾಂತ್ ಕುಮಾರ್(30) ಹಾಗೂ ಚೇಳೂರು ಹೋಬಳಿ ಸಾತೇನಹಳ್ಳಿ ಗೇಟ್ ಬಳಿಯ ರಾಜು(25) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

1001127108

ಹೇರೂರು ರಾಗಿ ಚೀಲ ಕಳವು ಕೇಸಿನ ಬಗ್ಗೆ ತನಿಖೆ ಕೈಗೊಂಡ ಸಮಯದಲ್ಲೇ ಆರೋಪಿಗಳಿಂದ ಮತ್ತೊಂದು ಕಳ್ಳತನ ಕಲ್ಲೂರು ಕ್ರಾಸ್ ಬಳಿಯಲ್ಲಿ ನಡೆದಿದ್ದ ರಾಗಿ ಚೀಲ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಮಾಲು ಸಮೇತ ಆರೋಪಿಗಳ ಎಡೆಮುರಿ ಕಟ್ಟುವಲ್ಲಿ ತಿಂಗಳಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಪತ್ತೆಹಚ್ಚಲು ಶ್ರಮಿಸಿದ ಶಿರಾ ಉಪವಿಭಾಗದ ಡಿವೈಎಸ್ಪಿ ಬಿ.ಕೆ ಶೇಖರ್ ರವರ ಮಾರ್ಗದರ್ಶನದಲ್ಲಿ ಗುಬ್ಬಿ ವೃತ್ತ ನಿರೀಕ್ಷಕ ರಾಘವೇಂದ್ರ ರವರ ನೇತೃತ್ವದ ತಂಡ ಗುಬ್ಬಿ ಪಿಎಸ್ಸೈ ಸುನಿಲ್ ಕುಮಾರ್ ಮತ್ತು ಸಿಬ್ಬಂದಿಗಳಾದ ನವೀನ್ ಕುಮಾರ್, ವಿಜಯ್, ಪ್ರಶಾಂತ್, ರಬ್ಬಾನಿ, ಭೂತೇಶ್, ನಟರಾಜು ಅವರನ್ನು ಒಳಗೊಂಡ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ ರವರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...