ಗುಬ್ಬಿ | ಅಂಕ ಗಳಿಕೆಗೆ ಮಾತ್ರ ಮಾನ್ಯತೆ ಸಿಗುವ ಕಾಲ : ಶಾಸಕ ಎಸ್.ಆರ್.ಶ್ರೀನಿವಾಸ್

Date:

 ಆಧುನಿಕತೆ ಬೆಳೆದಂತೆ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಈ ನಿಟ್ಟಿನಲ್ಲಿ ಅಂಕ ಗಳಿಕೆಗೆ ಹೆಚ್ಚಿನ ಪ್ರಾಧಾನ್ಯತೆ ದೊರಕಿದೆ. ಸಾಮಾನ್ಯ ಮೀಸಲಿಗೆ ಶೇಕಡಾ 98 ಕ್ಕೆ ನಿಂತಿದೆ. ಪರಿಶಿಷ್ಟ ವರ್ಗಕ್ಕೆ 92 ಕ್ಕೆ ಬಂದಿದೆ. ಇವೆಲ್ಲಾ ಸ್ಪರ್ಧಾತ್ಮಕ ಜಗತ್ತಿನ ಪ್ರತಿಷ್ಠೆಯಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ರೋವರ್‌ ಮತ್ತು ರೇಂಜ‌ರ್, ಯುವ ರೆಡ್‌ಕ್ರಾಸ್ ಐ.ಕ್ಯೂ.ಎ.ಸಿ., ಎನ್.ಸಿ.ಸಿ. ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಸ್ತು ಸಂಯಮ ಜೊತೆಗೆ ಶಿಕ್ಷಣ ಕಲಿಯಲು ಗುರಿ ಇಟ್ಟುಕೊಂಡು ಬದ್ಧತೆಯಲ್ಲಿ ಕಲಿಯಬೇಕು ಎಂದರು.

ಹದಿಹರೆಯದ ವಯಸ್ಸಿನ ಮಕ್ಕಳು ಈಗ ಒಳ್ಳೆಯದು ಕೆಟ್ಟದ್ದು ಅರಿಯುವ ಮನಸ್ಥಿತಿಯಲ್ಲಿ ಇರುವುದಿಲ್ಲ. ಭವಿಷ್ಯ ರೂಪಿಸಿಕೊಳ್ಳುವ ಈ ಸಮಯದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟು ಬದುಕು ಕಟ್ಟಿಕೊಳ್ಳಬೇಕು. ಈ ಹಿಂದೆ ಶಿಕ್ಷಣಕ್ಕೆ ಯಾವ ಅನುಕೂಲ ಇರಲಿಲ್ಲ. ಗ್ರಾಮೀಣ ಭಾಗದಲ್ಲಿ ಶಾಲೆಗಳು ಇರಲಿಲ್ಲ. ಆದರೆ ಈಗ ಎಲ್ಲಾ ಸವಲತ್ತು ಜೊತೆಗೆ ಶಿಕ್ಷಣಕ್ಕೆ ಸೂಕ್ತ ವಾತಾವರಣ ಸರ್ಕಾರ ಒದಗಿಸಿದೆ. ಈ ಅನುಕೂಲ ಪಡೆದು ಉತ್ತಮ ಶಿಕ್ಷಣ ಪಡೆದು ಉನ್ನತ ವ್ಯಾಸಂಗಕ್ಕೆ ಸಿದ್ಧವಾಗಬೇಕು. ಹಾದಿ ತಪ್ಪುವ ಈ ವಯಸ್ಸಿಗೆ ಲಗಾಮು ಹಾಕಿ ವಿಧ್ಯಾಭ್ಯಾಸಕ್ಕೆ ಮಾತ್ರ ಮಾನ್ಯತೆ ನೀಡಿ ನಿಮ್ಮ ಪೋಷಕರ ಆಸೆಗಳನ್ನು ಈಡೇರಿಸಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿಗಳು ತುಂಬಾಡಿ ರಾಮಯ್ಯ ಮಾತನಾಡಿ ಕನ್ನಡ ಸಾಹಿತ್ಯ ಲೋಕ ಪಡೆದ ಹಿರಿಮೆ ಗರಿಮೆಗಳ ಬಗ್ಗೆ ವಿದ್ಯಾರ್ಥಿಗಳು ಅರಿಯಬೇಕು. ಕಾಲೇಜು ಶಿಕ್ಷಣ ಪಡೆಯುವ ಮಕ್ಕಳಲ್ಲಿ ಮಾತೃಭಾಷೆ ವ್ಯಾಮೋಹಕ್ಕೆ ಹೆಚ್ಚು ಬೆಳೆಯಬೇಕು. ಕನ್ನಡ ನಾಡು ನುಡಿ ಸಂಸ್ಕೃತಿ ಉಳಿಸಿ ಬೆಳೆಸುವ ಕರ್ತವ್ಯ ಇಂದಿನ ಯುವಪೀಳಿಗೆ ಕೈಯಲ್ಲಿದೆ. ಜೀವನ ರೂಪಿಸುವ ಈ ಕಾಲೇಜು ಶಿಕ್ಷಣ ಜೊತೆ ನಮ್ಮ ಮಾತೃಭಾಷೆ ಬಗ್ಗೆ ಅಪಾರ ಗೌರವ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ತುಮಕೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ ಕನ್ನಡದ ಜೊತೆಗೆ ಅನ್ಯ ಭಾಷೆಯನ್ನು ಕಲಿಯದಿದ್ದರೆ ಬೆಂಗಳೂರಿನಲ್ಲಿ ಜೀವನ ಮಾಡಲು ಆಗುವುದಿಲ್ಲ. ಮಕ್ಕಳನ್ನು ತಂದೆ ತಾಯಿಯು ನಂಬಿ ಹೊರಗಡೆ ಕಳಿಸುವುದು ಇಂದು ಕಷ್ಟ ಸಾಧ್ಯವಾಗಿದೆ. ವಿದ್ಯಾರ್ಥಿಗಳು ಉನ್ನತ ಅಭ್ಯಾಸ ಮಾಡಿ ತಂದೆತಾಯಿಗೆ ಗೌರವ ತಂದು ಕೊಡಬೇಕು. ಮಹಿಳೆಯಾಗಿ ಕುಟುಂಬದ ಅಭಿವೃದ್ದಿಗೆ ಸಹಕಾರ ಕೊಡಬೇಕು ಆಗ ಕುಟುಂಬ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಿಮಿಕ್ರಿ ಕಲಾವಿದ ಸಾಗರ್ ತುರುವೇಕೆರೆ ಮಿಮಿಕ್ರಿ ಮೂಲಕ ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು.

ವೇದಿಕೆಯಲ್ಲಿ ಪ್ರಾಂಶುಪಾಲ ಡಾ.ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಯಿಷಾ ತಾಸಿನ್, ಮಾಜಿ ಸದಸ್ಯ ಮಹಮದ್ ಸಾದಿಕ್, ಶೈಕ್ಷಣಿಕ ಡೀನ್ ಡಾ.ಓ.ನಾಗರಾಜು, ಪತ್ರಾಂಕಿತ ವ್ಯವಸ್ಥಾಪಕ ಎನ್.ಶಿವಯ್ಯ, ಸಾಂಸ್ಕೃತಿಕ ಕಾರ್ಯದರ್ಶಿ ಜಿ.ಗಂಗಾಧರ್, ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು, ಬೋಧಕರು ಹಾಗೂ ಬೋಧಕೇತರರು ಮತ್ತು ವಿದ್ಯಾರ್ಥಿ ವೃಂದ, ಹಳೆಯ ವಿದ್ಯಾರ್ಥಿಗಳ ಸಂಘ ಸದಸ್ಯರುಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...