ಗುಬ್ಬಿ | ಜೆಜೆಎಂ ಕಾಮಗಾರಿ ಟ್ರಂಚ್ ಗೆ ಉರುಳಿ ಬಿದ್ದ ಟ್ರ್ಯಾಕ್ಟರ್ : ಚಾಲಕನ ಕೈ ಮುರಿತಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

Date:

ಗುಬ್ಬಿ ತಾಲ್ಲೂಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ಹೆಬ್ಬೂರು ಸಂಪರ್ಕ ರಸ್ತೆ ಬದಿ ಜೆಜೆಎಂ ಕಾಮಗಾರಿಗೆ ತೆಗೆದ 600 ಮೀಟರ್ ಟ್ರಂಚ್ ಪೈಪ್ ಲೈನ್ ಅಳವಡಿಸದೇ ರಸ್ತೆ ಬದಿ ಹಾಗೆಯೇ ಬಿಟ್ಟ ಕಾರಣ ಟ್ರ್ಯಾಕ್ಟರ್ ಉರುಳಿ ಚಾಲಕನ ಕೈ ಮೂಳೆ ಮುರಿದ ಘಟನೆ ಗ್ರಾಮಸ್ಥರನ್ನು ಕೆರಳಿಸಿದೆ.

ಕಳೆದ ಆರು ತಿಂಗಳ ಹಿಂದೆ 60 ಲಕ್ಷ ರೂಗಳ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಆರಂಭಿಸಿ ರಸ್ತೆ ಬದಿ ಒಂದು ಮೀಟರ್ ಆಳ ತೋಡಿ ಹಾಗೆಯೇ ಬಿಟ್ಟು ಹೋಗಿರುವ ಕಾರಣ ನಾಲ್ಕೈದು ಅಪಘಾತಕ್ಕೆ ಮೂಲವಾಗಿದೆ. ಕಳಪೆ ಕಾಮಗಾರಿ ಬಗ್ಗೆ ಸ್ಥಳೀಯ ಗ್ರಾಮಸ್ಥರ ಆಕ್ರೋಶ ಕಟ್ಟೆ ಇಂದು ನಡೆದ ಅಪಘಾತದಿಂದ ಒಡೆದು ಹೊರಬಂದಿದೆ. ಪ್ರಭಾವಿ ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರನಿಗೆ ಹೇಳಲಾಗದ ಅಧಿಕಾರಿಗಳ ಬಗ್ಗೆ ಜನರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

1000761253

ಮನೆ ಮನೆಗೆ ನಳ ಸಂಪರ್ಕ ಕಾಮಗಾರಿ ಓವರ್ ಹೆಡ್ ಟ್ಯಾಂಕ್ ಮಾಡದೆ ಪೈಪ್ ಲೈನ್ ಕೆಲಸ ಗ್ರಾಮದ ಹೊರ ಭಾಗದಲ್ಲಿ ನಡೆದಿಲ್ಲ. ತೋಟದಮನೆ ಇರುವಲ್ಲಿ ಮಾತ್ರ ಒಂದೆರೆಡು ಪೈಪ್ ಹಾಕಲಾಗಿದೆ. ಉಳಿದಂತೆ ಎಲ್ಲಾ ಹಲವು ಖಾಲಿ ಹಳ್ಳ ಹಾಗೆಯೇ ಬಿಡಲಾಗಿದೆ. ಈಗಾಗಲೇ ಇಲ್ಲಿ ನಡೆದಿರುವ ಅಪಘಾತಗಳು ಆತಂಕ ತಂದಿದೆ. ಈ ಹಳ್ಳದಿಂದ ಜೀವ ಹಾನಿಯಾದಲ್ಲಿ ಗುತ್ತಿಗೆದಾರ ಸತೀಶ್ ನೇರ ಹೊಣೆ ಹೊರಬೇಕು ಎಂದು ಸ್ಥಳೀಯ ಶ್ರೀನಿವಾಸ್ ಗೌಡ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕ ಚೆಂಗಾವಿ ಹಾಗೂ ಬುಕ್ಕ ಸಾಗರ ಎರಡೂ ಗ್ರಾಮದಲ್ಲಿ ಮನೆ ಮನೆಗೆ ನೀರು ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಲ್ಲಿದೆ. ಪೈಪ್ ಲೈನ್ ಕೆಲಸ ಗುಣಮಟ್ಟದಲ್ಲಿಲ್ಲ. ಊರಿನ ಸಿಸಿ ರಸ್ತೆ ಹಗೆದು ಹಾಳು ಮಾಡಿ ಅಲ್ಲಿನ ಹಳ್ಳ ಮುಚ್ಚದೆ ರಸ್ತೆಯನ್ನು ಸಂಪೂರ್ಣ ಹದಗೆಡಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರ ಸತೀಶ್ ಕೆಲಸಕ್ಕೆ ಅಧಿಕಾರಿಗಳ ಸಾಥ್ ನೀಡಿದ್ದಾರೆ. ರಸ್ತೆಯ ಬದಿ ತೆಗೆದ ಹಳ್ಳ ಮಾರಕವಾಗಿದೆ. ಈ ಬಗ್ಗೆ ಕೂಡಲೇ ಅಧಿಕಾರಿಗಳು ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಬೇಕು ಎಂದು ಮಾಜಿ ಗ್ರಾಪಂ ಸದಸ್ಯ ಸಿ.ಡಿ.ರಾಘವೇಂದ್ರ ಆಗ್ರಹಿಸಿದ್ದಾರೆ.

1000761252

ಜಲ ಜೀವನ್ ಮಿಷನ್ ಯೋಜನೆ ಆರಂಭದಲ್ಲಿ ಬುಕ್ಕಸಾಗರ ಗ್ರಾಮದಲ್ಲಿ ನಡೆದ ಕಳಪೆ ಕಾಮಗಾರಿ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆ ಸಂಚಾರವೇ ಮಾರಕ ಎನ್ನುವಂತೆ ಪೈಪ್ ಲೈನ್ ಹಳ್ಳ ಜವರಾಯನ ರೂಪ ಪಡೆದುಕೊಂಡಿದೆ. ಆರೇಳು ಅಪಘಾತ ಈಗಾಗಲೇ ಕೈಕಾಲು ಮುರಿದಿವೆ. ಕೆಲಸ ಮಾಡದೆ ಕಂಟ್ರಾಕ್ಟರ್ ಅಧಿಕಾರಿಗಳಿಗೆ ತೋರಿಕೆಗೆ ಹಳ್ಳ ತೆಗೆದು ಅಲ್ಲಲ್ಲೇ ಪೈಪ್ ಅದ್ದಿ ಈಗ ಉಡಾಫೆ ಉತ್ತರ ನೀಡುತ್ತಿದ್ದಾರೆ. ಅಧಿಕಾರಿಗಳು ಸಹ ಈ ಬಗ್ಗೆ ನಿಗಾವಹಿಸದೆ ಸ್ಥಳಕ್ಕೆ ಬಾರದೆ ಕಚೇರಿಯಲ್ಲೇ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಮುಖಂಡ ಬುಕ್ಕಸಾಗರ ಮಹದೇವ್ ಆರೋಪಿಸಿದರು.

ಘಟನೆ ತಿಳಿದ ಬಳಿಕ ಜೆಜೆಎಂ ಎಇಇ ನಟರಾಜ್ ಕೂಡಲೇ ಹಳ್ಳ ಮುಚ್ಚಿಸಿ ಬಾಕಿ ಇರುವ ಓವರ್ ಹೆಡ್ ಟ್ಯಾಂಕ್ ಹಾಗೂ ಪೈಪ್ ಲೈನ್ ಕೆಲಸವನ್ನು ಮೂರು ತಿಂಗಳಲ್ಲಿ ಪೂರ್ಣ ಗೊಳಿಸುವ ಹೇಳಿಕೆಯನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...