ಗುಬ್ಬಿ | ಮೈಸೂರು ದಸರಾ ಮಾದರಿಯಲ್ಲೇ ಅದ್ದೂರಿ ತುಮಕೂರು ದಸರಾ ಉತ್ಸವ : ತಹಶೀಲ್ದಾರ್ ಬಿ.ಆರತಿ

Date:

ವಿಶ್ವ ವಿಖ್ಯಾತಿ ಮೈಸೂರು ದಸರಾ ವೈಭವದಷ್ಟೇ ಮಾದರಿ ತುಮಕೂರು ದಸರಾ ಉತ್ಸವ ಅದ್ದೂರಿಯಾಗಿ ಚಾಲ್ತಿ ದೊರಕಿದ್ದು ಪ್ರತಿ ನಿತ್ಯ ಧಾರ್ಮಿಕ ಉತ್ಸವಗಳು, ನವರಾತ್ರಿ ಉತ್ಸವಗಳು, ವಿಶೇಷ ಅಲಂಕಾರ, ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವಿಶೇಷವಾಗಿ ಇದೇ ತಿಂಗಳ 11 ಮತ್ತು 12 ರಂದು ಅತ್ಯಾಕರ್ಷಣೆಯ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ಸಾವಿರಾರು ಸಂಖ್ಯೆಯ ಮಂದಿ ಈ ತುಮಕೂರು ದಸರಾ ಉತ್ಸವಕ್ಕೆ ಭಾಗವಹಿಸಲಿದ್ದು ಗುಬ್ಬಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಹತ್ತು ದಿನಗಳ ಕಾರ್ಯಕ್ರಮದಲ್ಲಿ ಇದೇ ತಿಂಗಳ 6 ರಂದು ವಿಶೇಷ ದೀಪಾಲಂಕಾರ ಇಡೀ ತುಮಕೂರು ನಗರದಲ್ಲಿ ಕಂಗೊಳಿಸಲಿದೆ. ಪ್ರಮುಖ ರಸ್ತೆಗಳು, ವೃತ್ತಗಳು, ದೇವಾಲಯಗಳು ಸಂಜೆ ವಿದ್ಯುದ್ದೀಪಳಿಂದ ಅಲಂಕಾರಗೊಂಡು ಜನರನ್ನು ಆಕರ್ಷಿಸಲಿದೆ. ಅದೇ ದಿನ ಸ್ಟೇಡಿಯಂನಲ್ಲಿ ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ದಸರಾ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂಜೆ ಯುವ ಸಂಭ್ರಮ ಮತ್ತು ಆಹಾರ ಮೇಳ ನಡೆಯಲಿದೆ ಎಂದು ವಿವರಿಸಿದರು.

1000520295

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮುಖ್ಯ ವೇದಿಕೆ ನಿರ್ಮಾಣವಾಗಿದ್ದು ಇದೇ ತಿಂಗಳ 11 ರ ಶನಿವಾರ ಬೆಳಿಗ್ಗೆ 7 ಕ್ಕೆ ಹತ್ತು ಸಾವಿರ ಮಂದಿಯ ಮ್ಯಾರಥಾನ್ ಓಟ ಸ್ಟೇಡಿಯಂ ಬಳಿ ನಡೆದು ನಂತರ ನಾಡ ಕುಸ್ತಿ, ಆಹಾರ ಮೇಳ, ವಸ್ತು ಪ್ರದರ್ಶನ ಮುಖ್ಯ ವೇದಿಕೆ ಬಳಿ ನಡೆಯಲಿದೆ. ಎಚ್ ಎಎಲ್ ಹೆಲಿಕಾಪ್ಟರ್ ಶೋ, ಇಸ್ರೋ ವಿಂಟೆಜ್ ಕಾರ್ ಶೋ ವಿಶೇಷವಾಗಿ ನಡೆಯಲಿದೆ. ಸಂಜೆ 6 ಕ್ಕೆ ನಟ ಶಿವರಾಜಕುಮಾರ್ ಆಗಮನ, ಗುರುಕಿರಣ್ ಹಾಗೂ ಕಂಬದ ರಂಗಯ್ಯ ಅವರಿಂದ ರಸ ಸಂಜೆ ಕಾರ್ಯಕ್ರಮ, ಆಕರ್ಷಕ ಲೇಸರ್ ಶೋ ನಡೆಯಲಿದೆ, ಅ.12 ರ ವಿಜಯದಶಮಿ ದಿನದಂದು ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮ ನಡೆದು ಸಂಜೆ 6.30 ಕ್ಕೆ ಹಾಡುಗಾರ ವಿಜಯ್ ಪ್ರಕಾಶ್ ತಂಡದಿಂದ ಸಂಗೀತ ರಸಸಂಜೆ ಹಾಗೂ ಡ್ರೋನ್ ಮೂಲಕ ಕಾರ್ಯಕ್ರಮ ನಡೆದು ಸಮಾರೋಪ ಸಮಾರಂಭದಲ್ಲಿ ಹಸಿರು ಮದ್ದುಗಳಿಂದ ಬಾಣ ಬಿರುಸು ಪ್ರದರ್ಶನ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ 1 ಕ್ಕೆ ಟೌನ್ ಹಾಲ್ ನಿಂದ ಮುಖ್ಯ ವೇದಿಕೆಯವರೆಗೆ ವಿಜಯದಶಮಿ ಮೆರವಣಿಗೆ ವೈಭವವಾಗಿ ಜರುಗಲಿದೆ. ಈ ಎಲ್ಲಾ ಅದ್ದೂರಿ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಬೇಕು. ತುಮಕೂರು ನಗರಕ್ಕೆ ಸಮೀಪದ ಗುಬ್ಬಿ ತಾಲ್ಲೂಕಿಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮನವಿ ಮಾಡಿ ತಾಲ್ಲೂಕಿನ ಜನಪರ ಸಂಘ ಸಂಸ್ಥೆಗಳಿಗೆ ಕರಪತ್ರ ಹಂಚಿ ಭಾಗವಹಿಸಲು ಮನವಿ ಮಾಡಲಾಗುತ್ತಿದೆ. ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಪಂ ಇಓ ಶಿವಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...