ಗುಬ್ಬಿ | ತ್ಯಾಗಟೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಓಂಕಾರ ಪ್ರಸಾದ್; ಉಪಾಧ್ಯಕ್ಷರಾಗಿ ನಳಿನಾ

Date:

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ತ್ಯಾಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎನ್.ಓಂಕಾರ ಪ್ರಸಾದ್ ಅಧ್ಯಕ್ಷರಾಗಿ ಹಾಗೂ ನಳಿನಾ ಪ್ರಕಾಶ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಗುಬ್ಬಿ ತಹಶೀಲ್ದಾರ್ ಬಿ.ಆರತಿಯವರು ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಶಿವಕುಮಾರಸ್ವಾಮಿ ಹಾಗೂ ಉಪಾಧ್ಯಕ್ಷೆ ವಸಂತಕುಮಾರಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರೆವಾದ ಸಾಮಾನ್ಯ ಮೀಸಲಿನ ಎರಡೂ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಚುನಾವಣಾ ಪ್ರಕ್ರಿಯೆ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ತ್ಯಾಗಟೂರು ಸದಸ್ಯ ಟಿ.ಎನ್.ಓಂಕಾರ ಪ್ರಸಾದ್ ಹಾಗೂ ಕೋಡಿ ನಾಗೇನಹಳ್ಳಿ ಸದಸ್ಯ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನಳಿನಾ ಪ್ರಕಾಶ್ ಹಾಗೂ ಕೋಡಿ ನಾಗೇನಹಳ್ಳಿ ಸದಸ್ಯೆ ಜಯಮಾಲಾ ನಾಮಪತ್ರ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ ಚಲಾವಣೆ ನಂತರ ಓಂಕಾರ ಪ್ರಸಾದ್ ಅವರಿಗೆ 11 ಮತಗಳು ಲಭಿಸಿ ಅಧ್ಯಕ್ಷರಾಗಿ ಚುನಾಯಿತರಾದರು. ಪ್ರತಿಸ್ಪರ್ಧಿ ಮಂಜುನಾಥ್ 8 ಮತಗಳನ್ನು ಪಡೆದು ಮೂರು ಮತಗಳ ಅಂತರದಿಂದ ಪರಾಭವಗೊಂಡರು.

ಉಪಾಧ್ಯಕ್ಷ ಸ್ಥಾನದಲ್ಲಿ ಸಹ ನಳಿನಾ ಪ್ರಕಾಶ್ 11 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಜಯಮಾಲಾ 8 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ತ್ಯಾಗಟೂರು

ನೂತನ ಅಧ್ಯಕ್ಷ ಟಿ.ಎನ್.ಓಂಕಾರ ಪ್ರಸಾದ್ ಸುದ್ದಿಗಾರರ ಜೊತೆ ಮಾತನಾಡಿ, “ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ, ಸರ್ಕಾರದ ಸವಲತ್ತು ತರಲು ಎಲ್ಲ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಹೊಸ ಯೋಜನೆ ಜಾರಿ ಮೂಲಕ ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾರ್ಪಾಡು ಮಾಡಲು ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಗದಗ | ನೀಟ್ ರದ್ದು ಸೇರಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಟಿ.ಎನ್.ಪರಮೇಶ್, ಮಲ್ಲಿಕಾರ್ಜುನಯ್ಯ, ನಂಜೇಗೌಡ, ಯತೀಶ್, ನಾಗರಾಜು, ಮಲ್ಲಿಕಾರ್ಜುನ್, ಪಿಡಿಓ ವನಜಾಕ್ಷಿ, ಚುನಾವಣಾ ಸಿಬ್ಬಂದಿ ಗುರುಪ್ರಸಾದ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...