ಗುಬ್ಬಿ | ಕೆ.ಎನ್.ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ವಾಲ್ಮೀಕಿ ಸಮುದಾಯದ ಮುಖಂಡರು

Date:

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು ಗುಡುಗಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ದಲಿತರಿಗೆ ಶಿಕ್ಷೆ ನೀಡಿದೆ. ದಲಿತರು ಸತ್ಯ ಹೇಳುವಂತಿಲ್ಲವೇ, ಸದಾಕಾಲ ದೀನ ದಲಿತರ ಪರ ನಿಲ್ಲುವ ರಾಜಣ್ಣ ಅವರ ವ್ಯಕ್ತಿತ್ವ ಎಲ್ಲರಿಗೂ ತಿಳಿದಿದೆ. ನೇರವಾದಿ ಮತಪಟ್ಟಿಯ ಚಿತ್ರಣ ಸಿದ್ಧವಾದಾಗ ನಮ್ಮದೇ ಸರ್ಕಾರ ಇತ್ತು. ಅಂದು ಎಲ್ಲವನ್ನೂ ಗಮನಿಸಬೇಕಿತ್ತು ಎಂದು ನೇರವಾಗಿ ಸತ್ಯ ಹೇಳಿದ್ದಕ್ಕೆ ವಜಾ ಶಿಕ್ಷೆ ನೀಡಿದ್ದು ಸರಿಯಲ್ಲ. ವಾಲ್ಮೀಕಿ ಸಮಾಜವನ್ನು ಕಡೆಗಣಿಸಿದ್ದಾರೆ. ನಮ್ಮ ಜನಾಂಗದ ಬೆಳವಣಿಗೆ ಸಹಿಸದ ಕೆಲವರ ಕುತಂತ್ರಕ್ಕೆ ನಾಗೇಂದ್ರ ಅವರು ಮೊದಲ ಬಲಿ. ಈಗ ರಾಜಣ್ಣ ಅವರು ಎರಡನೇ ಬಲಿ. ಈ ಅಸಹನೆ ನಡವಳಿಕೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ವಾಲ್ಮೀಕಿ ಸಮಾಜ ಎಲ್ಲಡೆ ಪ್ರತಿಭಟನೆ ನಡೆಸಲಿದೆ. ಗುಬ್ಬಿ ತಾಲ್ಲೂಕಿನಲ್ಲಿ ಸಹ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ. ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಲಕ್ಷ್ಮೀರಂಗಯ್ಯ ಮಾತನಾಡಿ ವಾಲ್ಮೀಕಿ ಸಮಾಜಕ್ಕೆ ಮಾಡಿದ ಅಪಮಾನ ಇದಾಗಿದೆ. ಕಾಂಗ್ರೆಸ್ ದಲಿತ ಪರ ನಿಲ್ಲುತ್ತಿಲ್ಲ. ದಲಿತ ಮುಖಂಡರ ಬೆಳವಣಿಗೆ ಸಹಿಸುತ್ತಿಲ್ಲ. ಕುತಂತ್ರ ನಡೆಸಿದ ಮಹಾನಾಯಕರಿಗೆ ಸಮಾಜ ತಕ್ಕ ಪಾಠ ಕಲಿಸಲಿದೆ. ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಲಿದೆ. ರಾಜಣ್ಣ ಅವರಿಗೆ ಆಗಿರುವ ಅನ್ಯಾಯ ವಿರುದ್ಧ ಪ್ರತಿಭಟನೆ ಪಕ್ಷಾತೀತವಾಗಿ ನಡೆಸಲಾಗುವುದು. ದಲಿತ ಪರ ಎಲ್ಲಾ ಸಂಘಟನೆ ಹೋರಾಟಕ್ಕೆ ಧುಮ್ಮುಕ್ಕಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ಸಮಾಜದ ಅಧ್ಯಕ್ಷ ಸಾಕಸಂದ್ರ ದೇವರಾಜ್ ಮಾತನಾಡಿ ಎಲ್ಲಾ ಜಾತಿ ಧರ್ಮದವರನ್ನು ತೆಕ್ಕೆಗೆ ತೆಗೆದುಕೊಂಡು ಕೆಲಸ ಮಾಡುವ ರಾಜಣ್ಣ ಅವರು ಇಂದಿಗೂ ಸಾಮಾನ್ಯ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಇಲ್ಲಿಯೇ ಅವರ ಕಾರ್ಯಕ್ಕೆ ತಕ್ಕ ಉತ್ತರ ಸಿಕ್ಕಿದೆ. ಕಾಣದ ಕೈಗಳು ನಡೆಸಿದ ಕುತಂತ್ರಕ್ಕೆ ರಾಜಣ್ಣ ಅವರು ಬಲಿಯಾಗಿದ್ದಾರೆ. ತಲೆದಂಡ ಎಂದು ಖುಷಿ ಪಡುವವರು ತಿಳಿಸಿಕೊಳ್ಳಬೇಕು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಲೆದಂಡ ಎಂದು ಅರ್ಥ ಮಾಡಿಕೊಳ್ಳಬೇಕು. ಗುಬ್ಬಿ ತಾಲ್ಲೂಕಿನಲ್ಲಿ ಉಗ್ರ ಪ್ರತಿಭಟನೆಗೆ ದಿನಾಂಕ ನಿಗದಿ ಮಾಡಲಿದ್ದೇವೆ. ರಾಜಣ್ಣ ಪರ ವಾಲ್ಮೀಕಿ ಸಮಾಜ ನಿಲ್ಲಲಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಶಿವಣ್ಣ, ಮುಖಂಡರಾದ ಎಚ್.ಡಿ.ಯಲ್ಲಪ್ಪ, ಶಂಕರ್, ನಾಗೇಶ್, ರಾಜಶೇಖರ್, ವಿಶ್ವನಾಥ್, ಚೇತನ್ ನಾಯಕ್, ವಿದ್ಯಾ ಸಾಗರ್, ಮಂಜುನಾಥ್, ಕಂಚಿರಾಯಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...