ಗುಬ್ಬಿ | ಎಸ್ ಟಿ ಪಟ್ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ

Date:

 ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ 1 ರಲ್ಲಿ ಬೇರೆ ಸಮುದಾಯದವರು ಎಸ್ಟಿ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಹಾಗೂ ಅನ್ಯ ಜಾತಿಗಳನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾದ ಸರ್ಕಾರ ನಿಲುವು ಸರಿಯಲ್ಲ ಎಂದು ವಿರೋಧಿಸಿ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಬಂದ ವಾಲ್ಮೀಕಿ ಸಮಾಜದ ಬಂಧುಗಳು ಬುಡಕಟ್ಟಿನ ಪರ್ಯಾಯ ಹೆಸರುಗಳಾದ ಪರಿವಾರ, ತಳವಾರ ಬುಡಕಟ್ಟುಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. ಆದರೆ ಉತ್ತರ ಕರ್ನಾಟಕದ ಹಲವು ಜಿಲ್ಲೆಯ ಹಿಂದುಳಿದ ವರ್ಗಗಳ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗಳನ್ನು ನಾಯಕ ತಳವಾರ ಹೆಸರಿನಲ್ಲಿ 2 ಲಕ್ಷಕ್ಕೂ ಅಧಿಕ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದು ಸರ್ಕಾರದ ಸವಲತ್ತು ಪಡೆದಿದ್ದಾರೆ. ಈ ವಾಮಮಾರ್ಗದ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಹಗಲು ದರೋಡೆಗೆ ಕಡಿವಾಣ ಹಾಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಕಾರ್ಯದರ್ಶಿ ಎಚ್.ಆರ್.ರಾಮಚಂದ್ರಪ್ಪ ಮಾತನಾಡಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಬಗ್ಗೆ ನ್ಯಾಯಾಲಯ ಮೆಟ್ಟಿಲೇರಿ ಕ್ರಮ ಕೈಗೊಂಡ ಬಗ್ಗೆ ಆದೇಶ ನೀಡಿದ್ದರೂ ಒಂದು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ವಾಲ್ಮೀಕಿ ಸಮಾಜ ಖಂಡಿಸುತ್ತದೆ. ಈಗಾಗಲೇ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬ ರೀತಿ ಮೀಸಲಾತಿ ಪಡೆದ ಎಸ್ಟಿ ಪಟ್ಟಿಗೆ ಹಲವು ಜಾತಿಗಳನ್ನು ಸೇರಿಸಲು ಮುಂದಾಗಿರುವುದು ವಿಷಾದನೀಯ. ಬಲಾಢ್ಯ ಸಮುದಾಯಗಳು ನಮ್ಮ ಮೀಸಲಾತಿಗೆ ಬಂದರೆ ವಾಲ್ಮೀಕಿ ಸಮಾಜ ಎಲ್ಲಾ ಸವಲತ್ತುಗಳಿಂದ ವಂಚಿತವಾಗುತ್ತದೆ. ರಾಜ್ಯದಲ್ಲಿ ನಮ್ಮ ಸಮಾಜದ ಮೇಲೆ ದೌರ್ಜನ್ಯ ನಿರಂತರ ನಡೆದಿದೆ. ಈ ಬಗ್ಗೆ ಸರ್ಕಾರ ಗಂಭೀರ ಕಾನೂನು ಕ್ರಮ ಕೈಗೊಳ್ಳಬೇಕು. ಬ್ಯಾಕ್ ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ಎಸ್ಟಿ ಜನಾಂಗದ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣ ಪಂಚಾಯಿತಿ ಸದಸ್ಯ ಜಿ.ಎನ್.ಅಣ್ಣಪ್ಪಸ್ವಾಮಿ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಅನ್ಯ ಜಾತಿಗಳನ್ನು ಸೇರಿಸಿ ನಮ್ಮ ಹಕ್ಕು ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ. ಅಂಬೇಡ್ಕರ್ ಅವರ ಸಂವಿಧಾನ ಪ್ರಕಾರ ಪರಿಶಿಷ್ಟ ಪಂಗಡಕ್ಕೆ ಸೇರುವ ಸವಲತ್ತು ಬೇರೆ ಬಲಾಢ್ಯ ಜಾತಿಗೆ ನೀಡಿದರೆ ನಮಗೆ ಅನ್ಯಾಯ ಆಗುತ್ತದೆ. ತಟ್ಟೆಯ ಮುಂದೆ ಕುಳ್ಳಿರಿಸಿ ಊಟ ಬಡಿಸಿ ನಂತರ ತಟ್ಟೆ ಕಿತ್ತುಕೊಳ್ಳುವ ಪ್ರವೃತ್ತಿ ಸರಿಯಲ್ಲ. ನಮಗೆ ಸಿಗುವ ಅಲ್ಪ ಮೀಸಲಾತಿಯಲ್ಲಿ ಬೇರೆಯವರಿಗೂ ನೀಡಿದರೆ ಯಾರೂ ಬದುಕಲು ಸಾಧ್ಯವಿಲ್ಲ. ಅನ್ಯ ಜಾತಿಗಳನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು. ಈ ಕಾರ್ಯಕ್ಕೆ ವಾಲ್ಮೀಕಿ ಸಮಾಜದ ವಿರೋಧವಿದೆ. ಎಸ್ಟಿ ಜಾತಿ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರವನ್ನು ಬೇರೆ ಜಾತಿಗಳಿಗೆ ನೀಡಿರುವ ಪ್ರಕರಣ ತನಿಖೆಗೆ ಒಳಪಡಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ವಿವಿಧ ಭಾಗದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಪಂ ಮಾಜಿ ಸದಸ್ಯ ಪುಟ್ಟರಾಜು ಮಾತನಾಡಿ ಒಂದು ಕೆಜಿ ಅಕ್ಕಿಯಲ್ಲಿ ಹತ್ತು ಜನ ಊಟ ಮಾಡಲು ಸಾಧ್ಯವಾದ ವಿಚಾರ. ಆದರೆ ಸರ್ಕಾರ ಒಂದು ಕೆಜಿ ಅಕ್ಕಿಗೆ ನೂರು ಜನರನ್ನು ಹಂಚಲು ಹೊರಟಿದೆ. ಇದರಲ್ಲಿ ನ್ಯಾಯ ಇಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ ಎಸ್ಟಿ ಪಟ್ಟಿಗೆ ಬೇರೆ ಯಾವ ಜಾರಿಯನ್ನು ಸೇರಿಸುವುದು ಸರಿಯಲ್ಲ. ಸಂವಿಧಾನ ವಿರುದ್ಧವಾಗಿ ಪರಿಶಿಷ್ಟ ಪಂಗಡಕ್ಕೆ ಯಾವ ಜಾತಿಯನ್ನು ಸೇರಿಸುವ ಸರ್ಕಾರದ ಕ್ರಮವನ್ನು ವಾಲ್ಮೀಕಿ ಸಮಾಜ ಖಂಡಿಸುತ್ತದೆ ಎಂದರು.

ಮುಖಂಡ ಮಂಚಲದೊರೆ ರಮೇಶ್ ಮಾತನಾಡಿ ಸಂವಿಧಾನ ಪ್ರಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಅವಶ್ಯ ಮೀಸಲಾತಿಯನ್ನು ಮತ್ತಷ್ಟು ಜಾತಿಗೆ ಹಂಚುವ ಕೆಲಸ ಮಾಡಲು ಮುಂದಾಗುವುದು ಸರಿಯಲ್ಲ. ನಮ್ಮ ಸಮಾಜ ಇಂದಿಗೂ ಸಾಮಾಜಿಕ ಗಟ್ಟಿತನ ಕಂಡಿಲ್ಲ. ನಮ್ಮ ಪಾಲನ್ನು ಬೇರೆ ಜಾತಿಗೆ ಹಂಚುವುದು ಹಾಗೂ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಬೇರೆ ಸಮುದಾಯಕ್ಕೆ ನೀಡುವುದು ಸರಿಯಲ್ಲ ಎಂದರು.

ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಜಿ.ಎನ್. ಅಡವೀಶಯ್ಯ, ಗೌರವಾಧ್ಯಕ್ಷ ಎ.ನರಸಿಂಹಮೂರ್ತಿ, ಸದಸ್ಯರಾದ ನಿಟ್ಟೂರು ಕೃಷ್ಣಮೂರ್ತಿ, ಜಿ.ಎಲ್.ರಂಗನಾಥ್, ಚೇತನ್ ನಾಯಕ್, ಹೇರೂರು ನಾಗರಾಜು, ಹೊಸಹಳ್ಳಿ ರಂಗನಾಥ್, ಸಿದ್ದರಾಜು, ಸೋಮಲಾಪುರ ಕೃಷ್ಣಮೂರ್ತಿ, ರಾಘವೇಂದ್ರ, ಜಿ.ಆರ್.ರವೀಶ್, ದೇವರಾಜ್, ಕರಿಯಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...