ಗುಬ್ಬಿ | ಪ್ರವಾಸಿಗರ ತನ್ನತ್ತ ಸೆಳೆದ ವಾಸುದೇವ ಅಣೆ : ಮಳೆಗಾಲದಲ್ಲಿ ಧುಮ್ಮಿಕ್ಕುವ ಶಿಂಷಾ ನದಿ

Date:

 ಕಾವೇರಿಯ ಉಪ ನದಿ ಶಿಂಷಾ ದೇವರಾಯನದುರ್ಗದಲ್ಲಿ ಹುಟ್ಟಿ ದಕ್ಷಿಣ ಮುಖವಾಗಿ ಹರಿದು ಮಂಡ್ಯ ಜಿಲ್ಲೆಯ ಮೂಲಕ ಕಾವೇರಿ ಸೇರುತ್ತದೆ. ತುಮಕೂರು ಜಿಲ್ಲೆಯಲ್ಲಿ ಬಹುಭಾಗ ಹರಿಯುವ ಈ ಶಿಂಷಾ ನದಿ ಮಳೆಗಾಲದಲ್ಲಿ ತುಂಬಿ ಹರಿಯುತ್ತದೆ. ಮಾರ್ಗ ಮಧ್ಯೆ ಗುಬ್ಬಿ ತಾಲ್ಲೂಕು ಕಡಬ ಹೋಬಳಿ ವರಹಸಂದ್ರ ಬಳಿಯ ವಾಸುದೇವ ಅಣೆಯಲ್ಲಿ ಮೈದುಂಬಿ ಹರಿಯುವ ಶಿಂಷಾ ನದಿ ನೋಡುವುದೇ ಒಂದು ಆನಂದ. 

ಕಳೆದ ನಾಲ್ಕೈದು ವರ್ಷಗಳಿಂದ ಪ್ರವಾಸಿಗರನ್ನು ಸೆಳೆದ ವಾಸುದೇವ ಅಣೆ ಎರಡು ಗ್ರಾಮ ಸಂದಿಸುತ್ತದೆ. ಹರಿದೇವನಹಳ್ಳಿ ಬೋಚಿಹಳ್ಳಿ ಗ್ರಾಮದ ನಡುವಿನ ಅಣೆ ಸುಮಾರು 100 ಮೀಟರ್ ಉದ್ದ 10 ಅಡಿ ಎತ್ತರದ ತಡೆಗೋಡೆಯಿಂದ ಧುಮ್ಮಿಕ್ಕುವ ನದಿ ನೀರು ಪ್ರವಾಸಿಗರ ಮೈಮನ ತುಂಬುತ್ತದೆ.

ಮಳೆಗಾಲದ ನಾಲ್ಕು ತಿಂಗಳು ತುಂಬಿ ಹರಿಯುವ ಶಿಂಷಾ ನೋಡಲು ಜಿಲ್ಲೆಯ ಹಲವು ಭಾಗದ ಪ್ರವಾಸಿಗರು ಆಗಮಿಸುತ್ತಾರೆ. ವರ್ಷವಿಡಿ ಈ ಅವಕಾಶ ಸಿಗದ ಹಿನ್ನಲೆ ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳಲಾಗಿಲ್ಲ. ಸುತ್ತಲಿನ ಗ್ರಾಮಸ್ಥರು ಮಳೆಗಾಲದ ಅಣೆಯಿಂದ ಧುಮಕ್ಕುವ ಸೊಬಗು ಸವಿದಿದ್ದಾರೆ. ತುಮಕೂರು ಮೈಸೂರು ರಸ್ತೆಗೆ ಪಕ್ಕದಲ್ಲಿ ಕಾಣಸಿಗುತ್ತದೆ. ಗುಬ್ಬಿ ತಾಲ್ಲೂಕಿನ ಕಡಬ ಕಲ್ಲೂರು ಕ್ರಾಸ್ ಮೂಲಕ ನಾಲ್ಕು ಕಿಮೀ ಕ್ರಮಿಸಿದರೆ ಈ ಜಲಪಾತ ಕಾಣುತ್ತದೆ. ನೈಸರ್ಗಿಕ ಅಲ್ಲವಾದರೂ ಮಾನವ ನಿರ್ಮಿತ ಆಕರ್ಷಣೀಯ ಎನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000652807

ಗುಬ್ಬಿ ತಾಲ್ಲೂಕಿನಲ್ಲಿ ಪ್ರವಾಸಿ ತಾಣಗಳೇ ಕಡಿಮೆ. ಇಂತಹ ಸಂದರ್ಭದಲ್ಲಿ ವಾಸುದೇವ ಅಣೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಈ ಅಣೆಯನ್ನು ಮತ್ತಷ್ಟು ಆಕರ್ಷಣೀಯವಾಗಿ ನಿರ್ಮಿಸಿ ಪ್ರವಾಸಿಗರ ಸಂಖ್ಯೆ ಹೆಚ್ಚಿಸಬೇಕಿದೆ. ಸುಂದರವಾಗಿ ಕಾಣಲು ಮೊದಲು ಅಲ್ಲಿನ ಒತ್ತುವರಿ ತೆರವು, ನದಿ ಹರಿಯುವ ಕೊಳ್ಳ ಅಚ್ಚುಕಟ್ಟು, ಹೂಳು ತೆಗೆಯುವುದು ಹೀಗೆ ಅನೇಕ ಕೆಲಸ ನಡೆಸಿ ಪ್ರವಾಸಿ ತಾಣವೆಂದು ಗುರುತಿಸಿ ಪ್ರವಾಸೋದ್ಯಮ ಇಲಾಖೆಯಿಂದ ಅನುಕೂಲ ಮಾಡಬೇಕು ಎಂಬುದು ಸ್ಥಳೀಯ ಪರಿಸರವಾದಿಗಳ ಒತ್ತಾಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ

 ನಾಗಸಂದ್ರ ವಿಜಯಕುಮಾರ್ ವಿವರಿಸಿದರು.

ವರದಿ – ಎಸ್. ಕೆ. ರಾಘವೇಂದ್ರ 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...