ಗುಬ್ಬಿ | ಜುಲೈ 25 ರಂದು ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ

Date:

ವೀರಶೈವ ಲಿಂಗಾಯತ ಸಂಘಟಿತರಾಗಿ ಮುಂದೆ ಸಾಗಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದಿಂದ ಇದೇ ತಿಂಗಳ 25 ರಂದು ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ, ಸೇವಾ ದೀಕ್ಷಾ ಸಮಾರಂಭ ಹಾಗೂ ಬೆಟ್ಟದಹಳ್ಳಿ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಪೀಠಾರೋಹಣ ಸುವರ್ಣ ಮಹೋತ್ಸವ ಮತ್ತು ಒಂದು ಲಕ್ಷ ರೂಗಳ ಸದಸ್ಯತ್ವ ಪಡೆದವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಎಸ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನ ಆರು ಮಠಾಧೀಶರು ಈ ಕಾರ್ಯಕ್ರಮಕ್ಕೆ ಸಾನಿಧ್ಯ ವಹಿಸಲಿದ್ದು, ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ, ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಮಹದೇವ ಬಿದರಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಸ್.ಕೆ.ರಾಜಶೇಖರ್, ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಜಿಲ್ಲಾಧ್ಯಕ್ಷ ಡಾ.ಪರಮೇಶ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮುಖಂಡರು, ಮಹಾಸಭಾ ವಿವಿಧ ಘಟಕದ ಪದಾಧಿಕಾರಿಗಳು ಆಗಮಿಸಲಿದ್ದು ತಾಲ್ಲೂಕಿನ ಎಲ್ಲಾ ಶರಣ ಶರಣೆಯರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಶಿಭೂಷಣ್ ಮಾತನಾಡಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಬರುವ ಶರಣ ಶರಣೆಯರು ತಮ್ಮ ಆಧಾರ್ ಕಾರ್ಡ್ ಮತ್ತು ಪೋಟೋ ಜೊತೆಗೆ ಸೇವಾಶುಲ್ಕ ನೀಡಿ ಸದಸ್ಯತ್ವ ಪಡೆಯಬಹುದಾಗಿದೆ. ತಾಲ್ಲೂಕು ಘಟಕ ಸದಸ್ಯತ್ವಕ್ಕೆ 250 ರೂಗಳು, ಜಿಲ್ಲಾ ಘಟಕಕ್ಕೆ 1 ಸಾವಿರ ರೂ, ರಾಜ್ಯ ಘಟಕಕ್ಕೆ 2500 ರೂ ಹಾಗೂ ರಾಷ್ಟ್ರೀಯ ಘಟಕಕ್ಕೆ 5 ಸಾವಿರ ನೀಡಿ ಸದಸ್ಯತ್ವ ಪಡೆಯಬಹುದಾಗಿದೆ. ಈ ಜೊತೆಯಲ್ಲಿ ಆಜೀವ ಸದಸ್ಯತ್ವಕ್ಕೆ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಘಟಕಕ್ಕೆ 25 ಸಾವಿರ, ಜಿಲ್ಲಾ ಘಟಕಕ್ಕೆ 50 ಸಾವಿರ, ರಾಜ್ಯ ಘಟಕಕ್ಕೆ 1 ಲಕ್ಷ ನೀಡಿ ಆಜೀವ ಸದಸ್ಯರಾಗಬಹುದು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಸಭಾ ಕೃಷಿ ಘಟಕದ ಅಧ್ಯಕ್ಷ ಬಿ.ಜಿ.ದಿವ್ಯಪ್ರಕಾಶ ಮಾತನಾಡಿ ಸಾವಿರಾರು ಮಂದಿ ಶರಣ ಶರಣೆಯರು ಸೇರುವ ಈ ಸಮಾರಂಭದಲ್ಲಿ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದಸ್ಯತ್ವ ಅಭಿಯಾನ, ಸನ್ಮಾನ ಕಾರ್ಯಕ್ರಮ, ಸೇವಾ ದೀಕ್ಷಾ ಸ್ವೀಕಾರ ಹಾಗೆಯೇ ಬೆಟ್ಟದಹಳ್ಳಿ ಶ್ರೀಗಳ ಸುವರ್ಣ ಮಹೋತ್ಸವ ಪೀಠಾರೋಹಣ ಹಿನ್ನಲೆ ಭಕ್ತಿ ಸಮರ್ಪಣೆ ನಡೆಯಲಿದೆ. ಈ ಜೊತೆಗೆ 12 ನೇ ಶತಮಾನ ವಚನಗಳ ಸುಶ್ರಾವ್ಯ ವಾಚನ ಸ್ಪರ್ಧೆ ನಡೆಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಈ ವೇದಿಕೆಯಲ್ಲಿ ನೀಡಲಾಗುವುದು ಎಂದರು.

ಮಹಾಸಭಾ ಯುವ ಘಟಕದ ಅಧ್ಯಕ್ಷ ಕೆ.ಆರ್.ಯತೀಶ್ ಮಾತನಾಡಿ ಗುಬ್ಬಿ ತಾಲ್ಲೂಕಿನಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಸಂಘಟನೆಯ ಶಕ್ತಿ ಸದಸ್ಯತ್ವ ಅಭಿಯಾನ ಮೂಲಕ ತೋರಿಸಬೇಕಿದೆ. ಹತ್ತು ಸಾವಿರಕ್ಕೂ ಅಧಿಕ ಸದಸ್ಯ ನೋಂದಣಿ ಮಾಡಿಸಿ ಅಭಿಯಾನ ಯಶಸ್ವಿ ಮಾಡಲು ಯುವ ಘಟಕ ಸಜ್ಜಾಗಿದೆ. ನಮ್ಮ ಸಮಾಜದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಿ ಎಂದು ಕರೆ ನೀಡಿದ ಅವರು ಮಹಾಸಭಾ ಸಂಘಟನೆಗೆ ಯುವ ವಿಭಾಗ, ಕೃಷಿ ವಿಭಾಗ, ಕಾನೂನು ವಿಭಾಗ, ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗ ಹಾಗೂ ಮಾಧ್ಯಮ ವಿಭಾಗ ರಚಿಸಿ ಕಾರ್ಯ ಹಂಚಿಕೊಂಡು ಕಾರ್ಯಕ್ರಮ ಯಶಸ್ವಿ ಜೊತೆಗೆ ಸದಸ್ಯತ್ವ ಅಭಿಯಾನ ಚುರುಕಿನಿಂದ ನಡೆಸುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಉಪಾಧ್ಯಕ್ಷ ವಿಶ್ವಾರಾಧ್ಯ, ನಿಕಟ ಪೂರ್ವ ಅಧ್ಯಕ್ಷ ಹೇರೂರು ರಮೇಶ್, ಪದಾಧಿಕಾರಿಗಳಾದ ಹೇಮಣ್ಣ, ಸಾಗರನಹಳ್ಳಿ ಗಂಗಾಧರ್, ಓಂಕಾರಮೂರ್ತಿ, ಬೆಣಚಿಗೆರೆ ಸ್ವರೂಪ್, ವಿಧೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...