ಗುಬ್ಬಿ | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಸೆಡ್ಡು ಹೊಡೆದು ನಿಲ್ಲಿಸಿದ್ದೇವೆ : ಶಾಸಕ ಎಂ.ಟಿ.ಕೃಷ್ಣಪ್ಪ.

Date:

ಜನಪರ ಕೆಲಸ ಮಾಡಲು ಬದ್ಧರಾಗಿ ನಮ್ಮ ಜಿಲ್ಲೆಯ ರೈತರಿಗೆ ನೀರು ಉಳಿಸಿಕೊಳ್ಳಲು ಸೆಡ್ಡು ಹೊಡೆದು ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ. ಯಾವುದೇ ಕಾರಣಕ್ಕೂ ಕೆಲಸ ಮಾಡಲು ಬಿಡುವುದಿಲ್ಲ ಎಂದು ಮತ್ತೊಮ್ಮೆ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಖಡಕ್ ಎಚ್ಚರಿಕೆ ನೀಡಿದರು.

ಗುಬ್ಬಿ ತಾಲ್ಲೂಕಿನ ಚಿಕ್ಕ ಕಲ್ಲೂರು ಗ್ರಾಮದಲ್ಲಿ ನಿರ್ಮಾಣವಾದ 1.50 ಕೋಟಿ ರೂಗಳ ಸೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಹೇಮಾವತಿ ನೀರು ಹರಿದು ಕಲ್ಲೂರು ಕೆರೆ ತುಂಬಿದ ಹಿನ್ನಲೆ ಗಂಗಾಪೂಜೆ ಸಲ್ಲಿಸಿದ್ದೇವೆ. ಈ ಜೊತೆಯಲ್ಲಿ ಸಿ.ಎಸ್.ಪುರ, ಮಾವಿನಹಳ್ಳಿ ಹಾಗೂ ಚಂಗಾವಿ ಕೆರೆ ಕೂಡಾ ಶೀಘ್ರದಲ್ಲಿ ತುಂಬಲಿದೆ ಎಂದು ತಿಳಿಸಿದರು.

ಕೆರೆಕಟ್ಟೆ ತುಂಬಿದಂತೆ ರೈತರಿಗೆ ಅವಶ್ಯ ರಸ್ತೆ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಅನುದಾನ ಮಂಜೂರಾತಿಗೆ ಸಿದ್ಧವಿದೆ. ಈ ಹಣದಲ್ಲಿ 50 ಲಕ್ಷ ಸೇತುವೆಯ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ ಅವರು ಸಿ.ಎಸ್.ಪುರದಲ್ಲಿ ನೆನೆಗುದಿಗೆ ಬೀಳುವ ಹಂತಕ್ಕೆ ತಲುಪಿದ್ದ ದೇವೇಗೌಡರ ಸಮುದಾಯ ಭವನ ನಿರ್ಮಾಣ ಪೂರ್ಣಗೊಳಿಸಿ ಜನರ ಬಳಕೆಗೆ ಸಿದ್ದ ಮಾಡಲಾಗುವುದು. ಈ ಹಿನ್ನಲೆ ಪೂಜಾ ಕಾರ್ಯಕ್ರಮ ನಡೆಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗಮಂಗಲ ಗಲಭೆಯನ್ನು ಕೋಮು ಪ್ರಚೋದನಕಾರಿ ಮಾಡುವುದು ಬೇಡ. ಎಲ್ಲರೂ ಸೌಹಾರ್ದವಾಗಿ ಬದುಕು ನಡೆಸಬೇಕು. ಕೆಲ ಕಿಡಿಗೇಡಿಗಳ ಕೃತ್ಯಕ್ಕೆ ಊರಿನ ಶಾಂತಿ ಕಡದುವುದು ಬೇಡ ಎಂದ ಅವರು ಕುಮಾರಣ್ಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎರಡೂ ಕೋಮಿನ ಜನರನ್ನು ಬಂಧಿಸಲಾಗಿದೆ ಎಂದ ಅವರು ಕೆಟ್ಟ ಈ ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಜನರ ಬೇಡಿಕೆ ಈಡೇರಿಸಲು ಸಾಹಸ ಮಾಡಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜುಲೇಖಾಭಿ ಯೂಸಫ್, ಉಪಾಧ್ಯಕ್ಷೆ ಸುಮಿತ್ರಾ ಶಿವಯ್ಯ, ಸದಸ್ಯರಾದ ಶಿವಾನಂದಯ್ಯ, ನಾಗರಾಜು, ಹಜ್ರತ್ ಅಲಿ, ಮಾಯಣ್ಣಗೌಡ, ಜಮ್ ಶಿದ್ ಬೀ, ಲಕ್ಷ್ಮೀರಾಜು, ಜಯಮಾಲಾ, ಮಂಜುಳಾ, ಮುಖಂಡರಾದ ನಂಜೇಗೌಡ, ಬೋರಪ್ಪನಹಳ್ಳಿ ಕುಮಾರ್, ಜಗದೀಶ್, ಜನ್ನೇನಹಳ್ಳಿ ಮೂರ್ತಣ್ಣ, ಶಾಸಕರ ಪುತ್ರ ವೆಂಕಟೇಶ್, ಸ್ಥಳೀಯ ಮುಖಂಡರಾದ ಪ್ರಕಾಶ್, ಭಾರತಿ ಸುರೇಶ್, ಪಟೇಲ್ ಚಂದ್ರು, ವೀರಣ್ಣ, ನಾಗೇಶ್, ಪಿಡಿಓ ಪ್ರಶಾಂತ್ ಕುಮಾರ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...