ಗುಬ್ಬಿ | ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನವನ್ನು ಬಗ್ಗು ಬಡಿಯುವ ಅವಕಾಶ ಕಳೆದುಕೊಂಡೆವು : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದಲ್ಲಿ ಮೃತ ಟೆರರಿಸ್ಟ್ ಗಳಿಗೆ ಒಂದು ಕೋಟಿ ರೂ ಪರಿಹಾರ ನೀಡಿದ್ದು ಬಲವಾದ ಸಾಕ್ಷಿಯಾಗಿದೆ. ಯುದ್ಧದ ಟ್ರೇಲರ್ ಅಂತಲೇ ಕದನ ವಿರಾಮ ನೀಡಿ ನಮ್ಮ ಪ್ರವಾಸಿಗರ ಸಾವಿನ ಪ್ರತೀಕಾರ ತೀರಿಸಿಕೊಳ್ಳುವ ಉತ್ತಮ ಅವಕಾಶ ಕಳೆದು ಕೊಂಡಿದ್ದು ವಿಷಾದ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

  ಗುಬ್ಬಿ ತಾಲ್ಲೂಕಿನ ಚಿಕ್ಕೋನಹಳ್ಳಿ ಜ್ಯೋತಿನಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ ಒಟ್ಟು 1.85 ಕೋಟಿ ರೂಗಳ ಐದು ಗ್ರಾಮದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಟ್ರಂಪ್ ಹೇಳಿಕೆಗೆ ಯುದ್ದ ವಿರಾಮ ಕೊಟ್ಟಿದ್ದು ಉತ್ತಮ ಅವಕಾಶ ಕಳೆದು ಹೋಯಿತು. ನಮ್ಮ ವಿರುದ್ಧ ಪಾಕಿಸ್ತಾನದ ಸರ್ಕಾರ ಹೇಳಿಕೆ ನೀಡಲು ಸಮಯ ನೀಡದೆ ಮುಂದುವರೆದಿದ್ಧ ನಮ್ಮ ಸೇನೆಗೆ ಮೂರು ದಿನ ಸಮಯ ನೀಡಿದ್ದರೆ ಸಾಕಿತ್ತು. ಪಾಕಿಸ್ತಾನ ಭೂಪಟದಲ್ಲಿ ಹುಡುಕಬೇಕಿತ್ತು. ಈ ಬಿಗಿ ಹಿಡಿತ ಸಾಧಿಸಿ ಪಿಓಕೆ ನಮ್ಮದಾಗಿಸಿಕೊಳ್ಳಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಂದಾಯ ಗ್ರಾಮಗಳ ಪಟ್ಟಿಗೆ ಹೊಸದಾಗಿ 9 ಗ್ರಾಮಗಳನ್ನು ಸೇರಿಸಲಾಗಿದೆ. ಈಗಾಗಲೇ ಕಂದಾಯ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೋಂದಣಿ ಕಾರ್ಯ ನಡೆಸಲಾಗಿದೆ. ಈಗಾಗಲೇ 1600 ನೋಂದಣಿ ಕಾರ್ಯ ಮುಗಿದಿದೆ. ಮೂಲ ಗ್ರಾಮದಿಂದ 700 ಮೀಟರ್ ದೂರ ಇರುವ ಗ್ರಾಮಗಳನ್ನು ಗುರುತಿಸಿ ಸರ್ಕಾರದ ಮಾನದಂಡ ಅನುಸರಿಸಿ ಕಂದಾಯ ಗ್ರಾಮ ಮಾರ್ಪಾಟು ಮಾಡಲಾಗುತ್ತಿದೆ ಎಂದ ಅವರು ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧವಿದೆ. ಈ ಹಿಂದೆ ಬಿಜೆಪಿ ಸರ್ಕಾರ ಎರಡು ವರ್ಷ ಮುಂದೂಡಿತ್ತು. ಆಗ ಮಾತನಾಡದ ಶಾಸಕ ಕೃಷ್ಣಪ್ಪ ಅವರು ತಾಕತ್ತಿಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಾರೆ. ಮೈತ್ರಿ ಮಾಡಿಕೊಂಡು ಹಿನ್ನಲೆ ಬಿಜೆಪಿ ಮಾಡಿದ ತಪ್ಪು ಮಾತನಾಡುತ್ತಿಲ್ಲ ಎಂದು ಟಾಂಗ್ ನೀಡಿದ ಅವರು ಈಗ 5 ಕೋಟಿ ರೂಗಳ ಸಿಸಿ ರಸ್ತೆಗಳ ಕಾಮಗಾರಿ ಎಲ್ಲಡೆ ನಡೆದಿದೆ. ಬೆಲವತ್ತ ಗ್ರಾಮಕ್ಕೆ ಒಂದು ಕೋಟಿ, ನಿಟ್ಟೂರು 60 ಲಕ್ಷ, ತ್ಯಾಗಟೂರು 90 ಲಕ್ಷ ಕೆಲಸ ಆರಂಭವಾಗಲಿದೆ. ಈ ಜೊತೆಗೆ ಎತ್ತಿನಹೊಳೆ ಯೋಜನೆಯ 30 ಕೋಟಿ ಹಾಗೂ ಹೇಮಾವತಿ ಇಲಾಖೆಯ 100 ಕೋಟಿ ರೂಗಳಲ್ಲಿ ಗ್ರಾಮೀಣ ರಸ್ತೆ ಅಭಿವೃದ್ದಿಗೆ ಶೀಘ್ರ ಪೂಜೆ ನಡೆಯಲಿದೆ ಎಂದರು.

ಗಣಿಭಾದಿತ ಗ್ರಾಮಗಳ ಅಭಿವೃದ್ಧಿಗೆ 75 ಕೋಟಿ ಮಂಜೂರು ಆಗಿದೆ. ಗ್ರಾಮಗಳ ಪಟ್ಟಿ ಸಿದ್ಧಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು. ಶಾಲೆಗಳ ಅಭಿವೃದ್ಧಿಗೆ ನಾನು ಸಚಿವನಾಗಿದ್ದ ಸಮಯದಲ್ಲಿ 10 ಕೋಟಿ ರೂಗಳನ್ನು ಬಿಡುಗಡೆ ಮಾಡಿ ಕೆಲಸ ಮಾಡಲಾಗಿದೆ. ಈಗ ಹೊಸ 35 ಕೊಠಡಿಗಳಿಗೆ ಬೇಡಿಕೆ ಇದೆ. ನಮ್ಮಲ್ಲಿನ ಎಚ್ ಎಎಲ್ ಘಟಕದಿಂದ ಬರುವ ಅನುದಾನವನ್ನು ಶಾಲೆಗಳಿಗೆ ಬಳಸಲಾಗಿದೆ ಎಂದ ಅವರು ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಕೊಟ್ಟ ಮಾತಿನಂತೆ ನಡೆದು ಐದು ಗ್ಯಾರಂಟಿ ಯೋಜನೆ ಸಫಲತೆ ಕಂಡಿದೆ. ಮುಂದಿನ ಮೂರು ವರ್ಷ ಸಹ ಇದೇ ರೀತಿ ಜನಪರ ಕೆಲಸ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮುಖಂಡರಾದ ಉಂಡೆ ರಾಮಣ್ಣ, ಸಿ.ಜಿ.ಲೋಕೇಶ್, ಯು.ರಾಜಣ್ಣ, ಸತ್ತಿಗಪ್ಪ, ಬೆಲವತ್ತ ಶಿವಕುಮಾರ್, ಪಣಗಾರ್ ವೆಂಕಟೇಶ್, ಗಳಗ ದಿವಾಕರ್, ಗುತ್ತಿಗೆದಾರರಾದ ನಟರಾಜ್, ರವಿ, ಸಿದ್ದರಾಜು, ಪಂಚಾಯತ್ ರಾಜ್ ಎಇಇ ಚಂದ್ರಶೇಖರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...