ಗುಬ್ಬಿ | ಸುಸಜ್ಜಿತ ರಂಗ ಮಂದಿರ ಕಲಾವಿದರಿಗೆ ಪ್ರೋತ್ಸಾಹ : ಮಂಡ್ಯ ರಮೇಶ್

Date:

 ಸುಸಜ್ಜಿತವಾದ ಗುಬ್ಬಿಯ ರಂಗಮಂದಿರದಲ್ಲಿ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಚೈತನ್ಯ ತುಂಬುವ ಶಕ್ತಿ ಇದೆ ಎಂದು ಖ್ಯಾತ ರಂಗಕರ್ಮಿ ನಟ ನಿರ್ದೇಶಕ ಮಂಡ್ಯ ರಮೇಶ್ ಅಭಿಪ್ರಾಯ ಪಟ್ಟರು.

ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ಹಾಗೂ ಮಾಲತಮ್ಮ ಆರ್ಟ್ ಫೌಂಡೇಶನ್ ವತಿಯಿಂದ ಜರುಗಿದ ನಾಟಕೋತ್ಸವದಲ್ಲಿ ನಟನಾ ಕಲಾ ತಂಡದ ಸ್ಥಾವರ ಜಂಗಮ ನಾಟಕ ಪ್ರದರ್ಶನ ಸಂದರ್ಭದಲ್ಲಿ ಮಾತನಾಡಿದರು.

ನಾಟಕರತ್ನ ಗುಬ್ಬಿ ವೀರಣ್ಣನವರ ಜನ್ಮ ಭೂಮಿ ಗುಬ್ಬಿಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅರ್ಥಪೂರ್ಣ. ಪುಣ್ಯ ರಂಗಭೂಮಿಯ ಮಹಾನ್ ದಿಗ್ಗಜ ವೀರಣ್ಣನವರ ಗರಡಿಯಲ್ಲಿ ಈ ನಾಡಿನ ಅನೇಕ ಮೇರು ನಟರು ಬೆಳೆ ದಿದ್ದಾರೆ ಎಂದ ಅವರು ಬಿ.ಜಯಶ್ರೀ ನನಗೆ ನಾಗಮಂಡಲ ಚಲನಚಿತ್ರದಿಂದ ಹೊಸ ಹುರುಪು ನೀಡಿದ್ದಾರೆ. ಈ ವಯಸ್ಸಿನಲ್ಲಿ ತಮ್ಮ ತಾಯಿಯ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆ ಮಾಡಿ ರಂಗ ಪರಂಪರೆಯನ್ನು ಮುಂದುವರೆಸುತ್ತಿರುವುದು ಅಭಿನಂದಾರ್ಹ. ನಮ್ಮಂತಹ ಕಲಾವಿದರಿಗೆ ಆಶ್ರಯದಾತರಾಗಿದ್ದಾರೆ ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯಶ್ರೀ ಅವರು ರಾಜ್ಯಸಭಾ ಸದಸ್ಯರಾಗಿದ್ದಾಗ ನಾಡಿನ ಮೂಲೆ ಮೂಲೆ ಗಳಲ್ಲಿ ರಂಗಮಂದಿರಗಳಿಗೆ ಹಣ ನೀಡಿದ್ದಾರೆ. ಅದರಲ್ಲಿ ನಟನಾ ಸಂಸ್ಥೆ ಕೂಡಾ ಒಂದು ಎಂದ ಅವರು ಅವರ ತಾತ ಗುಬ್ಬಿ ವೀರಣ್ಣ ಅವರ ಹೆಸರಿನಲ್ಲಿ ಹುಟ್ಟೂರಿನಲ್ಲಿ ಸುಸಜ್ಜಿತ ರಂಗಮಂದಿರ ಕಟ್ಟಿ ಟ್ರಸ್ಟ್ ಮೂಲಕ ನಾಟಕೋತ್ಸವ, ಸಂಗೀತೋತ್ಸವ, ನೃತ್ಯೋತ್ಸವ ಹಾಗೂ ಪೌರಾಣಿಕ ಐತಿಹಾಸಿಕ ಸ್ಥಳೀಯ ರಂಗ ನಾಟಕಗಳ ಉತ್ಸವ ನಡೆಸಿ ತಮ್ಮ ಪರಂಪರೆ ಮುಂದುವರೆಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷೆ ಬಿ.ಜಯಶ್ರೀ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯತೀಶ್, ನಾಟಕೋತ್ಸವ ಸಂಚಾಲಕ ರಾಜೇಶ್ ಗುಬ್ಬಿ, ಟ್ರಸ್ಟಿ ಹೆಚ್.ಎಂ.ರಂಗಯ್ಯ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...