ಗುಬ್ಬಿ | ಜಾತಿ ಕಾಲಂನಲ್ಲಿ ಹೊಲಯ ಎಂದು ಬರೆಸಿ : ಟಿ. ಈರಣ್ಣ

Date:

 ಜಾತಿ ಗಣತಿಯಲ್ಲಿ ಗುಬ್ಬಿ ತಾಲ್ಲೂಕಿನ ಛಲವಾದಿ ಸಮುದಾಯದವರು  ಜಾತಿ ಕಾಲಂನಲ್ಲಿ ‘ಹೊಲೆಯ’ ಎಂದು ಬರೆಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಟಿ. ಈರಣ್ಣ ತಿಳಿಸಿದರು.

 ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು  ಛಲವಾದಿ ಮಹಾಸಭಾ ವತಿಯಿಂದ ಆಯೋಜಿಸಿದ್ದ ಒಳ ಮೀಸಲಾತಿ ಮತ್ತು ಜಾತಿಗಣತಿ ಸಮಾಲೋಚನ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಒಳ ಮೀಸಲಾತಿ ವರ್ಗಿಕರಣಕ್ಕೆ ಗಣತಿಗೆ ಅವಕಾಶ ಕಲ್ಪಿಸಿದ್ದು, ಇದರಲ್ಲಿ ಬಲಗೈ ಸಮುದಾಯಕ್ಕೆ 37 ಉಪಜಾತಿಗಳು ಸೇರಲಿವೆ. ಮೇ 5 ರಿಂದ ನಡೆಯಲಿರುವ ಜಾತಿ ಮತ್ತು ಜನಗಣತಿಯಲ್ಲಿ ಉಪಜಾತಿಯ ಅವಕಾಶವನ್ನು ಮಾಡಿಕೊಟ್ಟಿದೆ. ಜಾತಿ ಕಾಲಂ ನಲ್ಲಿ ಹೊಲೆಯ ಎಂದು ಬರೆಸಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನಡೆದ ಸಭೆಗಳಲ್ಲಿ ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ. ಅದರಂತೆ ಪ್ರತಿಯೊಬ್ಬರು ಹೊಲೆಯ ಎಂದು ಬರೆಸಬೇಕು. ಈ ಜಾತಿ ಜನಗಣತಿ 3 ಹಂತಗಳಲ್ಲಿ ನಡೆಯಲ್ಲಿದ್ದು, ಮೊದಲನೇ ಹಂತವು ಮೇ 5ರಿಂದ ಮೇ 17 ರವರೆಗೆ ನಡೆಯುತ್ತದೆ. ಇದರಲ್ಲಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಾರೆ. ಎರಡನೇ ಹಂತವು ಮೇ 19 ರಿಂದ 21 ರವರೆಗೆ ನಡೆಯಲಿದೆ ಇದರಲ್ಲಿ ಪ್ರದೇಶವಾರು ಮತಗಟ್ಟೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ಮಾಡುತ್ತಾರೆ. ಹಾಗೇ ಮೂರನೇ ಹಂತವು ಮೇ 19 ರಿಂದ 23 ರವರೆಗೆ ಆನ್ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ನಮ್ಮ ಸಮಿತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು ಗ್ರಾಮಗಳಲ್ಲಿಯೂ ಮನೆ ಮನೆಗೆ ಭೇಟಿ ನೀಡಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.

1001379161

ತಾಲೂಕು ಛಲವಾದಿ ಮಹಾಸಭಾದ ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಪದಾಧಿಕಾರಿಗಳು ಮಾಡಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಟ್ಟೂರು ಹೋಬಳಿ ಘಟಕದ ಅಧ್ಯಕ್ಷ ಗೋಪಾಲ್ ಮಾತನಾಡಿ, ಜಾತಿಗಣತಿ ಮಾಡುವ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ತಾವುಗಳು ಖುದ್ದಾಗಿ ಇದ್ದು ಪೆನ್ನಿನಲ್ಲಿ ಹೊಲೆಯ ಎಂದು ಬರೆಯುವುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

  ಸಭೆಯಲ್ಲಿ ತಾಲೂಕು ಉಪಾಧ್ಯಕ್ಷರು ಸಚಿನ್, ಇರಕಸಂದ್ರ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಧು, ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರು ಕೃಷ್ಣಪ್ಪ, ಆನಂದ್, ಸೋಮಣ್ಣ, ರವೀಶ್, ಜಗದೀಶ್, ಹೋಬಳಿ ಘಟಕದ ಅಧ್ಯಕ್ಷರಾದ, ಮುನಿರಾಜು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...