ಗುಡಿಬಂಡೆ | ನಿವೇಶನ ಹಂಚಿಕೆಗೆ ಅಧಿಕಾರಿಗಳ ನಿರ್ಲಕ್ಷ್ಯ; ಕಡೇಹಳ್ಳಿ ಗ್ರಾಮ ದಲಿತರ ಪ್ರತಿಭಟನೆ

Date:

ರಸ್ತೆ ಅಗಲೀಕರಣ ಸಮಯದಲ್ಲಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ನೀಡದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಡೇಹಳ್ಳಿ ಗ್ರಾಮದ ದಲಿತ ಜನಾಂಗದವರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ವಾಸಿಸುವಂತಹ ದಲಿತ ಜನಾಂಗದವರಿಗೆ ಸರ್ವೇ ನಂ. 131ರಲ್ಲಿ 2 ಎಕರೆ 15 ಗುಂಟೆ ಜಮೀನಿನಲ್ಲಿ ಖಾಲಿ ನಿವೇಶನಗಳನ್ನು ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿ ಕುಟುಂಬ ಸಹಿತ ಧರಣಿ ನಡೆಸಿದರು.

ಕಡೇಹಳ್ಳಿ ಗ್ರಾಮದ ನಿವೇಶನ ಸಂತ್ರಸ್ತ ಹಾಗೂ ದಲಿತ ಮುಖಂಡ ಕದಿರಪ್ಪ ಮಾತನಾಡಿ, “ನಮ್ಮ ಗ್ರಾಮದಲ್ಲಿ ರಸ್ತೆ ಅಗಲೀಕರಣ ಸಮಯದಲ್ಲಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೇವೆ. ಅನೇಕ ಕುಟುಂಬಗಳಿಗೆ ವಾಸ ಮಾಡಲು ಮನೆಗಳಿಲ್ಲದೇ ಅತಂತ್ರದಲ್ಲಿ ಜೀವನ ಸಾಗಿಸುತ್ತಿದ್ದೇವೆ. ಜತೆಗೆ ಬಹುತೇಕ ಮನೆಗಳಲ್ಲಿ ಮಕ್ಕಳ ಮದುವೆ ಮಾಡಬೇಕಾಗಿದೆ. ಸರಿಯಾದ ಮನೆಗಳಿಲ್ಲದ ಕಾರಣ ಆಂತಂಕದಲ್ಲಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗುಡಿಬಂಡೆ 2

“ನಿವೇಶನ ರಹಿತರಿಗೆ ನಿವೇಶನಗಳನ್ನು ಮಂಜೂರು ಮಾಡಲು ಸದರಿ ಜಮೀನಿನಲ್ಲಿ ನಿವೇಶನಗಳಿಗಾಗಿ ಜಮೀನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಹೆಸರಿಗೆ ಪಹಣಿಯನ್ನು ಮಂಜೂರು ಮಾಡಿ ಅನೇಕ ವರ್ಷಗಳು ಕಳೆದರೂ ಕೂಡಾ ಈವರೆಗೆ ನಿವೇಶನ ಕೊಡುವಲ್ಲಿ ಅಧಿಕಾರಿಗಳು ನಿರ್ಲಕ್ಯ್ಯ ವಹಿಸಿದ್ದಾರೆ” ಎಂದು ಆರೋಪಿಸಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ ಅದಿನಾರಾಯಣಪ್ಪ ಮಾತನಾಡಿ, “ಅಧಿಕಾರಿಗಳು ನಮ್ಮ ಗ್ರಾಮದ ದಲಿತ ಜನಾಂಗದವರಿಗೆ ನಿವೇಶನಗಳನ್ನು ಕೊಡುವಲ್ಲಿ ನಮ್ಮನ್ನು ಯಾಮಾರಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ನಿವೇಶನಗಳಿಲ್ಲದೆ ಪರದಾಡುತ್ತೀದ್ದೇವೆ. ಈಗ ಜಮೀನು ಗುರುತು ಮಾಡಿದ್ದಾರೆ. ಆದರೂ ನಿವೇಶನಗಳನ್ನು ಕೊಡತ್ತಾರೆಂದು ನೋಡಿದರೆ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ತಡೆಯಾಜ್ಞೆ ಇದೆಯೆಂದು ನಾಮಫಲಕ ಹಾಕಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸದರಿ ಸರ್ವೇ ನಂಬರ್‌ನಲ್ಲಿ 17 ಎಕರೆಯಷ್ಟು ಜಮೀನು ಇದೆ. ಎಷ್ಟು ಎಕರೆಗೆ ತಡೆಯಾಜ್ಞೆ ಇದೆಯೆಂದು ಅಧಿಕಾರಿಗಳು ಸ್ಪಷ್ಟವಾಗಿ ಹೇಳದೆ ನಮ್ಮನ್ನು ಆತಂಕಗೊಳಿಸಿ ನಿವೇಶನಗಳನ್ನೂ ಹಂಚದೆ ತೊಂದರೆ ಕೊಡುತ್ತೀದ್ದಾರೆ. ಆದ್ದರಿಂದ ನಮಗೆ ನಿವೇಶನಗಳನ್ನು ಮಂಜೂರು ಮಾಡಿಕೊಡುವ ತನಕ ಧರಣಿಯನ್ನು ನಿಲ್ಲಿಸುವುದಿಲ್ಲ, ಮುಂದುವರೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಚೌಡೇಶ್ವರಿಯ ದೇವಾಲಯದಲ್ಲಿ ವಸ್ತ್ರಾಭರಣ, ವಿಗ್ರಹಗಳ ಕಳವು

ತಹಶೀಲ್ದಾರ್ ಸಿಗ್ಬತ್‌ಉಲ್ಲಾ, ಕಾರ್ಯನಿರ್ವಹಣಾಧಿಕಾರಿ ನಾಗಮಣಿ, ಹಂಪಸಂದ್ರ ಪಿಡಿಒ ನರಸಿಂಹಮೂರ್ತಿ,
ಪೊಲೀಸ್ ಉಪನಿರೀಕ್ಷಕ ಗಣೇಶ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಚರ್ಚೆ ಮಾಡಿದ್ದಾರೆ. ಆದರೆ ನಿವೇಶನಗಳ ಹಕ್ಕುಪತ್ರ ನೀಡುವವರೆಗೂ ಯಾವುದೇ ಕಾರಣಕ್ಕು ಸ್ಥಳದಿಂದ ಕದಲುವುದಿಲ್ಲವೆಂದು ಧರಣಿನಿರತರು ಪಟ್ಟುಹಿಡಿದಿದರು. ಬಳಿಕ ಅಧಿಕಾರಿಗಳು ಯಾವುದೇ ಭರವಸೆ ನೀಡದೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಧರಣಿನಿರತರು ಸ್ಥಳದಲ್ಲಿಯೇ ಅಡುಗೆ ಮಾಡಿಕೊಂಡು ಊಟ ತಿಂಡಿಗಳನ್ನು ತಿಂದು ಧರಣಿಯನ್ನು ಮುಂದುವರೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡ ಗುಡಿಬಂಡೆ ಗಂಗಪ್ಪ, ಕಡೇಹಳ್ಳಿ ಗ್ರಾಮದ ನಿವೇಶನ ಸಂತ್ರಸ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...