ಗುಳೇದಗುಡ್ಡ | ಕುರಬರ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಸರ್ಕಾರದ ಕ್ರಮ ಖಂಡಿಸಿ ವಾಲ್ಮೀಕಿ ಮಹಾಸಭಾ ಪ್ರತಿಭಟನೆ

Date:

ರಾಜ್ಯ ಸರ್ಕಾರ ಕುರಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ಬೃಹತ್ ಪ್ರತಿಭಟನೆ ನಡೆಸಿತು.

ಪಟ್ಟಣದ ಅಂಬೇಡ್ಕರ್ ಭವನದಿಂದ ಪ್ರತಿಭಟನೆ ಆರಂಭಿಸಿ ಪವರ್ ಕ್ರಾಸ್, ಪುರಸಭೆ, ಬನ್ನಿಕಟ್ಟಿ, ಸರಫ್ ಬಜಾರ್, ಕಂಠಿಪೇಟೆ ಬಾದಾಮಿ ನಕ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಅಧ್ಯಕ್ಷ ಫಕೀರಪ್ಪ ತಳವಾರ ಮಾತನಾಡಿ, “ಕುರುಬ ಸಮುದಾಯ ರಾಜ್ಯದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದ್ದು, ಆ ಸಮುದಾಯ ಶಿಕ್ಷಣ ಸೇರಿದಂತೆ ಹಲವು ರಂಗಗಳಲ್ಲಿ ಬೆಳವಣಿಗೆ ಹೊಂದಿದೆ. ಅಂತಹ ಸಮುದಾಯವನ್ನು ಹಿಂದುಳಿದಿರುವ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿಸಲು ಸರ್ಕಾರ ಹೊರಟಿದೆ. ಇದರಿಂದ ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ನಮ್ಮ ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಇದು ಮುಂದುವರೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕಿನಲ್ಲಿ 140 ಜನರು ನಕಲಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಇದರಿಂದ ನಮ್ಮ ನಮಗೆಲ್ಲ ಅನ್ಯಾಯವಾಗಿದೆ. ನಾಲ್ಕೈದು ತಿಂಗಳಿಂದ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಕ್ರಮ ಆಗಿಲ್ಲ. ಸೆ.30 ರೊಳಗೆ ಅವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ; ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಮುಖಂಡರಾದ ಶಿವಾನಂದ ವಾಲೆಕಾರ, ಪರಶುರಾಮ ತಳವಾರ,ಶಿವಾನಂದ ವಾಲೀಕಾರ, ರಾಮಣ್ಣ ಚಂದರಗಿ, ಲಾಯಪ್ಪ ಗುಡಿಸಲಮನಿ,ಯಮನಪ್ಪ ಗೌಡರ, ಶಂಕ್ರಪ್ಪ ಗೌಡರ,ಹನುಮಂತ ಎತ್ತಿನಮನಿ, ಭೀಮಪ್ಪ ಗೌಡರ, ಹನುಮಂತ ತಳವಾರ,ಕಲ್ಲನಗೌಡರ ಶಿವಾನಂದ, ಲಕ್ಷ್ಮಣ ಗದ್ದನಕೇರಿ, ಹೇಮಂತ ಮಲ್ಲಾರ, ದ್ಯಾಮಣ್ಣ ಗೌಡ,ಪರಶುರಾಮ ತಳವಾರ, ಅರ್ಜುನ ಮನ್ನಿಕಟ್ಟಿ, ಬರಮಪ್ಪ ಪೂಜಾರಿ, ರಾಮನಗೌಡ ಗೌಡರ, ಗಣಪತಿ ತಳವಾರ,ಸುಭಾಸ ಹೊಸಮನಿ,ಯಮನಪ್ಪ ಗುಡಿಸಲಮನಿ, ಶಿವಪ್ಪ, ಬಸವರಾಜ ಸಂಗೊಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...