ಉಡುಪಿ | ಗುಲ್ವಾಡಿ ಪ್ರಶಸ್ತಿಗೆ ಧರಣಿದೇವಿ ಮಾಲಗತ್ತಿ, ರಫೀ ಪಾಷಾ ಆಯ್ಕೆ

Date:

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರದ ಗುಲ್ವಾಡಿ ಟಾಕೀಸ್ ಮತ್ತು ಕೋಟದ ಉಸಿರು ಅಧ್ಯಯನ ಕೇಂದ್ರಗಳು ನೀಡುವ 2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು. 13 ರಂದು ಉಡುಪಿಯಲ್ಲಿ ಈ ಪ್ರಶಸ್ತಿಗಳ‍ನ್ನು ಪ್ರದಾನ ಮಾಡಲಾಗುತ್ತದೆ, ಈ ಪ್ರಶಸ್ತಿಗಳು 10 ಸಾವಿರ ರು. ನಗದು ಮತ್ತು ಸ್ಮರಣ ಫಲಕಗಳನ್ನು ಒಳಗೊಂಡಿರುತ್ತದೆ ಎಂದರು.

1007118969


ಮೊಹಮ್ಮದ್‌ ರಫೀ ಪಾಷ ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ವಿಚಾರಗಳ ಬಗ್ಗೆ ಅಪಾರ ಕಳಕಳಿ ಹೊಂದಿರುವ ಹಿರಿಯ ಸಾಹಿತಿ. ಮೊಹಮ್ಮದ ರಫೀ ಪಾಷ ಪ್ರಸ್ತುತ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಉಪ ಆಯುಕ್ತರಾಗಿದ್ದಾರೆ. ಭಾರತೀಯ ನಾಗರೀಕ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಗಳಿಗೆ ಸೇರಬಯಸುವ ಗ್ರಾಮೀಣ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ 12ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಲಹೆ ಮಾರ್ಗದರ್ಶನ ನೀಡುತ್ತಿದ್ದಾರೆ. 2010 ರಲ್ಲಿ ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೊದಲು ದೆಹಲಿ, ಜಮ್ಮು ಮತ್ತು ಕಾಶ್ಮೀರ, ಹೈದ್ರಾಬಾದ್ ಇನ್ನಿತರ ರಾಜ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನೂರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಭರವಸೆ ಮೂಡಿಸಿದ್ದಾರೆ. ಅಮೇರಿಕಾದ ಅಕ್ಕ, ಇಂಗ್ಲೆಂಡಿನ ವಿಶ್ವ ಒಕ್ಕಲಿಗರ ವೇದಿಕೆ, ಆಸ್ಟ್ರೇಲಿಯಾದ ಕನ್ನಡ ಕೂಟ, ದುಬೈಯ ಅಂತರರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ, ದೆಹಲಿ ಕರ್ನಾಟಕ ಸಂಘದ ಪ್ರಶಸ್ತಿ ಗೌರವಗಳಿಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಧರಣಿದೇವಿ ಮಾಲಗತ್ತಿ:
ಕವಿ, ಸಂಶೋಧಕಿ, ವಿಮರ್ಶಕಿಯಾಗಿ ಮಹಿಳಾಪರ ಚಿಂತನೆಗಳ ಮೂಲಕ ಸಹಸ್ರಾರು ಓದುಗರನ್ನ ಹೊಂದಿರುವ ಡಾ. ಧರಣಿದೇವಿ ಮಾಲಗತ್ತಿ ಮೂಲತಃ ಬಂಟ್ವಾಳದವರು. ಅಲ್ಲಿಯೇ ಬಿಕಾಂ ಪದವಿಯ ನಂತರ ಮೈಸೂರು ವಿ.ವಿ.ಯಿಂದ ನಿರ್ವಹಣಾಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದು, ಮಂಗಳೂರು, ಮೈಸೂರು ವಿ.ವಿ.ಗಳಲ್ಲಿ ಉಪನ್ಯಾಸಕರಾಗಿ ಒಂದು ದಶಕ ಕರ್ತವ್ಯ ನಿರ್ವಹಿಸಿದ್ದಾರೆ.

ಮುಂದೆ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಜಗೌ ಸಾಹಿತ್ಯ ಪ್ರಶಸ್ತಿ, ಧಾರವಾಡದ ದತ್ತಿ ಬಹುಮಾನ, ಗೋರೂರು ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗಡೆ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಅವರಿಗೆ ಸಂದಿವೆ.
ಸುದ್ದಿಗೋಷ್ಠಿಯಲ್ಲಿ ಕಸಾಪದ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹಮೂರ್ತಿ ಮತ್ತು ಗುಲ್ವಾಡಿ ಟಾಕೀಸ್‌ನ ಯಾಕೂಬ್ ಖಾದರ್ ಗುಲ್ವಾಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...