ಬೀದರನಲ್ಲಿ ಐ.ಟಿ ಪಾರ್ಕ್ ಸ್ಥಾಪನೆಗೆ ಗುರುನಾಥ ವಡ್ಡೆ ಆಗ್ರಹ

Date:

  • ಡಾ. ಡಿ ಎಂ ನಂಜುಂಡಪ್ಪ ಸಮಿತಿ ವರದಿ ಸಲ್ಲಿಸಿ 20 ವರ್ಷ ಕಳೆದಿವೆ
  • ಉದ್ಯೋಗಕ್ಕಾಗಿ ಬೆಂಗಳೂರು, ಹೈದರಬಾದ್‌, ಪುಣೆ ನಗರಗಳಿಗೆ ವಲಸೆ

ಡಾ. ಡಿ ಎಂ ನಂಜುಂಡಪ್ಪ ವರದಿ ಆಧರಿಸಿ, ಬೀದರ್‌ ಜಿಲ್ಲೆಯಲ್ಲಿ ಐ.ಟಿ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಸಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಒತ್ತಾಯಿಸಿದ್ದಾರೆ. ಬೀದರ್‌ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಬೀದರ್‌ ಜಿಲ್ಲೆ ರಾಜ್ಯದ ರಾಜಧಾನಿಯಿಂದ ದೂರದ ಜಿಲ್ಲೆಯಾಗಿದೆ. ವಿಜ್ಞಾನ ತಂತ್ರಜ್ಞಾನದ ಜೊತೆಗೆ ಅಭಿವೃದ್ಧಿಯಲ್ಲೂ ಬಹು ಹಿಂದೆ ಉಳಿದಿದೆ. ಆದ್ದರಿಂದ ಹಿಂದುಳಿದ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಮಾಡಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆಗಾಗಿ 2014 ರಿಂದ ಸರ್ಕಾರಕ್ಕೆ ನಿರಂತರ ಮನವಿ ಮಾಡಲಾಗುತ್ತಿದ್ದು, ಇಂದಿನವರೆಗೆ ಸರ್ಕಾರದಿಂದ ಯಾವುದೇ ಸಕರಾತ್ಮಕ ಕ್ರಮ ಆಗಿಲ್ಲ. ಡಾ. ಡಿ ಎಂ ನಂಜುಂಡಪ್ಪ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಐ.ಟಿ. ಪಾರ್ಕ್ ಸ್ಥಾಪಿಸಬೇಕೆಂದು ಸೂಚಿಸಿದ್ದಾರೆ. ಆದರೆ, ವರದಿ ಸಲ್ಲಿಸಿ 20ವರ್ಷ ಕಳೆದರೂ ಸರ್ಕಾರದಿಂದ ಡಾ. ಡಿ ಎಂ ನಂಜುಂಡಪ್ಪ ವರದಿ ಅನುಷ್ಠಾನಗೊಂಡಿಲ್ಲ. ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಜಿಲ್ಲೆಯಲ್ಲಿ ಸಾವಿರಾರು ಐ.ಟಿ. ಉದ್ಯೋಗಿಗಳು ಕೆಲಸಕ್ಕಾಗಿ ರಾಜಧಾನಿ ಬೆಂಗಳೂರು ಅಲ್ಲದೇ ನೆರೆ ರಾಜ್ಯದ ಹೈದರಬಾದ್‌ ಹಾಗೂ ಪುಣೆಯಲ್ಲಿ ಉದ್ಯೋಗಕ್ಕಾಗಿ ವಲಸೆ ಹೋಗುವುದು ಸಾಮಾನ್ಯವಾಗಿದೆ. ಬೀದರನಲ್ಲಿ ಐ.ಟಿ. ಉದ್ಯಮಿಗಳಿದ್ದರೂ ಐ.ಟಿ. ಪಾರ್ಕ್ ಇಲ್ಲದ ಕಾರಣ ಅವರೂ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

“ಇದರಿಂದಾಗಿ ಬೀದರ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತು ಬೀದರ ಜಿಲ್ಲೆಯಲ್ಲಿನ ಐ.ಟಿ. ಉದ್ಯೋಗಿಗಳ ಅನುಕೂಲಕ್ಕಾಗಿ ಹಾಗೂ ಉದ್ಯಮಿಗಳ ಅನುಕೂಲಕ್ಕಾಗಿ ಬೀದರ ಜಿಲ್ಲೆಯಲ್ಲಿ ವಿಜ್ಞಾನ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಪಡಿಸುವುದಕ್ಕಾಗಿ ಸರ್ಕಾರದಿಂದ ತಕ್ಷಣ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ, ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...