ಗುಬ್ಬಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗುರುಪ್ರಸಾದ್ ಆಯ್ಕೆ.

Date:

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಸಿ.ಗುರುಪ್ರಸಾದ್, ರಾಜ್ಯ ಪರಿಷತ್ ಸದಸ್ಯರಾಗಿ ಆರ್.ಸಿದ್ದೇಗೌಡ ಹಾಗೂ ಖಜಾಂಚಿಯಾಗಿ ರಮೇಶ್ ಚುನಾಯಿತರಾದರು.

ಸರ್ಕಾರಿ ನೌಕರರ ಸಂಘದ ಒಟ್ಟು 33 ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆದು ಪದಾಧಿಕಾರಿಗಳ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂರು ಸ್ಥಾನಕ್ಕೆ ಏಳು ಮಂದಿ ಕಣದಲ್ಲಿದ್ದರು. ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಎಚ್.ಸಿ.ಗುರುಪ್ರಸಾದ್ ಹಾಗೂ ಶಿಕ್ಷಣ ಇಲಾಖೆಯ ಆರ್.ಬೀರೇಂದ್ರ ನಾಮಪತ್ರ ಸಲ್ಲಿಸಿದರು. ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಆಹಾರ ಇಲಾಖೆ ಸಿದ್ದೇಗೌಡ, ಆರೋಗ್ಯ ಇಲಾಖೆಯ ಎನ್.ನಾಗರಾಜು ಹಾಗೂ ನ್ಯಾಯಾಂಗ ಇಲಾಖೆಯ ಪದ್ಮನಾಭ್ ಕಣದಲ್ಲಿದ್ದರು. ಖಜಾಂಚಿ ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ರಮೇಶ್ ಹಾಗೂ ಶಿಕ್ಷಣ ಇಲಾಖೆಯ ರಾಮಚಂದ್ರ ನೇರ ಪೈಪೋಟಿಯಾಗಿ ನಾಮಪತ್ರ ಸಲ್ಲಿಸಿದರು.

ನಿವೃತ್ತ ಡಿಡಿಪಿಐ ಎಚ್.ಕೆ.ನರಸಿಂಹಮೂರ್ತಿ ಚುನಾವಣಾಧಿಕಾರಿಗಳಾಗಿ ಎಲ್ಲಾ ಪ್ರಕ್ರಿಯೆ ನಡೆಸಿಕೊಟ್ಟರು. ಬೆಳಿಗ್ಗೆ 9 ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯಗೊಳಿಸಲಾಯಿತು. ನಂತರ ಮತ ಎಣಿಕೆ ಆರಂಭಿಸಲಾಯಿತು. ಒಟ್ಟು 33 ಮತಗಳ ಎಣಿಕೆಯಲ್ಲಿ 22 ಮತಗಳನ್ನು ಪಡೆದು ಎಚ್.ಸಿ.ಗುರುಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಬೀರೇಂದ್ರ 11 ಮತ ಪಡೆದು ಪರಾಭವಗೊಂಡರು. ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಇದ್ದ ಮೂವರು ಸ್ಪರ್ಧಿಗಳಲ್ಲಿ 16 ಮತ ಪಡೆದ ಸಿದ್ದೇಗೌಡ ಆಯ್ಕೆಯಾದರು. ಪ್ರತಿಸ್ಪರ್ಧಿಗಳಾಗಿದ್ದ ಪದ್ಮನಾಭ್ 11 ಹಾಗೂ ನಾಗರಾಜು 5 ಮತ ಒಡೆದು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನದಲ್ಲಿ ರಮೇಶ್ 19 ಮತ ಪಡೆದು ಆಯ್ಕೆಯಾದರೆ, ರಾಮಚಂದ್ರ 14 ಮತ ಸೋಲುಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಅಧ್ಯಕ್ಷ ಎಚ್.ಸಿ.ಗುರುಪ್ರಸಾದ್ ಸುದ್ದಿಗಾರರ ಜೊತೆ ಮಾತನಾಡಿ ಸರ್ಕಾರಿ ನೌಕರರ ಸಂಘಟನೆ ಬಲಪಡಿಸಿ ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ. ನನ್ನ ಆಯ್ಕೆಗೆ ಸಹಕರಿಸಿದ ನಾಗಭೂಷಣ್ ಹಾಗೂ ಕರುಣಾಕರ ಶೆಟ್ಟಿ ಅವರಿಗೆ ಕೃತಜ್ಞನಾಗಿದ್ದು ಸಂಘದ ಮೂಲಕ ತಾಲ್ಲೂಕಿನ ಸರ್ಕಾರಿ ನೌಕರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಪ್ರಾಮಾಣಿಕವಾಗಿ ನಡೆಸುತ್ತೇವೆ. ಸರ್ಕಾರಿ ಕೆಲಸ ಮಾಡುವಲ್ಲಿ ಹತ್ತು ಹಲವು ಸಮಸ್ಯೆ ಎದುರಿಸುವ ನೌಕರರ ಪರ ಕೂಡಾ ನಿಲ್ಲುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಆರ್.ಜಿ.ನಾಗಭೂಷಣ್, ಕರುಣಾಕರ ಶೆಟ್ಟಿ, ಮಾಜಿ ಖಜಾಂಚಿ ನಾಗರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ. ಬಿಂದುಮಾಧವ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...