ಮೆಡಿಕಲ್ ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಸಿಗಲಿಲ್ಲ ಸಿಎಂ ಆದೆ: ಸಿದ್ದರಾಮಯ್ಯ

Date:

  • ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಎಂ.ಆರ್.ಐ ಘಟಕ, ಸುಟ್ಟ ಗಾಯಗಳ ನವೀಕೃತ ವಾರ್ಡ್ ಉದ್ಘಾಟಿಸಿ ಅಭಿಮತ

ನನಗೂ ಏಪ್ರಾನ್ ಹಾಕೊಂಡು, ಸ್ಟೆಥಸ್ಕೋಪ್ ಕುತ್ತಿಗೆಗೆ ನೇತಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಕೆ ಆರ್‌ ಮೆಡಿಕಲ್ ಕಾಲೇಜಿನ ಕ್ಯಾಂಟೀನ್ ಗೆ ನಾನು ಹೈಸ್ಕೂಲ್ ಓದುವಾಗ ಬರುತ್ತಿದ್ದೆ. ಆಗೆಲ್ಲಾ ನನಗೆ ಈ ಆಸೆ ಬರುತ್ತಿತ್ತು. ಆದರೆ ನನಗೆ ಮೆಡಿಕಲ್ ಸೀಟೇ ಸಿಗಲಿಲ್ಲ. ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡರು.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಂ.ಆರ್.ಐ ಘಟಕ ಹಾಗೂ ಸುಟ್ಟ ಗಾಯಗಳ ನವೀಕೃತ ವಾರ್ಡ್ ಉದ್ಘಾಟಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

“ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ. ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು ಎನ್ನುವ ವೃತ್ತಿ ಘನತೆ ಪ್ರತಿಯೊಬ್ಬ ವೈದ್ಯರಲ್ಲೂ ಇರಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಕೆ ಆರ್ ಆಸ್ಪತ್ರೆಗೆ ಕಾಯಕಲ್ಪ ನೀಡುವ ಕಾರ್ಯ

“ಕೆ.ಆರ್.ಮೆಡಿಕಲ್ ಕಾಲೇಜು ಸಾವಿರಾರು ವೈದ್ಯರನ್ನು ಈ ದೇಶಕ್ಕೆ ಕೊಟ್ಟಿದೆ. ದೇಶದ ನಾನಾ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲೂ ಈ ಕಾಲೇಜಿನಲ್ಲಿ ಸಿದ್ದಗೊಂಡ ವೈದ್ಯರು ವೃತ್ತಿ ಘನತೆ ಹೆಚ್ಚಿಸುತ್ತಿದ್ದಾರೆ. ಕೆ.ಆರ್.ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಇದಕ್ಕೆ ಅಗತ್ಯವಾದ ಎಲ್ಲ ಸಹಕಾರ ಸರ್ಕಾರ ನೀಡಲಿದೆ” ಎಂದರು.

ಕೆ ಆರ್ ಆಸ್ಪತ್ರೆಗೆ ಕಾಯಕಲ್ಪ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಸ್ತುತ 1200 ಹಾಸಿಗೆಗಳಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬೇಡಿಕೆ ಇದೆ. ಇದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಉದ್ಘಾಟನೆಗೂ ಮುನ್ನ ಮಾಧ್ಯಮಗಳಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಜಿಲ್ಲೆಯ ಶಾಸಕರು, ವೈದ್ಯಕೀಯ ಶಿಕ್ಷಣ ಇಲಾಖೆಯ ಸುಜಾತಾ ರಾಥೋಡ್ ಸೇರಿ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...