ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

Date:

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ ಇಲ್ಲ. ಇನ್ನು ಶಾಲೆಗೆ ಕಾಂಪೌಂಡ್‌ ವ್ಯವಸ್ಥೆ ಇಲ್ಲದ ಕಾರಣ ಪ್ರಾಣಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ಶಿಥಿಲಗೊಂಡ ಕೋಣೆಯಲ್ಲಿ ಭಯದಲ್ಲೇ ಕುಳಿತು ಮಕ್ಕಳು ಪಾಠ ಕೇಳಬೇಕಾದ ಅನಿವಾರ್ಯ.

ಹೌದು, ಇದು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕು ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ.

ಪಟ್ಟಣ ಪಂಚಾಯಿತಿ ಬಳಿಯ ವಾರ್ಡ- 6 ರಲ್ಲಿರುವ ಈ ಶಾಲೆ 1ರಿಂದ 7ನೇ ತರಗತಿವರೆಗೆ ಇದೆ. ಒಟ್ಟು 65 ಮಕ್ಕಳು ಓದುತ್ತಿದ್ದಾರೆ. ಮುಖ್ಯಗುರು ಸೇರಿ ನಾಲ್ಕು ಶಿಕ್ಷಕರಿದ್ದಾರೆ. ಆದರೆ ಕೊಠಡಿಗಳ ಕೊರೆತೆಯಿಂದ ಇಲ್ಲಿನ ಮಕ್ಕಳು ಸುಸಜ್ಜಿತ ತರಗತಿ ಕೋಣೆ ಸೇರಿದಂತೆ ಅಗತ್ಯ ಮೂಲಸೌಕರ್ಯದಿಂದ ವಂಚಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ1964 ರಲ್ಲಿ ಪ್ರಾರಂಭವಾದ ಈ ಶಾಲೆ ನಿಡಗುಂದಿಯ ಹೃದಯ ಭಾಗದಲ್ಲಿತ್ತು. ಆದರೆ, 2003ರಲ್ಲಿ ಶಾಸಕರ ಅನುದಾನದಿಂದ ಬೇರೆ ಸರ್ಕಾರಿ ಜಾಗದಲ್ಲಿ ಎರಡು ಹೊಸ ಕಟ್ಟಡದೊಂದಿಗೆ ನಿರ್ಮಾಣ ಮಾಡಲಾಗಿತ್ತು. ಆರು ದಶಕ ಹಳೆಯ ಉರ್ದು ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅರ್ಧ ಶತಮಾನದ ಈ ಶಾಲೆ ಇಂದು ಮೂಲಭೂತ ಸೌಕರ್ಯಗಳಿಲ್ಲದೇ ಸೊರಗಿರುವುದು ಬೇಸರದ ಸಂಗತಿʼ ಎಂಬುದು ಇಲ್ಲಿಯ ಸ್ಥಳೀಯರ ಅಭಿಪ್ರಾಯ.

WhatsApp Image 2024 07 24 at 8.31.19 PM
ದುಸ್ಥಿತಿಯಲ್ಲಿರುವ ಶಾಲಾ ಶೌಚಾಲಯ

ʼಕಳೆದ 20 ವರ್ಷಗಳ ಹಿಂದೆ ನಿರ್ಮಿಸಿಲಾದ ಶಾಲಾ ಕಟ್ಟಡ ಕಳಪೆ ಕಾಮಗಾರಿಯಿಂದ ಬಹುತೇಕ ಶಿಥಿಲಾವಸ್ಥೆಗೆ ತಲುಪಿದೆ. ಮೂರು ಕೊಠಡಿಗಳು ಮಳೆ ಬಂದರೆ ಸೋರುತ್ತವೆ. ಎರಡು ಕೋಣೆ ಕಳಪೆ ಕಾಮಗಾರಿಯಿಂದ ಕುಸಿದು ಬಿದ್ದಿವೆ. ಒಂದು ಕೊಠಡಿಗೆ ಛಾವಣಿ ಇಲ್ಲದಿರುವುದರಿಂದ ತಗಡಿನ ಶೀಟ್ ಹಾಕಿ ನಡೆಸುತ್ತಿದ್ದೇವೆ. ಆದರೆ, ಮಳೆ ಬಂದರೆ ತರಗತಿ ನಡೆಸಲು ತೊಂದರೆಯಾಗುತ್ತಿದೆʼ ಎಂದು ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ಮಾಹಿತಿ ನೀಡಿದ್ದಾರೆ.

ಕುಡಿಯುವ ನೀರು, ಶೌಚಾಲಯ ಇಲ್ಲ

ಈ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿಲ್ಲ, ಹೀಗಾಗಿ ಮನೆಯಿಂದಲೇ ಬಾಟಲಿ ನೀರು ತರಬೇಕಾದ ಪರಿಸ್ಥಿತಿ ಇದೆ. ಇನ್ನು ಶೌಚಾಲಯ ಇಲ್ಲದ ಕಾರಣ ಮಕ್ಕಳ ಶೌಚಕ್ಕೆ ಬಯಲೇ ಗತಿಯಾಗಿದೆ. ಇಂತಹ ಮೂಲ ಸೌಕರ್ಯ ಕೊರತೆಯಿಂದ ಕೂಡಿದ ಶಾಲೆಯ ಬಗ್ಗೆ ಉತ್ಸಾಹ ತೋರದ ಪೋಷಕರು, ಪ್ರಸಕ್ತ ಸಾಲಿನಲ್ಲಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದ್ದಾರೆ.

WhatsApp Image 2024 07 24 at 8.30.06 PM
ಕೋಣೆ ಮೇಲ್ಛಾವಣಿಯ ಸಿಮೆಂಟ್‌ ಕಳಚಿ ಬಿದ್ದಿರುವುದು

ʼಶಾಲೆಗೆ ಅಗತ್ಯವಾದ ಮೂಲ ಸೌಕರ್ಯ ಕೊರತೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಇಲ್ಲಿಯವರೆಗೆ ಹೊಸ ಕೋಣೆ ಸೇರಿದಂತೆ ಯಾವುದೇ ಮೂಲ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿಲ್ಲʼ ಎಂದು ಶಾಲೆಯ ಮುಖ್ಯ ಗುರು ಅಬ್ದುಲ್ ರಝಾಕ್ ಹೇಳಿದರು.

ಕ್ಷೇತ್ರ ಶಿಕ್ಷಣದಿಕಾರಿ ವಸಂತ ರಾಠೋಡ್ ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ಶಾಲೆಯ ಸಮಸ್ಯೆಗಳ ಬಗ್ಗೆ  ನಮ್ಮ ಗಮನದಲ್ಲಿವೆ. ಜಿಲ್ಲಾ ಪಂಚಾಯತ್‌ ಸಿಇಒ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದಷ್ಟು ಬೇಗ ಶಾಲೆಯ ಸಮಸ್ಯೆಗಳು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶದಲ್ಲೇ ಅತಿಹೆಚ್ಚು ಪಿಂಚಣಿ ನೀಡುತ್ತಿರುವ ರಾಜ್ಯ ಕರ್ನಾಟಕ: ಕೃಷ್ಣ ಬೈರೇಗೌಡ

ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲೆಯ ಸಮಸ್ಯೆ ಬಗೆಹರಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವರೇ ಎಂದು ಕಾದು ನೋಡಬೇಕಿದೆ.

?s=150&d=mp&r=g
ರಮೇಶ್ ಹೊಸಮನಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...