ಹಂಪಿ | ದೇಶದ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿರುವುದು ಸಂತೋಷವಾಗಿದೆ: ಥಾವರ್ ಚಂದ್ ಗೆಹ್ಲೋಟ್

Date:

ಹಂಪಿ ತನ್ನ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದ್ದರೂ, ಹಂಪಿಯ ಪರಿಸರದಲ್ಲಿ ಸ್ಥಾಪಿಸಲಾದ ಕನ್ನಡ ವಿಶ್ವವಿದ್ಯಾಲಯವು ದೇಸಿ ಮಾದರಿಯ ಸಂಶೋಧನೆಗೆ ವಿಶಿಷ್ಟವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ ವೀರಭದ್ರಪ್ಪ(ಕುಂ.ವೀ) ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿ ಮಾತನಾಡಿದರು.

“ಹಂಪಿಯ ಐತಿಹಾಸಿಕ ಪರಿಸರದಲ್ಲಿ ದೇಶದ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡುವುದು ನನಗೆ ತುಂಬಾ ಸಂತೋಷವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಇತಿಹಾಸದ ಸಂಶೋಧನೆಯನ್ನು ತನ್ನ ಮೂಲ ಉದ್ದೇಶವಾಗಿ ಹೊಂದಿರುವ ಕನ್ನಡ ವಿಶ್ವವಿದ್ಯಾಲಯವು ಒಟ್ಟು 19 ಅಧ್ಯಯನ ವಿಭಾಗಗಳು, ವಿಸ್ತರಣಾ ಕೇಂದ್ರ ಮತ್ತು ವಿವಿಧ ಅಧ್ಯಯನ ಪೀಠಗಳ ಮೂಲಕ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಭಾಷಾ ವಿಭಾಗ, ಸಾಮಾಜಿಕ ವಿಜ್ಞಾನಗಳ ವಿಭಾಗ, ಲಲಿತಕಲೆಗಳ ವಿಭಾಗ ಮತ್ತು ವಿಜ್ಞಾನಗಳ ಬೋಧಕವರ್ಗಗಳನ್ನು ಹೊಂದಿದೆ. ಕನ್ನಡ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿ ಡಾ. ಚಂದ್ರಶೇಖರ ಕಂಬಾರರು ವಿಶ್ವವಿದ್ಯಾಲಯದ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕಿದ್ದಾರೆ. ವಿಶ್ವವಿದ್ಯಾಲಯದ ಹಸ್ತಪ್ರತಿ ಭಂಡಾರವು ಸುಮಾರು ಐದು ಸಾವಿರ ಅಪರೂಪದ ಹಸ್ತಪ್ರತಿಗಳು, ದೃಶ್ಯಕಲಾ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ರಚಿಸಿ, ಪ್ರದರ್ಶಿಸಿದ ಕಲಾಕೃತಿಗಳು ಸೇರಿದಂತೆ ಹಲವು ಸಂಗ್ರಹಗಳನ್ನು ಹೊಂದಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಂಪಿ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯ ಮಾದರಿಯಲ್ಲಿ ನಿರ್ಮಿಸಲಾದ ವಿಶ್ವವಿದ್ಯಾಲಯದ ಅನೇಕ ಕಟ್ಟಡಗಳು ಇತಿಹಾಸವನ್ನು ನೆನಪಿಸುತ್ತವೆ. ದೇಶದ ಶಿಲ್ಪಕಲಾ ವೈಭವವನ್ನು ಮರುಸೃಷ್ಟಿಸುವ ಶಿಲ್ಪಕಲೆ, ಗಿರಿಸೀಮೆ ಆವರಣ, ಬುಡಕಟ್ಟು ಸಂಸ್ಕೃತಿಯನ್ನು ಚಿತ್ರಿಸುತ್ತದೆ. ವಿಶ್ವವಿದ್ಯಾಲಯದ ವಸ್ತುಸಂಗ್ರಹಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾಗಿದೆ” ಎಂದರು.

“ಸಾಂಪ್ರದಾಯಿಕ ವಿಶ್ವವಿದ್ಯಾಲಯದ ಘಟಿಕೋತ್ಸವಗಳಿಗಿಂತ ಭಿನ್ನವಾಗಿ, ಕನ್ನಡ ವಿಶ್ವವಿದ್ಯಾಲಯದ ‘ನುಡಿಹಬ್ಬ’ ನಮ್ಮ ದೇಸಿ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಇದು ನುಡಿಹಬ್ಬಾದ ವಿಶಿಷ್ಟ ಸಂಪ್ರದಾಯ. ಇಲ್ಲಿ ಅವರನ್ನು ಬಿಳಿ ಉಡುಗೆಯಲ್ಲಿ ಸಂಗೀತ ವಾದ್ಯಗಳೊಂದಿಗೆ ವೇದಿಕೆಗೆ ಮೆರವಣಿಗೆ ಮಾಡುವುದು ನಿಜವಾಗಿಯೂ ನನಗೆ ಮರೆಯಲಾಗದ ಅನುಭವವಾಗಿದೆ. ಈ ವಿಶಿಷ್ಟ ಕ್ಷಣವನ್ನು ಸೃಷ್ಟಿಸಿದ ಮತ್ತು ಪೋಷಿಸಿದ ಎಲ್ಲರಿಗೂ ಅಭಿನಂದನೆಗಳು” ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶೈಕ್ಷಣಿಕ ಹರಿಕಾರ ಟಿ.ವಿ. ವಸಂತರಾಜ ಅರಸ್ ನೆನಪಿನಾರ್ಥ ನುಡಿ ನಮನ

ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ನಾಡೋಜ ಗೌರವ ಪದವಿ ಪಡೆದ ಸಾಧಕರಿಗೆ, ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿಸದರು.

ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ ಎಚ್, ಹಂಪಿ ವಿವಿ ಕುಲಪತಿ ಡಾ. ಡಿ ವಿ ಪರಶಿವಮೂರ್ತಿ ಸೇರಿದಂತೆ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...