ಬೀದರ್‌ | ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ : ನಾಗೇಶ ಸ್ವಾಮಿ

Date:

ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಪರ್ಧಾ ಸಂಕಲ್ಪ ಅಕಾಡೆಮಿ ಮುಖ್ಯಸ್ಥ ನಾಗೇಶ ಸ್ವಾಮಿ ಮಸ್ಕಲ್‌ ಹೇಳಿದರು.

ಬೀದರ್ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ʼಶಿಕ್ಷಕರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜತೆಗೆ ವಿನಯಶೀಲತೆ, ಆತ್ಮವಿಶ್ವಾಸ, ಸಂಸ್ಕಾರ ಹಾಗೂ ಗುರು-ಹಿರಿಯರನ್ನು ಗೌರವಿಸುವುದು ಕಲಿಸಬೇಕು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕ ಡಾ.ಸಂಗಮೇಶ ಹಿರೇಮಠ ಮಾತನಾಡಿ, ʼಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರತಿಯೊಬ್ಬರ ಜೀವನದಲ್ಲಿ ಗುರು ಮತ್ತು ಗುರಿ ಇರಲೇಬೇಕು. ವಿದ್ಯಾರ್ಥಿಗಳ ಯಶಸ್ವಿ ಬದುಕಿಗೆ ಶಿಕ್ಷಕರ ಬೋಧನೆ ಪರಿಣಾಮಕಾರಿಯಾಗಬಲ್ಲದುʼ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ ಹಲಬರ್ಗಾ ರಾಚೋಟೇಶ್ವರ ವಿರಕ್ತ ಮಠದ ಹಾವಲಿಂಗೇಶ್ವರ ಶಿವಾಚಾರ್ಯ ಮಾತನಾಡಿ, ʼಸಮಾಜದಲ್ಲಿ ಎಲ್ಲ ವೃತ್ತಿಗಿಂತ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು, ಶಿಕ್ಷಕ ಸಮಾಜದ ನಿರ್ಮಾಪಕ ಇದ್ದಂತೆ, ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯʼ ಎಂದು ನುಡಿದರು.

ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಪಂಡಿತರಾವ ಚಿದ್ರಿ ಮಾತನಾಡಿ, ʼಮಕ್ಕಳ ಭವಿಷ್ಯ ರೂಪಿಸುವರು ಶಿಕ್ಷಕರೇ ರೂವಾರಿಗಳು. ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಕರ ಕರ್ತವ್ಯ ಮಹತ್ವದ್ದು, ಜೀವನದಲ್ಲಿ ಉತ್ತಮ ರಾಜಕಾರಣಿ ಆಗುವುದು ಸುಲಭವಿದೆ. ಆದರೆ ಆದರ್ಶ ಶಿಕ್ಷಕರಾಗುವುದು ತೀರ ಸರಳವಲ್ಲ. ನಾವೆಲ್ಲರೂ ಶಿಕ್ಷಕರನ್ನು ಗೌರವಿಸಬೇಕುʼ ಎಂದು ಸಲಹೆ ನೀಡಿದರು.

WhatsApp Image 2024 10 01 at 7.49.04 PM
ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ ಮಾತನಾಡಿ, ʼದೇಶದಲ್ಲಿ ಮಹೋನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಗುರುಗಳೇ ಆಗಿರುತ್ತಾರೆ. ಉತ್ತಮ ಶಿಕ್ಷಕನಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆʼ ಎಂದು ಅಭಿಪ್ರಾಯಪಟ್ಟರು.

ಲಾಡಗೇರಿ ಹಿರೇಮಠದ ಗಂಗಾಧರ ಶಿವಾಚಾರ್ಯರು ಶಿಕ್ಷಕರಿಗೆ ʼಆದರ್ಶ ಶಿಕ್ಷಕ ಪ್ರಶಸ್ತಿʼ ಪ್ರದಾನ ಮಾಡಿದರು. ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ಬೆಲ್ದಾರ, ಉದ್ಯಮಿ ರಾಜಶೇಖರ ಚಂದಾ, ಬಾಬುರಾವ ದಾನಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೃದಯಾಘಾತ : ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅನಂತ ಕುಲಕರ್ಣಿ, ಪ್ರಶಾಂತ ರಾಗಾ, ಓಂಪ್ರಕಾಶ ದಡ್ಡೆ, ದತ್ತಾತ್ರಿ ಸಂಪಾತೆ, ಬಸಯ್ಯಸ್ವಾಮಿ, ಬಳವಂತರಾವ ರಾಠೋಡ್, ರವಿ ಕುಮನೂರ, ವೈಜಿನಾಥ ಸಾಳೆ, ಶಿವರಾಜ್ ಜುಲಾಂಡೆ, ಮಲ್ಲಿಕಾರ್ಜುನ್ ಹಿಪ್ಪಳಗಾವೆ, ಸೂರ್ಯಕಾಂತ ಮಡಿವಾಳ, ಹನುಮಂತರಾವ , ಶಿವರಾಜ್ ಅಗ್ರೆ, ರಾಮರಾವ್ ಪಾಂಡ್ರೆ, ಗಣಪತಿ ಸಿದ್ದೇಶ್ವರ, ಶಶಿಕಾಂತ್ ಜೋಶಿ, ಮಲ್ಲಿಕಾರ್ಜುನ್ ಸಿಂದಗೇರಾ , ರಾಮಲಿಂಗ, ಲಕ್ಷ್ಮಿಬಾಯಿ ಬಿರಾದರ್, ಅಂಬಿಕಾ ಹಳ್ಳಿಖೇಡೆ, ಪೂಜಾ, ರಾಯಣ್ಣೂರ್, ರಾಖಿ, ಬಸವರಾಜ ಕಾಡೆ, ವೀರಭದ್ರಯ್ಯ ಸ್ವಾಮಿ, ವಿಶ್ವನಾಥ ಸ್ವಾಮಿ, ಮನೋಹರ ಸಿಂಗ್ ಪಾಟೀಲ್, ಮಾರುತಿ ಬಿರಾದಾರ, ವಿಜಯಕುಮಾರ ಪಾಟೀಲ್, ಗೋವಿಂದ ಪೂಜಾರಿ, ಹಿರೇಮಠ ಶಿವಕುಮಾರ, ಸಿದ್ರಾಮಯ್ಯ ಸ್ವಾಮಿ, ಮಹದೇವ ಮಠಪತಿ, ಅಲ್ಪಾ, ಅನಿತಾ, ಜಗದೇವಿ ಭೋಸ್ಲೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...