ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

Date:

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಯಾರು ಅಪರಾಧಿ ಇದ್ದಾರೋ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಆರ್‌.ಪಿ ವೆಂಕಟೇಶ ಮೂರ್ತಿ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಪ್ರಕರಣ ಗಂಭೀರವಾದದ್ದು. ಒಬ್ಬ ಅಸಹಾಯ ಮಹಿಳೆ ಇಂತಹ ಕೃತ್ಯವನ್ನ ನಿರಾಕರಿಸಿದರೂ, ಆಕೆಯನ್ನ ಬಲವಂತವಾಗಿ ತನ್ನ ಕಾಮವಾಂಚೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಆತನನ್ನ ಬಂಧಿಸಬೇಕು. ಪ್ರಕರಣದಲ್ಲಿ ಮೊದಲ ಸಾಕ್ಷ್ಯಯಾಗಿ ಬಿಜೆಪಿಯ ದೇವರಾಜೇಗೌಡ ಅವರನ್ನು ಪರಿಗಣಿಸಬೇಕು” ಎಂದು ಹೇಳಿದರು.

“’ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದೆ. ಈ ವ್ಯಕ್ತಿಯ ಹಲವಾರು ವಿಡಿಯೋಗಳಿವೆ, ಆತನನ್ನ ಮೈತ್ರಿ ಅಭ್ಯರ್ಥಿ ಮಾಡಬೇಡಿ ಅಂತ ಹೇಳಿದ್ದೆ. ಆದರೂ, ಮೈತ್ರಿ ಮಾಡಿಕೊಂಡಿದ್ದಾರೆ’ ಅಂತ ದೇವರಾಜೇಗೌಡ ಹೇಳಿದ್ದರು. ಆತನ ಹೇಳಿರುವುದು ನಿಜವಾ? 2900ಕ್ಕೂ ಹೆಚ್ಚು ವಿಡಿಯೋಗಳಿವೆ ಎಂದು ದೇವರಾಜೇಗೌಡ ಹೇಳಿದ್ದಾರೆ. ಅದರಲ್ಲಿ, ಒಂದು ವಿಡಿಯೋ ಗಮನಿಸಿದರೆ, ಅದು ಅತ್ಯಾಚಾರ ಎಂಬುದು ಸ್ಪಷ್ಟವಾಗಿದೆ. ಆಕೆಯ ಸಮ್ಮತಿ ಇಲ್ಲದಿದ್ದರೂ, ಆಕೆಯ ಮೇಲೆ ದೌರ್ಜನ್ಯ ಎಸಲಾಗಿದೆ” ಎಂದು ವೆಂಕಟೇಶ ಮೂರ್ತಿ ಅರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಹಳ ಜನ ಪ್ರಕರಣದ ಬಗ್ಗೆ ಮಾತನಾಡುತ್ತಿಲ್ಲ. ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರನ್ನು ನಾನು ಹೇಳುತ್ತಿಲ್ಲ. ನನ್ನನ್ನ ಕೇಳೋರು ಯಾರು ಇಲ್ಲ ಎಂಬ ಅಹಃ ಇಂತಹ ಕೃತ್ಯಕ್ಕೆ ಕಾರಣ. ಆ ಮಹಿಳೆಯರ ಕುಟುಂಬವು ಈ ವಿಡಿಯೋಗಳನ್ನು ನೋಡಿದ್ರೆ, ಆ ಮಹಿಳೆಯರು ಮತ್ತು ಕುಟುಂಬದ ಪರಿಸ್ಥಿತಿ ಏನಾಗಬೇಕು” ಎಂದರು.

“ಕೆಲವರು ಸಮ್ಮತಿಯಿಂದಲೇ ಕೃತ್ಯದಲ್ಲಿ ಪಾಲ್ಗೊಂಡಿರಬಹುದು. ಆದರೆ, ಆ ಕೃತ್ಯವನ್ನ ತಾನೇ ವಿಡಿಯೋ ಮಾಡಿಕೊಂಡಿರುವುದು ವಿಕೃತಿ. ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದ ಆತ ವಿಡಿಯೋ ಮಾಡಿಕೊಂಡಿದ್ದಾನಾ” ಎಂದು ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...