ಹಾಸನಾಂಬೆ ಜಾತ್ರಾ ಮಹೋತ್ಸವ | ಜಿಲ್ಲಾಡಳಿತದ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

Date:

ಹಾಸನದ ಶಕ್ತಿ ದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಮೊದಲ ದಿನದಿಂದಲೂ ಗೊಂದಲದ ಗೂಡಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಶಾಸಕರ ಯಾವುದೇ ಮಾತನ್ನು ಗಣನೆಗೆ ತೆಗೆದುಕೊಳ್ಳದೆ ತಮ್ಮದೇ ಅಧಿಕಾರವನ್ನು ನಡೆಸುತ್ತಿದ್ದಾರೆಂದು ಆರೋಪಿಸಿ ಶಾಸಕ ಸ್ವರೂಪ್ ಪ್ರಕಾಶ್ ಅವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು.

ಇದೀಗ ಕಳಸ ಪ್ರತಿಷ್ಠಾಪನೆಗೆ ಕರೆಯದೆ ಇದ್ದಿದ್ದಕ್ಕೆ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, “ನನ್ನನ್ನು ಎರಡು ಲಕ್ಷ ಮಂದಿ ಆಯ್ಕೆ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡಬೇಕು. ಎಷ್ಟೋ ಮಂದಿ ಡಿಸಿಗಳು ಬಂದಿದ್ದಾರೆ, ಹೋಗಿದ್ದಾರೆ. ಈ ರೀತಿ ಯಾರೂ ನಡೆದುಕೊಂಡಿರಲಿಲ್ಲ” ಎಂದು ಹಾಸನಾಂಬೆ ದೇವಾಲಯದ ಎದುರು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವಾಲಯದ ನೂತನ ಕಳಸ ಪ್ರತಿಷ್ಠಾಪನೆಗೂ ನನ್ನನ್ನು ಆಹ್ವಾನಿಸಿಲ್ಲ. ದೇವಾಲಯದಲ್ಲಿ ಜಿಲ್ಲಾಧಿಕಾರಿ ಪತಿಯೊಂದಿಗೆ ಹೋಮ ಹವನ ಮಾಡಿದ್ದು, ತಮ್ಮ ಸಂಬಂಧಿಕರನ್ನು ಕರೆದು ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮ ಮಾಡುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು

“ಹೆಲಿಟೂರಿಸಂ ಉದ್ಘಾಟನೆ, ಪ್ಯಾರಾ ಸೈಲಿಂಗ್ ಹಾಗೂ ಇತರೆ ಕಾರ್ಯಕ್ರಮಗಳಿಗೂ ನನ್ನನ್ನು ಕರೆದಿಲ್ಲ. ಬರಗಾಲದಂತ ಪರಿಸ್ಥಿತಿಯಲ್ಲಿ ಹೆಲಿಟೂರಿಸಂಗೆ ಒಬ್ಬರಿಗೆ ₹4,300 ದರ ನಿಗದಿ ಮಾಡಿದ್ದಾರೆ. ಇಷ್ಟೊಂದು ಹಣ ಏಕೆ ನಿಗದಿ ಮಾಡಿದ್ದೀರೆಂದು ಪ್ರಶ್ನಿಸಿದರೆ, ಜಿಲ್ಲಾಧಿಕಾರಿ ಹಾರಿಕೆಯ ಉತ್ತರ ನೀಡುತ್ತಾರೆ” ಎಂದು ಆರೋಪಿಸಿದರು.

“ಗಂಡ ಹೆಂಡತಿ ಮಾತ್ರ ಹೋಮ ಹವನ ಮಾಡಿಸಿದ್ದೀರಿ. ಬೇರೆಯವರು ಲೆಕ್ಕಕ್ಕೆ ಇಲ್ಲವಾ. ನಾನೇನು ದನ ಕಾಯಲು ಇದ್ದೀನಾ. ನಿಮಗೊಂದು ನ್ಯಾಯ, ಬೇರೆಯವರಿಗೆ ಒಂದು ನ್ಯಾಯಾನಾ” ಎಂದು ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಾತಿ ಗಣತಿಗೆ ವಿರೋಧ ವ್ಯಕ್ತ ಪಡಿಸಿರುವುದು ಖಂಡನೀಯ: ಸಿದ್ದು ಬಿ.ಎಸ್ ಸೂರನಹಳ್ಳಿ

ಪ್ರತಿಭಟನೆ ವೇಳೆ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಯನ್ನು ಸ್ವರೂಪ್‌ ಪ್ರಕಾಶ್ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದು, “ಬರಗಾಲದಂತಹ ಸಂದರ್ಭದಲ್ಲಿ ಕಚೇರಿಯಲ್ಲಿ ಇದ್ದು, ಜನರ ಸಮಸ್ಯೆ ಆಲಿಸಬೇಕಾದ ನೀವು ಕುಟುಂಬದ ಸದಸ್ಯರೊಂದಿಗೆ ಹೋಮ–ಹವನ ಕಾರ್ಯಕ್ರಮ ಮಾಡಿರುವುದು ಖಂಡನಾರ್ಹ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...