ಹಾಸನ | 19 ಮಂದಿ ಕಾರ್ಮಿಕರ ರಕ್ಷಣೆ; ಕೂಲಿ ಕೊಡದೆ ದುಡಿಸಿಕೊಳ್ಳುತ್ತಿದ್ದವರ ಬಂಧನ

Date:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಅಮಾನವೀಯ ಕೃತ್ಯ ಎಸಗಿರುವ ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವಿರುದ್ಧ ಬಾಣಾವರ ಠಾಣೆಯಲ್ಲಿ ʼಜೀತ ಪದ್ಧತಿ ನಿರ್ಮೂಲನೆ ಕಾಯ್ದೆ’ಯಡಿ ಪ್ರಕರಣ ದಾಖಲಿಸಲಾಗಿದೆ. 

ಮೇ 26ರಂದು ಉಪ ವಿಭಾಗಾಧಿಕಾರಿ ಕೃಪಾಲಿನಿ, ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ, ಕಂದಾಯ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಬಾಣಾವರ ಪೊಲೀಸರು, ಜಮೀನಿನಲ್ಲಿ ಶುಂಠಿ ಕೀಳುತ್ತಿದ್ದ ಕಾರ್ಮಿಕರನ್ನು ವಿಚಾರಣೆಗೆ ಒಳಪಡಿಸಿದ್ದರು. ಆಗ, “ಕೂಲಿ ಕೊಡದೇ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ” ಎಂದು ಕಾರ್ಮಿಕರು ಅವಲತ್ತುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸೀಕೆರೆಯ ಚಿತ್ರ ಸ್ಟುಡಿಯೊ ಮಾಲೀಕ ಮುನೇಶ್ ಮತ್ತು ಅನಿಲ್ ಎಂಬುವರನ್ನು ಬಂಧಿಸಲಾಗಿದೆ. ಮುನೇಶ್ ಈ ಹಿಂದೆಯೂ ಇಂಥದ್ದೇ ಪ್ರಕರಣದಲ್ಲಿ ಭಾಗಿಯಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ನಂತರವೂ ಇದೇ ಕೆಲಸಕ್ಕೆ ಇಳಿದಿದ್ದಾನೆ” ಎಂದು ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

ಗದಗ, ಬಳ್ಳಾರಿ, ಕಲಬುರಗಿ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಮಧುಗಿರಿ ಸೇರಿದಂತೆ ಹತ್ತಾರು ಭಾಗಗಳಿಂದ ಅರಸೀಕೆರೆಗೆ ರೈಲು ನಿಲ್ದಾಣಕ್ಕೆ ಬಂದಿದ್ದ 19 ಮಂದಿ ಕಾರ್ಮಿಕರನ್ನು ಭೇಟಿ ಮಾಡಿದ್ದ ಮುನೇಶ್, ಅನಿಲ್ ಎಂಬ ವ್ಯಕ್ತಿಯ ಸಹಾಯದಿಂದ ತಮ್ಮ ಜಮೀನಿಗೆ ಕರೆದುಕೊಂಡು ಬಂದಿದ್ದ. ದಿನಕ್ಕೆ ಎರಡು ಹೊತ್ತಿನ ಊಟ ಹಾಗೂ ಮದ್ಯ ನೀಡುತ್ತಿದ್ದ. ಆದರೆ ಸಂಬಳ ಕೊಡುತ್ತಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಎರಡು ತಿಂಗಳಿಂದ ಕಾರ್ಮಿಕರನ್ನು ಶೆಡ್‌ನಲ್ಲಿ ಇರಿಸಿಕೊಂಡಿದ್ದು, ಹೊರಗೆ ಹೋಗದಂತೆ ಬೇಲಿ ನಿರ್ಮಿಸಿದ್ದ. ನಿತ್ಯ ವಾಹನಗಳಲ್ಲಿ ಚನ್ನರಾಯಪಟ್ಟಣ, ಬಾಣಾವರ, ಅಣತಿ, ಕೆಂಬಾಳು ಸೇರಿದಂತೆ ಹಲವೆಡೆ ಕರೆದೊಯ್ದು  ಶುಂಠಿ ಕೀಳುವ ಕೆಲಸ ಮಾಡಿಸುತ್ತಿದ್ದ. ಸಂಜೆ ಶೆಡ್‌ಗೆ ತಂದು ಬಿಡುತ್ತಿದ್ದ. ಈ ವಿಷಯವನ್ನು ತಿಳಿಸಲು ಕಾರ್ಮಿಕರ ಬಳಿ ಮೊಬೈಲ್‌ ಫೋನ್‌ ಕೂಡ ಇರಲಿಲ್ಲ. ಕಾರ್ಮಿಕರ ಬಳಿ ಇದ್ದ ಮೊಬೈಲ್‌ ಫೋನನ್ನು ಕಿತ್ತುಕೊಂಡಿದ್ದ. ಕೆಲಸ ಮಾಡುತ್ತಿದ್ದ ಹೊಲದಲ್ಲಿನ ಕೆಲವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

“ಕೆಲಸಕ್ಕೆ ಬಳಸುತ್ತಿದ್ದ ಎರಡು ಮಚ್ಚು ಮತ್ತು 10 ಪ್ಲಾಸ್ಟಿಕ್ ಬಕೆಟ್, 4 ಕಬ್ಬಿಣದ ಕುಂಟೇಣಿ ಹಾಗೂ ಒಂದು ವಾಹನವನ್ನು ವಶಕ್ಕೆ ಪಡೆಯಲಾಗಿದೆ” ಎಂದು ಹರಿರಾಂ ಶಂಕರ್ ತಿಳಿಸಿದ್ದಾರೆ.

“ಮುನೇಶ್ ವಿರುದ್ಧ ಈ ಹಿಂದೆಯೂ ಅರಸೀಕೆರೆ ಗ್ರಾಮಾಂತರ ಠಾಣೆ ಹಾಗೂ ದುದ್ದ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಆತನ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...