ಹಾಸನ | ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆರೋಪಿಗಳ ಗಡಿಪಾರು ಮಾಡುವಂತೆ ಮಾದಿಗ ದಂಡೋರ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡಿ, ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹಾಸನದ ಮಾದಿಗ ದಂಡೋರದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ ಆರ್ ವಿಜಯಕುಮಾರ್ ಮಾತನಾಡಿ, “ಶತಮಾನದಿಂದ ಸಂಕೋಲೆಯಲ್ಲಿ ನೊಂದಿರುವ ದಲಿತರ ಮೇಲೆ ಅಲ್ಲಿನ ಪಾಳೆಗಾರಿ ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವ ಗೂಂಡಾಡಗಳು 4 ಮಂದಿ ದಲಿತರ ಮೇಲೆ ಧಾರುಣವಾಗಿ ಹಲ್ಲೆ ಮಾಡಿರುವುದನ್ನು ದಲಿತ ಮತ್ತು ಜನಪರ ಚಳುವಳಿಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ” ಎಂದರು.

“ಮುಖ್ಯಮಂತ್ರಿಗಳೇ ಈ ಸರ್ಕಾರದಲ್ಲಿ ನೀವು ಜನಪ್ರಿಯ ಮತ್ತು ಶೋಷಿತ ಸಮುದಾಯಗಳ ರಕ್ಷಣೆ ಮಾಡುವ ಮುಖ್ಯಮಂತ್ರಿಯೆಂದು ಬಲವಾಗಿ ಹೇಳುಕೊಳ್ಳುತ್ತೀರಿ! ಇಂತಹ ನಾಡಿನಲ್ಲಿ, ಇಟ್ಟಂಗಿ ಭಟ್ಟಯ ಘಟನೆ ಅಮಾನವಿಯ. ನಿಮ್ಮ ಸರ್ಕಾರದ ಅವಧಿಯಲ್ಲಿ ದಲಿತರ ಬದುಕು ದಿನದಿಂದ ದಿನಕ್ಕೆ ಅಯೋಮಯವಾಗುತ್ತಿರುವುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಇಟ್ಟಿಗೆ ಕೆಲಸಕ್ಕೆ ಒಂದು ದಿನ ತಡವಾಗಿ ಬಂದಂತಹ ದಲಿತ ಸಮುದಾಯದ ಬಡವರ ಮೇಲೆ ಪಾಳೆಗಾರಿಕೆ ಹಿತಾಸಕ್ತಿ ಹೊಂದಿರುವ ದುರುಳರು ಮನಸ್ಸೋಇಚ್ಚೆ ಹಲ್ಲೆ ಮಾಡಿರುವ ದೃಶ್ಯ ಬಡವರ ಮೇಲೆ ಸರ್ಕಾರಕ್ಕೆ ಹಿತಾಸಕ್ತಿ ಇಲ್ಲವೆಂಬುದನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತರಿಗೆ ಕೂಡಲೇ ತಲಾ 10 ಲಕ್ಷ ಪರಿಹಾರ ನೀಡಬೇಕು. ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವರು ಕೂಡಲೇ ಸಂತ್ರಸ್ತರನ್ನು ಭೇಟಿ ಮಾಡಬೇಕು. ಕಾರ್ಮಿಕ ಇಲಾಖೆ ಆಯುಕ್ತರನ್ನು ಅಮಾನತು ಮಾಡಬೇಕು ಮತ್ತು ಪರಿಸರ ಇಲಾಖೆಯ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಗೊಟ್ರುವಳ್ಳಿ ಗ್ರಾಮದ ಖಾತೆ ಸಂಖ್ಯೆ 97/112ರ ನಿವೇಶನ ಮರುಸರ್ವೇಗೆ ಜಿಲ್ಲಾಧಿಕಾರಿ ಆದೇಶ

“ಆರೋಪಿಗಳನ್ನು ಕೂಡಲೇ ಜಿಲ್ಲೆಯಿಂದ ಗಡಿಪಾರು ಮಾಡಿ, ಅವರ ಆಸ್ತಿ ಪಾಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ನ್ಯಾಯಾಂಗ ನಿಷ್ಪಕ್ಷಪಾತ ತನಿಖೆ ನಡೆಯುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿ ಇದಕ್ಕೆ ಸಂಬಧಿಸಿದಂತೆ ಬೆಂಗಾವಲಾಗಿ ನಿಂತಿರುವ ರಾಜಕಾರಣಿಗಳ ಮೇಲೂ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಅವರಿಗೆ ನ್ಯಾಯಾಂಗ ಗಲ್ಲುಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ಮತ್ತು ಜನಪರ ಚಳುವಳಿಗಳ ಮುಖಂಡರುಗಳಾದ ಧರ್ಮೇಶ್, ವಿಜಯ್ ಕುಮಾರ್, ಹೆಚ್ ಕೆ ಸಂದೇಶ್, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್, ಸತೀಶ್, ಅಂಬುಗ ಮಲ್ಲೇಶ್, ರಾಜೇಶ್, ಸುನೀಲ್, ಪ್ರವೀಣ್, ಕೆ ವೈ ಜಗದೀಶ್, ಬೈರೇಶ್ ಹಳೇಬೀಡು ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...