ಹಾಸನ | ಶ್ರವಣಬೆಳಗೊಳದ ಜೈನ ಮಠಕ್ಕೆ ಆಗಮಶಾಸ್ತ್ರಿ ಇಂದ್ರಜೈನ್‌ ಉತ್ತರಾಧಿಕಾರಿ

Date:

  • ಇಂದ್ರಜೈನ್‌ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು
  • ಜೈನ ಮಠದ ಸ್ವಾಮೀಜಿಗಳು, ಟ್ರಸ್ಟಿಗಳು ಹಾಗೂ ಮುಖಂಡರಿಂದ ಆಯ್ಕೆ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿಯಾಗಿ ಆಗಮಶಾಸ್ತ್ರಿ ಇಂದ್ರಜೈನ್‌ ನೇಮಕವಾಗಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆ ಸಾಗರದವಾರದ ಇಂದ್ರಜೈನ್, 22 ವರ್ಷ ಹರೆಯದವರಾಗಿದ್ದು, ಬಿಕಾಂ ಪದವಿ ಪಡೆದಿದ್ದಾರೆ.

ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಸಾವನ್ನಪ್ಪಿದ್ದರಿಂದ ಶ್ರವಣಬೆಳಗೊಳ ಜೈನ ಮಠದ ಉತ್ತರಾಧಿಕಾರಿ ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಇಂದ್ರಜೈನ್ ಅವರನ್ನು ನೇಮಕ ಮಾಡಲಾಗಿದೆ.

ಚಾರುಕೀರ್ತಿ ಸ್ವಾಮೀಜಿಯ ಆರೋಗ್ಯ ಹದಗೆಡುತ್ತಿದ್ದ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆಯೇ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿ ನೇಮಕದ ಕುರಿತು ಚರ್ಚೆ ನಡೆಸಲಾಗಿತ್ತು. ಮಠಕ್ಕೆ ಇಂದ್ರ ವಂಶಸ್ಥರೇ ಸ್ವಾಮೀಜಿಯರಾಗುವ ಪರಂಪರೆಯಿರುವುದರಿಂದ ಆ ಬಗ್ಗೆ ಹಲವು ಜೈನಮಠದ ಸ್ವಾಮೀಜಿಯವರು, ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಟ್ರಸ್ಟಿಗಳು, ಜೈನ ಸಮುದಾಯದ ಮುಖಂಡರು ಸೇರಿ ಚರ್ಚಿಸಿದ್ದರು. ಎಲ್ಲರೂ ಒಮ್ಮತದಿಂದ ಆಗಮಶಾಸ್ತ್ರಿ ಇಂದ್ರಜೈನ್‌ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಮಶಾಸ್ತ್ರಿ ಇಂದ್ರಜೈನ್‌ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡ ನಂತರ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು. ಕಳೆದ 20 ದಿನಗಳಿಂದಲೂ ಶ್ರವಣಬೆಳಗೊಳ ಮಠದಲ್ಲಿ ಆಗಮಶಾಸ್ತ್ರಿ ಇಂದ್ರಜೈನ್‌ ಅವರಿಗೆ ಮಠದ ಪರಂಪರೆ, ಆಚಾರ–ವಿಚಾರ, ಮಠದ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...