ಹಾಸನ | ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ; ನ.15ರಂದು ಕೊನೆಯ ದಿನ

Date:

ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹುದ್ದೆಗಳ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಮಕ್ಕಳ ತಜ್ಞರು, ಫಿಜಿಷಿಯನ್, ಸೈಕಿಯಾಟ್ರಿಸ್ಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತ್ರಜ್ಞರು, ಶುಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್, ಬ್ಲಾಕ್ ಎಪಿಡವಾಲಾಜಿಸ್ಟ್, ಕೌನ್ಸೆಲರ್, ಡಯಟ್ ಕೌನ್ಸೆಲರ್, ಜಿಲ್ಲಾ ಸಂಯೋಜಕರು, ಲ್ಯಾಬ್ ಟೆಕ್ನಿಷಿಯನ್ಸ್, ಪ್ರೋಗ್ರಾಮ್ ಮ್ಯಾನೇಜರ್, ಟಿಬಿಹೆಜ್‌ವಿ ಮತ್ತು ಫಿಜಿಯೋಥೆರಪಿಸ್ಟ್ ಸಂಖ್ಯೆಗೆ ಅನುಗುಣವಾಗಿ ಅನ್ವಯಿಸುವ ರೋಸ್ಟರ್ ಕಂ ಮೆರಿಟ್ ಸಿಸ್ಟಮ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪ್ರಯುಕ್ತ ಸದರಿ ಹುದ್ದೆಗಳ ವಿದ್ಯಾರ್ಹತೆ, ವಯೋಮಿತಿ ಹುದ್ದೆಗಳ ಸಂಖ್ಯೆ ಮತ್ತು ಇತರೆ ಮಾಹಿತಿಯನ್ನು ಈ ಕಚೇರಿಯ ಸೂಚನಾ ಫಲಕ ಹಾಗೂ ಆರೋಗ್ಯ ನಿರ್ದೇಶನಾಲಯದ ವೆಬ್‌ಸೈಟ್‌ https://nhm.karnataka.gov.in/285URIನಲ್ಲಿ ಪಡೆದುಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ. https://hassan.nic.in/en/notice category/recruitment/https://hassan.nic.in/en/ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್‌ 15 ಕೊನೆಯ ದಿನಾಂಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ: ಸರ್ಕಾರದ ಮಧ್ಯಸ್ಥಿಕೆಗೆ ಬಿ ಕೆ ಹರಿಪ್ರಸಾದ್‌ ಆಗ್ರಹ

“ಪ್ರತಿ ದಿನ ಕೆಲಸದ ವೇಳೆಯಲ್ಲಿ ಈ ಕಚೇರಿಯಲ್ಲಿ ಗುತ್ತಿಗೆ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇರ ಸಂದರ್ಶನ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕಚೇರಿಯಲ್ಲಿ ನವೆಂಬರ್‌ 28ರಂದು ಶುಶ್ರೂಷಕಿಯರಿಗೆ, ನವೆಂಬರ್‌ 30ರಂದು ಉಳಿದ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...