ಹಾಸನ | ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್, ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ!

Date:

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಹಾಸನ ಜಿಲ್ಲಾ ಪೊಲೀಸ್‌ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಹಾಸನ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದು, “2025ನೇ ಹೊಸವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಅಪರಾಧಿಗಳು ಸಾರ್ವಜನಿಕ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಹ್ಯಾಕ್ ಮಾಡುವ ಸಾದ್ಯತೆ ಇರುತ್ತದೆ. ಬಳಿಕ ಹ್ಯಾಕ್ ಮಾಡಿದ ಮೊಬೈಲ್ ಮೂಲಕ ಸಾರ್ವಜನಿಕ ಜಾಲತಾಣಗಳನ್ನು ಬಳಸಿ ಹಾನಿಕಾರಕ ಲಿಂಕ್ ಹಾಗೂ ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.‌

ಪೊಲೀಸ್‌ ಪ್ರಕಟಣೆ

“ಸಾರ್ವಜನಿಕರು ಈ ರೀತಿಯ ಲಿಂಕ್‌ಗಳು ಹಾಗೂ ಎಪಿಕೆ ಫೈಲ್‌ಗಳನ್ನು ಹೊಸ ವರ್ಷದ ಶುಭಾಷಯಗಳ ಲಿಂಕ್‌ ಜತೆಗೆ ಸ್ವೀಕರಿಸಿಕೊಂಡಲ್ಲಿ ಅವುಗಳನ್ನು ಕೂಡಲೇ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಸದರಿ ಹಾನಿಕಾರಕ ಲಿಂಕ್‌ ಮತ್ತು ಎಪಿಕೆ ಫೈಲ್‌ಗಳನ್ನು ಯಾರೊಬ್ಬರಿಗೂ ಶೇರ್‌ ಮಾಡದಿರಿ. ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾವುದಾದರೂ ವಾಟ್ಸ್ಯಾಪ್ ಗ್ರೂಪ್‌ಗಳಿಗೆ ನಿಮ್ಮ ಪರಿಚಿತ ವಾಟ್ಸ್ಯಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದ್ದಲ್ಲಿ ಸದರಿ ಗುಂಪಿನ ಅಡ್ಮಿನ್‌ಗಳು ಅಂತಹ ಸಂದೇಶಗಳನ್ನು ಪರಿಶೀಲನೆ ಮಾಡಿ ಡಿಲೀಟ್‌ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ದಾಳಿ

ಯಾವುದೇ ರೀತಿಯ ಸೈಬರ್‌ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930ಗೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...